ಪುಲ್ವಾಮಾ ಹುತಾತ್ಮರ ಕುಟುಂಬಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ನೆರವು
Team Udayavani, Mar 21, 2019, 4:30 AM IST
ಚೆನ್ನೈ: ವರ್ಣರಂಜಿತ ಕ್ರಿಕೆಟ್ ಕೂಟ ಐಪಿಎಲ್ ನಲ್ಲಿ ರನ್ ಹೊಳೆ ಹರಿದ ಹಾಗೆ ಹಣದ ಹೊಳೆಯೂ ಹರಿಯುತ್ತದೆ. ಮನೋರಂಜನೆ ಜೊತೆ ಐಪಿಎಲ್ ನಲ್ಲಿ ಉತ್ತಮ ಯೋಜನೆಗಳಿಗೆ ಕೂಡಾ ಸ್ಪಂದನೆ ಸಿಗುತ್ತದೆ ಎಂದು ಈ ಹಿಂದೆಯೂ ಸಾಬೀತಾಗಿತ್ತು. ಈಗ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಪಂದ್ಯದ ಆದಾಯವನ್ನು ನೀಡಲಿದೆ.
ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲಿ ನಾವು ಗಳಿಸುವ ಆದಾಯವನ್ನು ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ ಹುತಾತ್ಮರಾದ ಯೋಧರ ಪರಿವಾರದವರಿಗೆ ನೀಡಲಿದ್ದೇವೆ. ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿರುವ ನಮ್ಮ ತಂಡದ ನಾಯಕ ಎಂ.ಎಸ್. ಧೋನಿ ಈ ಚೆಕ್ ಅನ್ನು ವಿತರಿಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಿರ್ದೇಶಕ ರಾಕೇಶ್ ಸಿಂಗ್ ಹೇಳಿದ್ದಾರೆ.
ಇದೇ ಬರುವ ಶನಿವಾರ ಅಂದರೆ ಮಾರ್ಚ್ 23ರಿಂದ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಬೆಂಗಳೂರು ರಾಯಲ್ ಚಾಲೆಂರ್ಸ್ ಮುಖಾಮುಖಿಯಾಗಲಿವೆ. ಚೆನ್ನೈ ನ ಚಿಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಉದ್ಘಾಟನಾ ಪಂದ್ಯದ ಟಿಕೆಟ್ ಮಾರಾಟ ಆರಂಭವಾದ ಗಂಟೆಯಲ್ಲೇ ಎಲ್ಲಾ ಟಿಕೆಟ್ ಗಳು ಮಾರಾಟವಾಗಿದೆ.
ಫೆಬ್ರವರಿ 14ರಂದು ಸಿಆರ್ ಪಿಆಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ಜೈಶ್ ಎ ಮೊಹಮ್ಮದ್ ಉಗ್ರನೊಬ್ಬ ದಾಳಿ ನಡೆಸಿದ್ದ. ಈ ದುಷ್ಕೃತ್ಯದಲ್ಲಿ 40 ಯೋಧರು ಹುತಾತ್ಮರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ