ಕಾವೇರಿ ವಿವಾದ; ಫೆ.7ರವರೆಗೂ ನೀರು ಹರಿಸಿ; ಕರ್ನಾಟಕಕ್ಕೆ ಸುಪ್ರೀಂ
Team Udayavani, Jan 4, 2017, 3:03 PM IST
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೂ ತಮಿಳುನಾಡಿಗೆ ದಿನಂಪ್ರತಿ 2 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತ ಕಾವೇರಿ ಐತೀರ್ಪು ಪ್ರಶ್ನಿಸಿ ನಾಲ್ಕು ರಾಜ್ಯಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ತೀರ್ಪು ನೀಡಿತ್ತು.
ಫೆಬ್ರುವರಿ 7ರಿಂದ ನಾಲ್ಕು ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ಇತ್ಯರ್ಥವಾಗುವವರೆಗೂ ಕರ್ನಾಟಕ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಆದೇಶ ನೀಡಿದೆ.
ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಸೇರಿದಂತೆ 4 ರಾಜ್ಯಗಳು ಸಲ್ಲಿಸಿರುವ ಮೂಲ ಅರ್ಜಿಯ ವಿಚಾರಣೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತ್ತು. ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಯೋಗ್ಯ ಅಲ್ಲ ಎಂಬ ಕೇಂದ್ರ ಸರ್ಕಾರದ ವಾದಕ್ಕೆ ಪುದುಚೇರಿ ಬೆಂಬಲ ನೀಡಿದರೆ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸರ್ಕಾರ ಅರ್ಜಿಗಳು ವಿಚಾರಣೆಗೆ ಅರ್ಹ ಎಂದು ವಾದ ಮಂಡಿಸಿದ್ದವು.
ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ನಾಲ್ಕು ರಾಜ್ಯಗಳ ವಾದ, ಪ್ರತಿವಾದ ಆಲಿಸಿದ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿ ವಿಚಾರಣೆಗೆ ಯೋಗ್ಯ ಎಂದು ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ