ಐಟಿ ದಾಳಿ ಎಫೆಕ್ಟ್; ಸಿಎಂ ಸಿದ್ದು ಸಂಪುಟದ ಮತ್ತೊಂದು ವಿಕೆಟ್ ಪತನ?
Team Udayavani, Jan 24, 2017, 1:24 PM IST
ಬೆಂಗಳೂರು: ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಏತನ್ಮಧ್ಯೆ ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಕ್ರಮ ಕೈಗೊಳ್ಳುತ್ತಾ ಎಂದು ವಿಪಕ್ಷಗಳು ಕೂಡಾ ಪ್ರಶ್ನಿಸತೊಡಗಿವೆ.
ಇತ್ತೀಚೆಗೆ ಕಾಂಗ್ರೆಸ್ ಮುಖಂಡ, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಪತ್ತೆ ಹಚ್ಚಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫೋನ್ ಮೂಲಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ವರದಿ ವಿವರಿಸಿದೆ. ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ಖುದ್ದು ಭೇಟಿಯಾಗಿ ಮಾಹಿತಿ ನೀಡುವುದಾಗಿ ಪರಮೇಶ್ವರ್ ಅವರಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ