ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ನಡಾಲ್‌, ಫೆಡರರ್‌


Team Udayavani, Mar 15, 2019, 12:55 AM IST

ap3142019000045a.jpg

ಇಂಡಿಯನ್‌ ವೆಲ್ಸ್‌: ಮಾಜಿ ಚಾಂಪಿಯನ್‌ಗಳಾದ ರಫೆಲ್‌ ನಡಾಲ್‌, ರೋಜರ್‌ ಫೆಡರರ್‌ “ಇಂಡಿಯನ್‌ ವೆಲ್ಸ್‌’ ಟೆನಿಸ್‌ ಕೂಟದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ವನಿತೆಯರ ವಿಭಾಗದಲ್ಲಿ ಬಿಯಾಂಕಾ ಆ್ಯಂಡ್ರಿಸ್ಕೂ, ಎಲಿನಾ ಸ್ವಿಟೋಲಿನಾ ಸೆಮಿಫೈನಲ್‌ಗೆ ಲಗ್ಗೆ ಹಾಕಿದ್ದಾರೆ.

ಇಲ್ಲಿ ನಡೆದ ಪುರುಷರ ವಿಭಾಗದ ಪಂದ್ಯದಲ್ಲಿ ನಡಾಲ್‌ ಅರ್ಹತಾ ಆಟಗಾರ, ಸರ್ಬಿಯಾದ ಫಿಲಿಪ್‌ ಕ್ರೆಜಿವೋನಿಕ್‌ ವಿರುದ್ಧ ಒಂದು ಗಂಟೆ, 26 ನಿಮಿಷಗಳ ಹೋರಾಟ ನಡೆಸಿ 6-3, 6-4 ಅಂತರದಿಂದ ಜಯಿಸಿದರು.

2007, 2008 ಹಾಗೂ 2013ರಲ್ಲಿ ಪ್ರಶಸ್ತಿ ಜಯಿಸಿದ ನಡಾಲ್‌ ಕಳೆದ 3 ವರ್ಷಗಳಲ್ಲಿ ಎಂಟರ ಹಂತ ಪ್ರವೇಶಿಸಿದ್ದು ಇದೇ ಮೊದಲು. ಮುಂದಿನ ಪಂದ್ಯದಲ್ಲಿ ಅವರು ರಶ್ಯದ ಕರೆನ್‌ ಕಶನೋವ್‌ ಅವರನ್ನು ಎದುರಿಸಲಿದ್ದಾರೆ. ಕಶನೋವ್‌ 9ನೇ ರ್‍ಯಾಂಕಿನ ಜಾನ್‌ ಇಸ್ನರ್‌ ವಿರುದ್ಧ 6-4, 7-6 (7-1) ಸೆಟ್‌ಗಳಿಂದ ಜಯ ಸಾಧಿಸಿದರು.

6ನೇ ಪ್ರಶಸ್ತಿ ನಿರೀಕ್ಷೆಯಲ್ಲಿರುವ ರೋಜರ್‌ ಫೆಡರರ್‌ ಬ್ರಿಟನ್ನಿನ ಕೈಲ್‌ ಎಡ್ಮಂಡ್‌ ಅವರನ್ನು ಕೇವಲ 64 ನಿಮಿಷಗಳಲ್ಲಿ 6-1, 6-4 ನೇರ ಸೆಟ್‌ಗಳಿಂದ ಸೋಲಿಸಿದರು. ಇತ್ತೀಚೆಗಷ್ಟೇ 100ನೇ ಪ್ರಶಸ್ತಿ ಗೆದ್ದ ಉತ್ಸಾಹದಲ್ಲಿರುವ ಫೆಡರರ್‌ ಪೋಲೆಂಡ್‌ನ‌  ಹ್ಯೂಬರ್ಟ್‌ ಹರ್ಕಾಝ್ ಅವರನ್ನು ಎದುರಿಸಲಿದ್ದಾರೆ. ಅವರು ಡೆನ್ನಿಸ್‌ ಶಪೊವಲೋವ್‌ಗೆ 7-6 (7-3), 2-6, 6-3 ಅಂತರದಿಂದ ಆಘಾತವಿಕ್ಕಿದರು.ಒಂದು ವೇಳೆ ನಡಾಲ್‌, ಫೆಡರರ್‌ ಕ್ವಾರ್ಟರ್‌ ಪೈನಲ್‌ನಲ್ಲಿ ಗೆಲುವು ದಾಖಲಿಸಿದರೆ ಸೆಮಿಫೈನಲ್‌ನಲ್ಲಿ ಪರಸ್ಪರ ಎದುರಾಗುವ ಸಾಧ್ಯತೆ ಇದೆ.

*ಮಿಯೋಮಿರ್‌, ಥೀಮ್‌ಗೆ ಜಯ
ಸರ್ಬಿಯಾದ 19 ವರ್ಷದ ಮಿಯೋಮಿರ್‌ ಕೆಮನೋವಿಕ್‌ ಮೊದಲ ಬಾರಿಗೆ ಕೂಟದ ಎಂಟರ ಹಂತ ಪ್ರವೇಶಿಸಿದ್ದಾರೆ. ಇಲ್ಲಿ ಅವರ ಎದುರಾಳಿ ಕೆನಡಾದ ಮಿಲೋಸ್‌ ರಾನಿಕ್‌. ಜಪಾನಿನ ಯೊಶಿಹಿಟೊ ನಿಶಿಯೋಕ ಗಾಯಾಳಾಗಿ ಹಿಂದೆ ಸರಿದ ಕಾರಣ ಕೆಮನೋವಿಕ್‌ ಮುನ್ನಡೆಯುವಂತಾಯಿತು. ಕ್ರೊವೇಶಿಯದ 40 ವರ್ಷದ ಐವೊ ಕಾರ್ಲೊವಿಕ್‌ ಆಟ ಕೊನೆಗೊಂಡಿದೆ. ಅವರು 7ನೇ ಶ್ರೇಯಾಂಕಿಯ ಡೊಮಿನಿಕ್‌ ಥೀಮ್‌ ವಿರುದ್ಧ 4-6, 3-6 ಸೆಟ್‌ಗಳಿಂದ ಪರಾಭವಗೊಂಡರು.

ಮುಗುರುಜಾ ಆಟಕ್ಕೆ ಬ್ರೇಕ್‌
ಕೆನಡಾದ ಯುವ ಆಟಗಾರ್ತಿ ಬಿಯಾಂಕಾ ಆ್ಯಂಡ್ರಿಸ್ಕೂ ಎರಡು ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಗಾರ್ಬಿನ್‌ ಮುಗುರುಜಾ ಅವರನ್ನು 6-0, 6-1 ನೇರ ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಇಲ್ಲಿ ಉಕ್ರೇನಿನ ಎಲಿನಾ ಸ್ವಿಟೋಲಿನಾ ಅವರನ್ನು ಎದುರಿಸಲಿದ್ದಾರೆ. ಸ್ವಿಟೋಲಿನಾ ಜೆಕ್‌ ಗಣರಾಜ್ಯದ ಮಾರ್ಕೆಟಾ ವಾಂಡ್ರೋಸೊವಾ ಅವರನ್ನು 4-6, 6-4, 6-4ರಿಂದ ಹಿಮ್ಮೆಟ್ಟಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.