ಲಕ್ಷ್ಮಣ್ ಪ್ರಕಾರ ಭಾರತ ಬಿಟ್ಟರೆ ವಿಶ್ವಕಪ್ ಗೆಲ್ಲುವ ದೇಶ ಯಾವುದು?
Team Udayavani, Feb 21, 2019, 7:01 AM IST
ದುಬೈ: ಕ್ರಿಕೆಟ್ ಲೋಕದ ಒಲಿಂಪಿಕ್ಸ್ ಏಕದಿನ ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದ್ದು, ಯಾರು ಈ ಬಾರಿಯ ಪ್ರಶಸ್ತಿ ಗೆಲ್ಲಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಭಾರತದ ಮಾಜಿ ಆಟಗಾರ ವಿ ವಿ ಎಸ್ ಲಕ್ಷ್ಮಣ್ ತಮ್ಮ ಪ್ರಕಾರ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳನ್ನು ಹೆಸರಿಸಿದ್ದಾರೆ.
ದುಬೈನಲ್ಲಿ ನಡೆದ ಡಬ್ಲ್ಯೂಐಓಎನ್ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ವಿ ವಿ ಎಸ್ ಲಕ್ಷ್ಮಣ್, ಹಲವು ವರ್ಷಗಳಿಂದ ಸ್ಥಿರ ನಿರ್ವಹಣೆ ನೀಡುತ್ತಿರುವ ಭಾರತ ಮತ್ತು ಆತಿಥೇಯ ಇಂಗ್ಲೆಂಡ್ ತಂಡಗಳು ಈ ವರ್ಷದ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳು ಎಂದು ಅಭಿಪ್ರಾಯಪಟ್ಟರು.
ಏಕದಿನ ಕ್ರಿಕೆಟ್ ನಲ್ಲಿ ವಿಶ್ವಕಪ್ ಗಿಂತ ದೊಡ್ಡದು ಯಾವುದೂ ಇಲ್ಲ. ಕಳೆದ ಒಂದು ವರ್ಷಗಳಿಂದ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಭಾರತ ಒಂದು ಸಂಪೂರ್ಣ ತಂಡ. ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಅವರದೇ ನೆಲದಲ್ಲಿ ಸರಣಿ ಗೆದ್ದಿರುವುದು ಕಡಿಮೆ ಸಾಧನೆಯೇನಲ್ಲ. ಸದ್ಯ ಭಾರತ ತಂಡದ ದೊಡ್ಡ ಆಸ್ತಿಯೆಂದರೆ ಬೌಲರ್ ಗಳು. ಅದರಲ್ಲೂ ವೇಗದ ಬೌಲರ್ ಗಳು ಅಗತ್ಯ ಸಮಯದಲ್ಲಿ ವಿಕೆಟ್ ಕಬಳಿಸುವುದರಿಂದ ವಿರಾಟ್ ಬಳಗಕ್ಕೆ ವಿಶ್ವಕಪ್ ಗೆಲ್ಲುವ ಎಲ್ಲಾ ಅವಕಾಶಗಳಿವೆ ಎಂದು ಭಾರತದ ವೆರಿ ವೆರಿ ಸ್ಪೆಷಲ್ ಆಟಗಾರ ಅಭಿಪ್ರಾಯ ಪಟ್ಟರು.
ಅಂಬಾಟಿ ರಾಯುಡು ಈ ವಿಶ್ವಕಪ್ ನಲ್ಲಿ ನಾಲ್ಕನೇ ಸ್ಥಾನದಲ್ಲಿ ಆಡಬೇಕು. ರಾಯುಡು ನ್ಯೂಜಿಲ್ಯಾಂಡ್ ವಿರುದ್ಧ ಅಗತ್ಯ ಸಮಯದಲ್ಲಿ ಆಡಿದ 90 ರನ್ ಇನ್ನಿಂಗ್ಸ್ ತಂಡದಲ್ಲಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದರು. ಟೀಂ ಇಂಡಿಯಾದ ಬಹುಚರ್ಚಿತ ವಿಷಯ, ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಕೇಳಿದಾಗ ಲಕ್ಷ್ಮಣ್, ಧೋನಿ ಐದನೇ ಕ್ರಮಾಂಕದಲ್ಲಿ ಆಡಬೇಕು. ಧೋನಿ ಇನ್ನಿಂಗ್ಸ್ ಕಟ್ಟುವ ಮತ್ತು ಕೊನೆಯಲ್ಲಿ ಉತ್ತಮ ಫಿನಿಶರ್ ಆಗಿ ಕೆಲಸ ಮಾಡುತ್ತಾರೆ . ಹಾರ್ದಿಕ್ ಪಾಂಡ್ಯ ಮತ್ತು ಕೇದಾರ್ ಜಾಧವ್ ಉತ್ತಮವಾಗಿ ಆಡುತ್ತಿರುವುದರಿಂದ ನನ್ನ ಪ್ರಕಾರ ವಿಶ್ವಕಪ್ ನಲ್ಲಿ ಆಡುವ ಭಾರತ ತಂಡ ಸಿದ್ದವಾಗಿದೆ ಎಂದರು.
ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಆಟ?: ಇತ್ತೀಚಿಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಉಗ್ರ ದಾಳಿಯ ನಂತರದ ಬೆಳವಣಿಗೆಯಲ್ಲಿ ವಿಶ್ವಕಪ್ ನಲ್ಲಿ ಭಾರತೀಯ ತಂಡ ಪಾಕಿಸ್ಥಾನ ವಿರುದ್ಧ ಆಟವಾಡಬಾರದು ಎಂಬ ಮಾತು ಕೇಳಿ ಬರುತ್ತಿರುವ ಬಗ್ಗೆ ಕೇಳಿದಾಗ ಲಕ್ಷ್ಮಣ್, ದೇಶದಲ್ಲಿ ಇಂತಹ ಘಟನೆಗಳು ನಡೆದಾಗ ನಮ್ಮ ಮನಸ್ಸಿಗೆ ಕ್ರಿಕೆಟ್ ನ ವಿಷಯ ಕೊನೆಯದಾಗಿ ಬರುತ್ತದೆ. ನಾವು ಭಯೋತ್ಪಾದನೆಯ ವಿರುದ್ದ ಸಮರ ಸಾರ ಬೇಕಿದೆ. ಮಡಿದ ಯೋಧರ ಪರಿವಾರದ ಪರವಾಗಿ ನಿಲ್ಲಬೇಕಿದೆ. ಕ್ರಿಕೆಟ್ ನ ಬಗ್ಗೆ ಕೊನೆಯದಾಗಿ ಚಿಂತಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ