ಕಾಂಗ್ರೆಸ್ ಕಾರ್ಯಕರ್ತ ಕೊಲೆ ಪ್ರಕರಣ: 19 ಮಂದಿಗೆ ಜೀವಾವಧಿ ಶಿಕ್ಷೆ
Team Udayavani, Jan 14, 2017, 3:45 AM IST
ಕೋಲಾರ: ಎಂಟು ವರ್ಷಗಳ ಹಿಂದೆ ಕೋಲಾರ ತಾಲೂಕಿನ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಎಸ್.ಅಗ್ರಹಾರದಲ್ಲಿ ರಾಜಕೀಯ ದ್ವೇಷದಿಂದ ನಡೆದ ಕೊಲೆಯ 19 ದೋಷಿಗಳಿಗೆ ಕೋಲಾರ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.
2008ರ ಮೇ 25ರಂದು ಶ್ರೀನಿವಾಸಪುರ ಕ್ಷೇತ್ರದಿಂದ ಗೆದ್ದ ಜೆಡಿಎಸ್ ಅಭ್ಯರ್ಥಿ ಪರ ಜೆಡಿಎಸ್ ಕಾರ್ಯಕರ್ತರು ಎಸ್.ಅಗ್ರಹಾರದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಪೆರುಮಾಳ್ ಅಡ್ಡಿಪಡಿಸಿದ್ದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಪೆರುಮಾಳ್ ಹಾಗೂ ಆತನ ರಕ್ಷಣೆಗೆ ಬಂದ ಪೆರುಮಾಳ್ನ ಕುಟುಂಬ ಹಾಗೂ ಇತರ 9 ಮಂದಿ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದರು. ಘರ್ಷಣೆಯಲ್ಲಿ ಪೆರುಮಾಳ್ ಸ್ಥಳದಲ್ಲೇ ಮೃತಪಟ್ಟಿದ್ದನು.
ಪೆರುಮಾಳ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಅಗ್ರಹಾರದ 24 ಮಂದಿಯ ವಿರುದ್ದ ಪೆರುಮಾಳ್ ಕುಟುಂಬದವರು ದೂರು ದಾಖಲಿಸಿದ್ದರು. ಸುಮಾರು 8 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ ಕೋಲಾರದ ಜಿಲ್ಲಾ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಪ್ರಕರಣದ 24 ಮಂದಿ ಆರೋಪಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮಹಿಳೆ ಸೇರಿದಂತೆ ಮೂವರನ್ನು ಖುಲಾಸೆಗೊಳಿಸಿದೆ. ಉಳಿದವರಲ್ಲಿ ಒಬ್ಬ ಮಹಿಳೆಯೂ ಸೇರಿದಂತೆ 19 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿ ಎಲ್ಲರಿಗೂ ಜೀವಾವಧಿ ಶಿಕ್ಷೆ ಮತ್ತು ತಲಾ 10 ಸಾವಿರ ದಂಡವನ್ನು ವಿಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ