ಜ್ಯಾಂಟಿ ರೋಡ್ಸ್ ಪ್ರಕಾರ ಈ ಭಾರತೀಯ ವಿಶ್ವದ ಬೆಸ್ಟ್ ಫೀಲ್ಡರ್ 


Team Udayavani, Feb 14, 2019, 7:54 AM IST

untitled-1.jpg

ಜೋಹಾನ್ಸ್ ಬರ್ಗ್: ತನ್ನ ಕ್ಷೇತ್ರ ರಕ್ಷಣೆಯಿಂದಲೇ ಹಲವಾರು ಪಂದ್ಯಗಳನ್ನು ಗೆಲ್ಲಿಸಿದ ದಕ್ಷಿಣ ಆಫ್ರಿಕಾದ ಜ್ಯಾಂಟಿ ರೋಡ್ಸ್ ಈಗ ತಾನು ಕಂಡ ವಿಶ್ವದ ಶ್ರೇಷ್ಠಫೀಲ್ಡರ್ ಗಳನ್ನು ಹೆಸರಿಸಿದ್ದಾರೆ. ಅದರಲ್ಲಿ ಭಾರತೀಯ ಮೊದಲ ಸ್ಥಾನ ಪಡೆದಿದ್ದಾರೆ.

ಜ್ಯಾಂಟಿ ರೋಡ್ಸ್ 30 ಗಜಗಳ ಅಂತರದೊಳಗೆ ಹೆಚ್ಚಾಗಿ ಕ್ಷೇತ್ರರಕ್ಷಣೆ ಮಾಡುತ್ತಿದ್ದ ಕಾರಣ ಅಂತಹ ಫೀಲ್ಡರ್ ಗಳ ಮೇಲೆ ಜ್ಯಾಂಟಿ ಒಲವು ತೋರಿಸಿದ್ದಾರೆ. ಜ್ಯಾಂಟಿ ಹೆಸರಿಸಿದ ಟಾಪ್ ಐದು ಫೀಲ್ಡರ್ ಗಳಲ್ಲಿ ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆಂಡ್ರೂ ಸೈಮಂಡ್ಸ್ ಗೆ ದಕ್ಕಿದೆ. ಸೈಮಂಡ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟು 109 ಕ್ಯಾಚ್ ಪಡೆದಿದ್ದರು.

ಜ್ಯಾಂಟಿ ರೋಡ್ಸ್ ಪ್ರಕಟಿಸಿದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ತನ್ನದೇ ನೆಲದ ಆಟಗಾರ ಹರ್ಷಲ್ ಗಿಬ್ಸ್ ಅವರಿಗಿದೆ. ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರನಾಗಿದ್ದ ಗಿಬ್ಸ್ ಈಗ ವೀಕ್ಷಕ ವಿವರಣೆಕಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಗಿಬ್ಸ್ ಹಿಡಿದಿರುವ ಕ್ಯಾಚ್ ಗಳ ಸಂಖ್ಯೆ 210. ಆದರೆ 1999ರ ವಿಶ್ವಕಪ್ ಕ್ವಾಟರ್ ಫೈನಲ್ ನಲ್ಲಿ ಆಸೀಸ್ ನಾಯಕ ಸ್ಟೀವ್ ವಾ ಕ್ಯಾಚ್ ಕೈ ಚೆಲ್ಲಿ ಪಂದ್ಯ ಚೆಲ್ಲಬೇಕಾಯಿತು.


ರೋಡ್ಸ್ ಫೀಲ್ಡರ್ ಪಟ್ಟಿಯ ಮೂರನೇ ಸ್ಥಾನ ಇಂಗ್ಲೆಂಡ್ ಆಟಗಾರ ಪೌಲ್ ಕಾಲಿಂಗ್ ವುಡ್ ಗೆ. ಇಂಗ್ಲೆಂಡ್ ಮಾಜಿ ನಾಯಕ ಕಾಲಿಂಗ್ ವುಡ್ ಗಲ್ಲಿಯಲ್ಲಿ ಉತ್ತಮ ಕ್ಷೇತ್ರರಕ್ಷಣೆ ಮಾಡುತ್ತಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 204 ಕ್ಯಾಚ್ ಗಳು ಕಾಲಿಂಗ್ ವುಡ್ ಬೊಗಸೆ ಸೇರಿವೆ.

ರೋಡ್ಸ್ ಪ್ರಕಾರ ವಿಶ್ವದ ಎರಡನೇ ಅತ್ಯುತ್ತಮ ಫೀಲ್ಡರ್ ದಕ್ಷಿಣ ಆಫ್ರಿಕಾದ ಅದ್ಭುತ ಆಟಗಾರ ಎ.ಬಿ. ಡಿವಿಲಿಯರ್ಸ್. ಡಿವಿಲಿಯರ್ಸ್ ಮೈದಾನದ ಯಾವುದೇ ಸ್ಥಲದಲ್ಲಿ ಫೀಲ್ಡಿಂಗ್ ಮಾಡಿದರೂ ಅದ್ಭುತ ಫೀಲ್ಡಿಂಗ್ ಮಾಡುವ ಆಟಗಾರ. ಕಳೆದ ಸಾಲಿನ ಐಪಿಎಲ್ ನಲ್ಲಿ ಡಿವಿಲಿರ‍್ಸ್ ಹಾರಿ ಹಿಡಿದ ಕ್ಯಾಚ್ ಎಲ್ಲರ ಮನ ಸೆಳೆದಿತ್ತು. ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಡಿವಿಲಿಯರ್ಸ್  ಹಿಡಿದಿರುವ ಕ್ಯಾಚ್ ಗಳು ಬರೋಬ್ಬರಿ 423.
ಜ್ಯಾಂಟಿ ರೋಡ್ಸ್ ಪ್ರಕಾರ ವಿಶ್ವದ ಬೆಸ್ಟ್ ಫೀಲ್ಡರ್ ಭಾರತೀಯ ಆಟಗಾರ ಸುರೇಶ್ ರೈನಾ. ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಬಂದಾಗಿನಿಂದ ನೋಡುತ್ತಿದ್ದೇನೆ. ಆತ ಯಾವತ್ತಿಗೂ ನನ್ನ ನೆಚ್ಚಿನ ಫೀಲ್ಡರ್ ಎಂದಿದ್ದಾರೆ. ಆತ ಯಾವುದೇ ಮೈದಾನದಲ್ಲಿ ಯಾವುದೇ ಕ್ಷಣದಲ್ಲಿ ಡೈವ್ ಹೊಡೆಯಲು ಹಿಂಜರೆಯುವುದಿಲ್ಲ ಎಂದು ರೈನಾರನ್ನು ಹಾಡಿ ಹೊಗಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೈನಾ ಇದುವರೆಗೆ 159 ಕ್ಯಾಚ್ ಗಳನ್ನು ಹಿಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರೈನಾ ನನ್ನನ್ನು ಈ ಸ್ಥಾನಕ್ಕೆ ಹೆಸರಿಸಿದ್ದಕ್ಕೆ ಧನ್ಯವಾದಗಳು. ನಾನು ಯಾವಾಗಲೂ ನಿಮ್ಮಿಂದ ಪ್ರಭಾವಿತನಾಗಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.