ಕೇಂದ್ರ ಸರಕಾರ ‘ನೋ’ ಅಂದ್ರೆ ನಾವು ವಿಶ್ವಕಪ್‌ ಆಡೋದಿಲ್ಲ: ಶಾಸ್ತ್ರಿ!


Team Udayavani, Mar 20, 2019, 11:52 AM IST

ravi-shastri-600.jpg

ಮುಂಬಯಿ: ಭಾರತ ಮತ್ತು ಪಾಕಿಸ್ಥಾನದ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟು ಮುಂಬರುವ ವಿಶ್ವಕಪ್‌ ಕ್ರಿಕೆಟ್‌ ಮೇಲೂ ಪರಿಣಾಮ ಬೀಳುವ ಸಾಧ್ಯತೆಗಳಿವೆಯೇ? ಭಾರತ ಕ್ರಿಕೆಟ್‌ ತಂಡದ ಮುಖ್ಯ ತರಬೇತದಾರ ರವಿಶಾಸ್ತ್ರಿ ಅವರ ಮಾತುಗಳನ್ನು ಕೇಳುತ್ತಿದ್ದರೆ ಆ ರೀತಿಯ ಅನುಮಾನಗಳು ಕ್ರಿಕೆಟ್‌ ಅಭಿಮಾನಿಗಳನ್ನು ಕಾಡದೇ ಇರದು. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ರವಿಶಾಸ್ತ್ರಿ ಅವರು ಇಂತಹ ಒಂದು ಸಾಧ್ಯತೆಗಳನ್ನು ಅಲ್ಲಗಳೆದಿಲ್ಲ. ‘ಏನಾಗುತ್ತಿದೆ ಎಂಬುದನ್ನು ಬಿಸಿಸಿಐ ಮತ್ತು ಕೆಂದ್ರ ಸರಕಾರವು ಹತ್ತಿರದಿಂದ ಗಮನಿಸುತ್ತಿದೆ, ಮತ್ತು ಈ ಕುರಿತಾದ ನಿರ್ಧಾರವನ್ನು ಅವರೇ ತೆಗೆದುಕೊಳ್ಳುತ್ತಾರೆ. ಇದು ತುಂಬಾ ಸೂಕ್ಷ್ಮವಾದ ವಿಚಾರವಾಗಿರುವ ಕಾರಣ ನೀವು ವಿಶ್ವಕಪ್‌ ಆಡುವುದು ಬೇಡ ಎಂದು ಒಂದುವೇಳೆ ಕೇಂದ್ರ ಸರಕಾರ ನಮಗೆ ಸೂಚನೆ ನೀಡಿದರೆ, ನಾನಂತೂ ಖಂಡಿತವಾಗಿಯೂ ಸರಕಾರದ ನಿರ್ಧಾರವನ್ನು ಬೆಂಬಲಿಸುತ್ತೇನೆ’ ಎಂದು ಅವರು ಹೇಳಿದರು.

ಮತ್ತೂಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ನಾಯಕ ವಿರಾಟ್‌ ಕೊಹ್ಲಿ ಮತ್ತು ಅನಿಲ್‌ ಕುಂಬ್ಲೆ ನಡುವೆ ಏನಾಗಿತ್ತು ಎಂಬುದು ನನಗೆ ತಿಳಿದಿರಲಿಲ್ಲ ಮತ್ತು ನಾನಂತೂ ಮೊದಲ ಸಲ ಕೋಚ್‌ ಹುದ್ದೆಗೆ ಅರ್ಜಿಯನ್ನೇ ಹಾಕಿರಲಿಲ್ಲ ಎಂದು ರವಿಶಾಸ್ತ್ರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ರವಿಶಾಸ್ತ್ರಿ ಅವರ ತರಬೇತಿ ಅಡಿಯಲ್ಲಿ ಪಳಗಿರುವ ‘ಬ್ಲೂ ಬಾಯ್ಸ್’ ಸದ್ಯ ಟೆಸ್ಟ್‌ ರಾಂಕಿಂಗ್‌ ನಲ್ಲಿ ಅಗ್ರಸ್ಥಾನ, ಏಕದಿನ ಮತ್ತು ಟಿ20 ರಾಂಕಿಂಗ್‌ ನಲ್ಲಿ 2ನೇ ಸ್ಥಾನವನ್ನಲಂಕರಿಸಿದೆ. ಮಾತ್ರವಲ್ಲದೇ ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಏಷ್ಯಾದ ತಂಡವೊಂದು ಟೆಸ್ಟ್‌ ಸರಣಿ ಗೆದ್ದ ಸಾಧನೆಯನ್ನೂ ಕೊಹ್ಲಿ ಪಡೆ ಮಾಡಿದೆ.

ಈ ಬಾರಿಯ ವಿಶ್ವಕಪ್‌ ಮೇ 30ರಂದು ಆಂಗ್ಲರ ನಾಡಿನಲ್ಲಿ ಪ್ರಾರಂಭವಾಗಲಿದೆ. ಇಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಿನ ಪಂದ್ಯಗಳ ಕುರಿತಾಗಿ ಎದ್ದಿರುವ ಗೊಂದಲ ಇನ್ನೂ ಪರಿಹಾರಗೊಂಡಿಲ್ಲ. ಈ ಎಲ್ಲಾ ಹಿನ್ನಲೆಯಲ್ಲಿ ರವಿಶಾಸ್ತ್ರಿ ಅವರ ಮೇಲಿನ ಹೇಳಿಕೆ ಮಹತ್ವದ್ದಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.