ಭಾರತ-ಇಂಗ್ಲೆಂಡ್‌ ವನಿತಾ ಏಕದಿನ ಸರಣಿ ;ಮಿಥಾಲಿ ಪಡೆಗೆ ಭಾರೀ ಸವಾಲು


Team Udayavani, Feb 22, 2019, 12:30 AM IST

95.jpg

ಮುಂಬಯಿ: ನ್ಯೂಜಿಲ್ಯಾಂಡ್‌ನ‌ಲ್ಲಿ ಏಕದಿನ ಸರಣಿ ಗೆದ್ದ ಸಂಭ್ರಮದಲ್ಲಿರುವ ಭಾರತದ ವನಿತಾ ತಂಡ ತವರಿನಲ್ಲಿ ಬಲಿಷ್ಠ ಇಂಗ್ಲೆಂಡ್‌ ವಿರುದ್ಧ ಸೆಣಸಲು ಸಜ್ಜಾಗಿದೆ. ಮುಂಬಯಿಯ ‘ವಾಖೇಂಡೆ ಸ್ಟೇಡಿಯಂ’ ನಲ್ಲಿ ಶುಕ್ರವಾರ 3 ಪಂದ್ಯಗಳ ಸರಣಿಯ ಮೊದಲ ಮುಖಾಮುಖೀ ನಡೆಯಲಿದೆ. 2021ರ ವಿಶ್ವಕಪ್‌ಗೆ ನೇರ ಪ್ರವೇಶ ಪಡೆದುಕೊಳ್ಳಲು ಭಾರತಕ್ಕೆ ಇದು ಮಹತ್ವದ ಸರಣಿ ಆಗಿದೆ. 2020ರ ವರೆಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರ 4ರಲ್ಲೇ ಉಳಿದುಕೊಳ್ಳಬೇಕಾದ ಒತ್ತಡವಿದೆ. ಹೀಗಾಗಿ ಮುಂದಿನ ಎಲ್ಲ ಪಂದ್ಯಗಳೂ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿವೆ. 

ಕಳೆದ ವರ್ಷ ಪ್ರವಾಸಿ ಇಂಗ್ಲೆಂಡ್‌ ತಂಡ ವನ್ನು ಮಿಥಾಲಿ ಪಡೆ 2-1 ಅಂತರದಿಂದ ಸೋಲಿಸಿ ಸರಣಿ ಕೈವಶ ಮಾಡಿಕೊಂಡಿತ್ತು. ಹೀಗಾಗಿ ತವರಿನಲ್ಲಿ ಬಲಿಷ್ಠವಾಗಿರುವ‌ ಭಾರತ ಮತ್ತೂಮ್ಮೆ ಸರಣಿ ಕೈವಶ ಮಾಡಿಕೊಂಡೀತು ಎಂಬುದೊಂದು ನಿರೀಕ್ಷೆ. ಆದರೆ ಸವಾಲು ಸುಲಭದ್ದಲ್ಲ.

ತಂಡಕ್ಕೆ ಮಿಥಾಲಿ ಬಲ
ನಾಯಕಿ ಮಿಥಾಲಿ ರಾಜ್‌ ಟಿ20 ತಂಡ ದಿಂದ ಹೊರಗುಳಿದ್ದರೂ ಏಕದಿನದಲ್ಲಿ ಅತ್ಯು ತ್ತಮ ಫಾರ್ಮ್ನಲ್ಲಿದ್ದಾರೆ. ಇತ್ತೀಚೆಗಷ್ಟೇ 200 ಪಂದ್ಯಗಳನ್ನಾಡಿ ದಾಖಲೆ ಬರೆದ ಮಿಥಾಲಿ ನಾಯಕಿಯ ಆಟವನ್ನು ಮುಂದುವರಿಸುವ ನಿರೀಕ್ಷೆ ಎಲ್ಲರದೂ. ಆದರೆ ಭಾರತದ ಬ್ಯಾಟಿಂಗ್‌ ಇನ್‌ಫಾರ್ಮ ಆರಂಭಿಕರಾದ ಸ್ಮತಿ ಮಂಧನಾ ಮತ್ತು ಜೆಮಿಮಾ ರೋಡ್ರಿಗಸ್‌ ಅವರನ್ನು ಹೆಚ್ಚು ಅವಲಂಬಿಸಿದೆ. ಇವರಿಬ್ಬರೂ ನ್ಯೂಜಿ ಲ್ಯಾಂಡ್‌ ಸರಣಿಯಲ್ಲಿ ಭಾರತದ ಗೆಲುವಿನ ರೂವಾರಿಗಳಾಗಿದ್ದರು. ಇವರಿಗೆ ಉಳಿದ ಆಟಗಾರ್ತಿಯರಿಂದಲೂ ಸೂಕ್ತ ಬೆಂಬಲ ಸಿಗಬೇಕಾದುದು ಸದ್ಯದ ಅಗತ್ಯ.

ಉಪನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಗಾಯಾಳಾಗಿ ಕೂಟದಿಂದ ಹೊರಬಿದ್ದಿದ್ದಾರೆ. ಆದರೆ ಇದರಿಂದ ತಂಡಕ್ಕೆ ಹೆಚ್ಚಿನ ಸಮಸ್ಯೆ ಕಾಡಲಿಕ್ಕಿಲ್ಲ. ಇತ್ತೀಚೆಗೆ ಕೌರ್‌ ಫಾರ್ಮ್ ನಲ್ಲಿಲ್ಲದಿರುವುದೇ ಇದಕ್ಕೆ ಕಾರಣ. ಕೌರ್‌ ಬದಲಿಗೆ ಹರ್ಲಿನ್‌ ಡಿಯೋಲ್‌ ಸ್ಥಾನ ಸಂಪಾದಿಸಿದ್ದಾರೆ. 

ಮಧ್ಯಮ ಕ್ರಮಾಂಕದ ವೈಫ‌ಲ್ಯ
ಭಾರತ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಸಮಸ್ಯೆಗಳಿಂದ ಕೂಡಿದೆ. ಮಂಧನಾ, ರೋಡ್ರಿಗಸ್‌ ಬಳಿಕ ಯಾವುದೇ ಆಟಗಾರ್ತಿ ಯರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುತ್ತಿಲ್ಲ. ಇದಕ್ಕೆ ನ್ಯೂಜಿಲ್ಯಾಂಡ್‌ ಎದುರಿನ ಕೊನೆಯ ಪಂದ್ಯ ಉತ್ತಮ ಉದಾಹರಣೆ. ಅಲ್ಲಿ ಭಾರತ ಕೇವಲ 149ಕ್ಕೆ ಅಲೌಟ್‌ ಆಗಿತ್ತು. 
ಬೌಲಿಂಗ್‌ ವಿಭಾಗದಲ್ಲಿ ಆಲ್‌ರೌಂಡರ್‌ ಜೂಲನ್‌ ಗೋಸ್ವಾಮಿ ತಂಡದ ಅನು ಭವಿ ಆಟಗಾರ್ತಿ. 
ಉಳಿದಂತೆ ಶಿಖಾ ಪಾಂಡೆ, ಮಾನ್ಸಿ ಜೋಶಿ, ದೀಪ್ತಿ ಶರ್ಮ, ಏಕ್ತಾ ಬಿಷ್ಟಾ ಮೋಡಿ ಮಾಡಲು ಸಿದ್ಧರಾಗಿದ್ದಾರೆ.

ಇಂಗ್ಲೆಂಡ್‌ ಹೆಚ್ಚು ಬಲಿಷ್ಠ 
ಇಂಗ್ಲೆಂಡ್‌ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿದ್ದು, ಅಭ್ಯಾಸ ಪಂದ್ಯದ ವೇಳೆ ಒಂದು ಕಂತಿನ ಸಾಮರ್ಥ್ಯ ತೋರ್ಪ ಡಿಸಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಡೇನಿಯಲ್‌ ವ್ಯಾಟ್‌ ಹಾಗೂ ಹೀತರ್‌ ನೈಟ್‌ ಈ ಸರಣಿಯ ಪ್ರಮುಖ ಆಕರ್ಷಣೆಯಾಗ ಬಹುದು. ಆಲ್‌ರೌಂಡರ್‌ ಸೋಫಿ ಎಕಲ್‌ಸ್ಟೋನ್‌, ವೇಗಿ ಅನ್ಯಾ ಶ್ರಬೋಲ್ಸ್‌, ಮಧ್ಯಮ ವೇಗಿ ನಥಾಲಿ ಶಿವರ್‌ ಬೌಲಿಂಗ್‌ ಅಪಾಯಕಾರಿ ಯಾದೀತು.

ಭಾರತ 
ಮಿಥಾಲಿ ರಾಜ್‌ (ನಾಯಕಿ), ಸ್ಮತಿ ಮಂಧನಾ, ಜೆಮಿಮಾ ರೋಡ್ರಿಗಸ್‌, ದೀಪ್ತಿ ಶರ್ಮ, ತನಿಯಾ ಭಾಟಿಯ, ಜೂಲನ್‌ ಗೋಸ್ವಾಮಿ, ಆರ್‌. ಕಲ್ಪನಾ, ಮೋನಾ ಮೆಶ್ರಾಮ್‌, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್‌, ಪೂನಮ್‌ ಯಾದವ್‌, ಶಿಖಾ ಪಾಂಡೆ, ಮಾನ್ಸಿ ಜೋಶಿ, ಪೂನಮ್‌ ರಾವತ್‌, ಹರ್ಲಿನ್‌ ಡಿಯೋಲ್‌.

ಇಂಗ್ಲೆಂಡ್‌ 
ಹೀತರ್‌ ನೈಟ್‌ (ನಾಯಕಿ), ಟಾಮಿ ಬೇಮೌಂಟ್‌, ಕ್ಯಾಥರಿನ್‌ ಬ್ರಂಟ್‌, ಕೇಟ್‌ ಕ್ರಾಸ್‌, ಸೋಫಿಯಾ ಡಂಕ್ಲಿ, ಸೋಫಿ ಎಕಲ್‌ಸ್ಟೋನ್‌, ಜಾರ್ಜಿಯಾ ಎಲ್ವಿಸ್‌, ಎಲೆಕ್ಸ್‌ ಹಾಟ್ಲಿ, ಆ್ಯಮಿ ಜೋನ್ಸ್‌, ಲಾರಾ ಮಾರ್ಷ್‌, ನಥಾಲಿ ಶಿವರ್‌, ಅನ್ಯಾ ಶ್ರಬೋಲ್ಸ್‌, ಸಾರಾ ಟಯ್ಲರ್‌, ಲಾರೆನ್‌ ವಿನ್‌ಫೀಲ್ಡ್‌.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.