ನೋಟು ಅಮಾನ್ಯದಿಂದ ದೇಶದ ಅಭಿವೃದ್ಧಿ ಋಣಾತ್ಮಕ


Team Udayavani, Jan 23, 2017, 3:45 AM IST

22BNP-(10).jpg

ಬೆಂಗಳೂರು: ಕಪ್ಪುಹಣ ಮತ್ತು ಭ್ರಷ್ಟಾಚಾರ ಎನ್ನುವುದು ದೇಶದ ಮುಂದಿರುವ ದೊಡ್ಡ ಸಮಸ್ಯೆಗಳು ಎಂಬುದು ನಿಜ. ಆದರೆ, ಅವುಗಳನ್ನು ನಿಯಂತ್ರಿಸಲು ನೋಟು ಅಮಾನ್ಯ ಮಾಡುವ ದಾರಿ ಮಾತ್ರವಿತ್ತೇ? ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌, ಕೇಂದ್ರದ ಈ ಕ್ರಮದಿಂದ ದೇಶದ ಅಭಿವೃದ್ಧಿ ಋಣಾತ್ಮಕವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಭಾನುವಾರ ನಗರದ ಸೆಂಟ್ರಲ್‌ ಕಾಲೇಜಿನ ಸೆನೆಟ್‌ ಹಾಲ್‌ನಲ್ಲಿ ಕರ್ನಾಟಕ ಜನಶಕ್ತಿ, ದಲಿತ ಸಂಘರ್ಷ ಸಮಿತಿ ಮತ್ತು ಸ್ವರಾಜ್‌ ಅಭಿಯಾನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ನೋಟು ರದ್ದತಿಯ ವಾಸ್ತವ ಹಾಗೂ ಸಾಧಕಧಿಭಾದಕಗಳು’ ವಿಷಯ ಕುರಿತ ಮುಕ್ತ ಸಂವಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು$ಹಣ ಚಲಾವಣೆ, ಭಯೋತ್ಪಾದನೆ ಮತ್ತು ಭ್ರಷ್ಟಾಚಾರ ನಿಗ್ರಹಕ್ಕೆ ನೋಟು ರದ್ದತಿ ಮಾಡುವುದಾಗಿ ಹೇಳಿದರು. ಆದರೆ, ನೋಟು ರದ್ದತಿ ಹಿಂದಿನ ಉದ್ದೇಶ ಇದೇ ಆಗಿತ್ತೇ? ಎಂಬುದರಲ್ಲಿ ಸಂಶಯವಿದೆ. ನೋಟು ರದ್ದತಿಯ ನಂತರ ಉತ್ಪಾದನಾ ಕ್ಷೇತ್ರದಲ್ಲಿ ಶೇ.35 ಉದ್ಯೋಗ ನಷ್ಟವಾಗಿದ್ದು, ಜನರ ಬದುಕು ಮತ್ತು ಹಣ ಎಲ್ಲವನ್ನೂ ಬೀದಿಗೆಸೆದಿದೆ ಎಂದು ಆರೋಪಿಸಿದರು.

500 ಮತ್ತು 1000 ರೂ. ಮುಖಬೆಲೆಯ ನೋಟುಗಳ ನಿಷೇಧದಿಂದ ಕಪ್ಪುಹಣ ಅಥವಾ ಭ್ರಷ್ಟಾಚಾರ ನಿಯಂತ್ರಣವಾಗುವುದಿಲ್ಲ. ಮುಂದೆ ಈ ನೋಟುಗಳ ಬದಲು 2000ರ ನೋಟು ಬಳಕೆಯಾಗುತ್ತದೆ. ಎಲ್ಲಾ ಆರ್ಥಿಕ ವಹಿವಾಟುಗಳು ಬ್ಯಾಂಕಿಂಗ್‌ ವ್ಯವಸ್ಥೆಯಡಿ ಬಂದಾಗ ದೇಶ ಅಭಿವೃದ್ಧಿಯಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ದೇಶದಲ್ಲಿನ ಶೇ.50ರಷ್ಟು ಜನರಿಗೆ ಬ್ಯಾಂಕ್‌ ಖಾತೆ ಇಲ್ಲ. ದೊಡ್ಡ ಸಂಖ್ಯೆಯ ಜನರಿಗೆ ಶಿಕ್ಷಣವಿಲ್ಲ. ಇಂತಹ ಸಂದರ್ಭದಲ್ಲಿ ನಗದು ರಹಿತ ವಹಿವಾಟು ಮಾಡಬೇಕೆ? ಎಂದು ಪ್ರಶ್ನಿಸಿದರು.

ಮೋದಿ ಸರ್ಕಾರಕ್ಕೆ ಖಾಸಗಿ ಬಂಡವಾಳಶಾಹಿಗಳ ಲಾಭದ ಬಗ್ಗೆ ಕಾಳಜಿಯಿದೆಯೇ ಹೊರತು ಬಡವರ ಮೇಲಲ್ಲ. ಇದು ದೇಶದ ಇತಿಹಾಸದಲ್ಲೇ ಅತ್ಯಂತ ಸಂವೇದನಾಶೂನ್ಯ ಸರ್ಕಾರ ಎಂದೂ ಅವರು ಕಿಡಿ ಕಾರಿದರು.

ಲೋಕ್‌ಪಾಲ್‌ ಸಂಸ್ಥೆ ಅನಾಥವಾಗಿದೆ: ಲೋಕ್‌ಪಾಲ್‌ ಮಸೂದೆಗೆ 2013ರÇÉೇ ಸಂಸತ್ತಿನ ಅನುಮತಿ ಸಿಕ್ಕಿದೆ. ಮೋದಿ ಪ್ರಧಾನಿಯಾಗಿ ಇಷ್ಟು ಸಮಯ ಕಳೆದರೂ ಇನ್ನೂ ಆ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಸ್ಥರನ್ನು ನೇಮಿಸದಿದ್ದಾಗ ಆ ಸಂಸ್ಥೆ ತಾನಾಗಿಯೇ ಸಾಯುತ್ತದೆ. ಇನ್ನೊಂದೆಡೆ ಭ್ರಷ್ಟಾಚಾರ ತಡೆಯುತ್ತಿದ್ದ ಎಲ್ಲಾ ಸಂಸ್ಥೆಗಳ ಸೊಂಟ ಮುರಿಯುವ ಸಾಮಥ್ಯವಿರುವ ಕರ್ನಾಟಕದ ಆರ್‌.ಕೆ.ದತ್ತಾ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಿಸಲಿಲ್ಲ. ಈ ದೇಶದ ಎಲ್ಲಾ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನೂ ಒಂದುಕಡೆ ನಾಶ ಮಾಡಿ ಇನ್ನೊಂದೆಡೆ ಭ್ರಷ್ಟರಿಗೆ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.