ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಭಾರತ ಸರಣಿ ಉತ್ತಮ ಅವಕಾಶ: ಫಿಂಚ್
Team Udayavani, Feb 24, 2019, 5:57 AM IST
ವಿಶಾಖಪಟ್ಟಣ: ಭಾರತದ ಎದುರು ರವಿವಾರದಿಂದ ಆರಂಭವಾಗಲಿರುವ ಟಿ-ಟ್ವೆಂಟಿ ಸರಣಿ ಮತ್ತು ಏಕದಿನ ಸರಣಿ ಆಸೀಸ್ ಆಟಗಾರರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಭದ್ರ ಪಡಿಸಲು ಉತ್ತಮ ಅವಕಾಶ ಎಂದು ಆಸ್ಟ್ರೇಲಿಯಾ ನಿಗದಿತ ಓವರ್ ಕ್ರಿಕೆಟ್ ನ ನಾಯಕ ಆರೋನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ರಾತ್ರಿ ವಿಶಾಖಪಟ್ಟಣದಲ್ಲಿ ನಡೆಯಲಿರುವ ಮೊದಲ ಚುಟುಕು ಪಂದ್ಯದ ಮುನ್ನಾ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸೀಸ್ ಆರಂಭಿಕ ಆಟಗಾರ, ಇದೇ ವರ್ಷ ಮೇ ಅಂತ್ಯದಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ನ ಮಹಾಕೂಟ ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಇನ್ನು ಕೂಡಾ ಅಂತಿಮವಾಗಿಲ್ಲ. ಸದ್ಯ ನನ್ನ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲು ಡಾರ್ಸಿ ಶಾರ್ಟ್, ಉಸ್ಮಾನ್ ಖ್ವಾಜಾ ಮತ್ತು ಮಾರ್ಕಸ್ ಸ್ಟೋಯಿನಸ್ ಸ್ಪರ್ಧೆಯಲ್ಲಿದ್ದಾರೆ. ಅವರೆಲ್ಲರಿಗೂ ಭಾರತ ಸರಣಿ ಉತ್ತಮ ಅವಕಾಶ ಎಂದರು.
ಕ್ರಿಕೆಟ್ ನಿಂದ ಒಂದು ವರ್ಷದ ಮಟ್ಟಿಗೆ ನಿಷೇಧ ಶಿಕ್ಷೆ ಅನುಭವಿಸುತ್ತಿರುವ ಮಾಜಿ ನಾಯಕ ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ರ ಶಿಕ್ಷೆ ಮಾರ್ಚ್ ೨೯ ಕ್ಕೆ ಮುಗಿಯಲಿದ್ದು ಅವರಿಬ್ಬರು ತಂಡಕ್ಕೆ ಸೇರ್ಪಡೆಯಾದರೆ ತಂಡಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದರು. ಆದರೆ ಸ್ಮಿತ್ ಮತ್ತು ವಾರ್ನರ್ ಇಬ್ಬರೂ ಮೊಣಕೈ ಗಾಯದಿಂದ ಬಳಲುತ್ತಿದ್ದು ವಿಶ್ವಕಪ್ ವೇಳೆ ಗುಣಮುಖರಾಗಿ ತಂಡ ಸೇರಿ ಕೊಳ್ಳಲಿದ್ದಾರೆ ಎಂದು ಫಿಂಚ್ ವಿಶ್ವಾಸ ವ್ಯಕ್ತಪಡಿಸಿದರು.
ಒಂದು ವೇಳೆ ವಾರ್ನರ್ ಮತ್ತು ಸ್ಮಿತ್ ವಿಶ್ವಕಪ್ ಗೆ ಲಭ್ಯವಾಗದೇ ಹೋದಲ್ಲಿ ಬೇರೆ ಯುವ ಆಟಗಾರರಿಗೆ ಅವಕಾಶ ಸಿಗಲಿದೆ. ಹಾಗಾಗಿ ಯುವ ಆಟಗಾರರು ಭಾರತ ಸರಣಿಯಲ್ಲೇ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್