ಬಿಎಸ್ವೈಗೆ ಚೆನ್ನಬಸವಶ್ರೀ ಪ್ರಶಸ್ತಿ ಪ್ರದಾನ
Team Udayavani, Jan 16, 2017, 3:45 AM IST
ಕಾರವಾರ/ಜೋಯಿಡಾ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಭಾನುವಾರ ಉತ್ತರ ಕನ್ನಡ ಜಿಲ್ಲೆ ಉಳವಿಯ ಚೆನ್ನಬಸವೇಶ್ವರ ದೇವಸ್ಥಾನದಿಂದ ಚೆನ್ನಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ವಚನಕಾರರು ಕನ್ನಡ ನಾಡಿನಲ್ಲಿ ಮಾಡಿದ ವೈಚಾರಿಕ ಕ್ರಾಂತಿಯನ್ನು ಸ್ಮರಿಸಿದರು. ಶರಣರು ನಾಡಿನ ಮೂಢನಂಬಿಕೆಗಳನ್ನು ಕಳೆಯಲು ಹಾಗೂ ಸರ್ವ ಸಮಾಜಗಳ ಸಮಾನತೆಯನ್ನು ಸಾರಲು ಮಾಡಿದ ಪ್ರಯತ್ನವನ್ನು ಇವತ್ತಿನ ಸಮಾಜ ಅರ್ಥಮಾಡಿಕೊಳ್ಳಬೇಕು ಎಂದರು.
ನಾಲ್ಕು ವರ್ಷಗಳ ಹಿಂದೆಯೇ ಘೋಷಣೆಯಾಗಿದ್ದ ಈ ಪ್ರಶಸ್ತಿಯನ್ನು ಉಳವಿಯಲ್ಲಿ ಶರಣ ಚೆನ್ನಬಸವೇಶ್ವರರ ಸನ್ನಿಧಿಗೆ ಬಂದು, ಚೆನ್ನಬವಸಣ್ಣನವರ ಗದ್ದುಗೆ ದರ್ಶನ ಪಡೆದ ನಂತರವೇ ಯಡಿಯೂರಪ್ಪ ಸ್ವೀಕರಿಸಿದ್ದು ವಿಶೇಷವಾಗಿತ್ತು. ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಧಿಯಲ್ಲಿ ಉಳವಿ ಕ್ಷೇತ್ರ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು ಮಾಡಿದ್ದರು.
ಮುಂಡರಗಿ ಮಹಾಸಂಸ್ಥಾನದ ಡಾ| ನಾಡೋಜ ಅನ್ನದಾನೇಶ್ವರ ಮಹಾ ಶಿವಯೋಗಿಗಳಿಗೂ ಚೆನ್ನಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೃಹನ್ಮಠ ನಂದಿಗುಡಿಯ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಚಂದ್ರಶೇಖರ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಮಾಜಿ ಸಚಿವ ಸಿ.ಎಂ. ಉದಾಸಿ, ವೀರಣ್ಣ ಮತ್ತಿಕಟ್ಟಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್