ಇಂಡೋ ಪ್ರೀಮಿಯರ್‌ ಲೀಗ್‌ ಕಬಡ್ಡಿ ಆಯ್ಕೆ


Team Udayavani, Feb 14, 2019, 12:30 AM IST

indo.jpg

ಬೆಂಗಳೂರು: ಪ್ರೊ ಕಬಡ್ಡಿಗೆ ಪ್ರತಿಸ್ಪರ್ಧೆಯಾಗಿ ರೂಪುಗೊಂಡಿರುವ ಇಂಡೋ ಇಂಟರ್‌ನ್ಯಾಶನಲ್‌ ಪ್ರೀಮಿಯರ್‌ ಲೀಗ್‌ ಕಬಡ್ಡಿ ಆಯ್ಕೆ ಪ್ರಕ್ರಿಯೆಗೆ ರಾಜ್ಯದ ವಿವಿಧ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ನ್ಯೂ ಕಬಡ್ಡಿ ಫೆಡರೇಷನ್‌ ಕಾರ್ಯದರ್ಶಿ ಪ್ರಸಾದ್‌ ಬಾಬು ತಿಳಿಸಿದ್ದಾರೆ.

ವಿದ್ಯಾನಗರ ಕ್ರೀಡಾ ಹಾಸ್ಟೆಲ್‌ ಆವರಣದಲ್ಲಿ ಬುಧವಾರ ಇಂಡೋ ಇಂಟರ್‌ನ್ಯಾಶನಲ್‌ ಪ್ರೀಮಿಯರ್‌ ಲೀಗ್‌ ಕಬಡ್ಡಿ ಲೀಗ್‌ ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟಾರೆ 300ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು. ಇವರಲ್ಲಿ 200 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ 150 ಆಟಗಾರರು ಲೀಗ್‌ನಲ್ಲಿ ವಿವಿಧ ತಂಡಗಳ ಪರ ಆಡಲಿದ್ದಾರೆ. ಇನ್ನುಳಿದ 50 ಮಂದಿ ಹೆಚ್ಚುವರಿ ಆಟಗಾರರಾಗಿರುತ್ತಾರೆ.ಆಟಗಾರರನ್ನು ಎ, ಬಿ, ಸಿ ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ವಿಭಾಗದಲ್ಲಿ ಆಯ್ಕೆಯಾದ ಆಟಗಾರರಿಗೆ ಕ್ರಮವಾಗಿ 10, 8 ಹಾಗೂ 6 ಲಕ್ಷ ರೂ. ಮೊತ್ತವನ್ನು ನೀಡಲಾಗುತ್ತದೆ. ಹೆಚ್ಚುವರಿ ಆಟಗಾರರಿಗೆ ಕ್ರಮವಾಗಿ 4, 3 ಹಾಗೂ 2 ಲಕ್ಷ ರೂ. ನೀಡಲಾಗುತ್ತದೆ ಎಂದು ಪ್ರಸಾದ್‌ ಬಾಬು ತಿಳಿಸಿದರು.

ಆಟಗಾರರ ಹೆಸರು ಸದ್ಯಕ್ಕೆ ಗೌಪ್ಯ
ಸದ್ಯ ಇಂಡೋ ಇಂಟರ್‌ನ್ಯಾಶನಲ್‌ ಪ್ರೀಮಿಯರ್‌ ಲೀಗ್‌ ಕಬಡ್ಡಿ ಕೂಟಕ್ಕೆ ಆಯ್ಕೆಯಾಗಿರುವ ಆಟಗಾರರ ಹೆಸರನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ. ನ್ಯೂ ಕಬಡ್ಡಿ ಫೆಡರೇಷನ್‌ ವತಿಯಿಂದ ಆಯೋಜಿಸಲಾಗುವ ಮುಂದಿನ ವಿಶ್ವಕಪ್‌ ಕಬಡ್ಡಿ ಬಳಿಕ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ.

ಆಯ್ಕೆಯಾದ ಹೆಚ್ಚಿನವರು ರೈಲ್ವೇಸ್‌, ಪೊಲೀಸ್‌ ಹಾಗೂ ಸರ್ವಿಸಸ್‌ ಆಟಗಾರರಾಗಿದ್ದಾರೆ ಎನ್ನುವ ಸುಳಿವನ್ನು ಮಾತ್ರ ಪ್ರಸಾದ್‌ ಬಾಬು ನೀಡಿದರು. ಆಯ್ಕೆ ಪ್ರಕ್ರಿಯೆ 12 ಮಂದಿ ಮಾಜಿ ಕ್ರೀಡಾಪಟುಗಳ ಸಮ್ಮುಖದಲ್ಲಿ ಪಾರದರ್ಶಕವಾಗಿ ನಡೆದಿದೆ. ಆಟಗಾರರ ಜತೆ 100 ಮಂದಿ ರೆಫ್ರಿಗಳನ್ನೂ ಆಯ್ಕೆ ಮಾಡಲಾಗಿದೆ. ಇದರಲ್ಲಿ 27 ಮಂದಿ ರೆಫ್ರಿಗಳು ರಾಜ್ಯದವರಾಗಿದ್ದಾರೆ ಎಂದು ಪ್ರಸಾದ್‌ ಬಾಬು ತಿಳಿಸಿದರು.

18 ಪ್ರೊ ಕಬಡ್ಡಿ ಆಟಗಾರರು?
ಇಂಡೋ ಇಂಟರ್‌ನ್ಯಾಶನಲ್‌ ಪ್ರೀಮಿಯರ್‌ ಕಬಡ್ಡಿ ಲೀಗ್‌ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ರಾಜ್ಯಗಳಿಂದ 18 ಪ್ರೊ ಕಬಡ್ಡಿ ಆಟಗಾರರು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಆಟಗಾರರು ಯಾರು ಎನ್ನುವುದು ಬಹಿರಂಗಗೊಂಡಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.