ಐಟಿ ದಾಳಿಯಲ್ಲಿ ನನ್ನ ಪಾತ್ರ ಇಲ್ಲ: ಸತೀಶ್ ಜಾರಕಿಹೊಳಿ
Team Udayavani, Jan 27, 2017, 3:45 AM IST
ಬೆಂಗಳೂರು: ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳ್ಕರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಡಿರುವ ದಾಳಿಯ ಹಿಂದೆ ನನ್ನ ಕೈವಾಡ ಇಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಐಟಿ ಇಲಾಖೆ ಅಧಿಕಾರಿಗಳು ಈಗಾಗಲೇ ಈ ಬಗ್ಗೆ ಯಾರದೇ ಕೈವಾಡ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ನನಗೂ ಐಟಿ ದಾಳಿಗೂ ಯಾವ ರೀತಿಯಲ್ಲೂ ಸಂಬಂಧ ಇಲ್ಲ ಎಂದು ಹೇಳಿದರು.
ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿಲ್ಲ. ತಮ್ಮನ್ನು ಭೇಟಿ ಮಾಡುವಂತೆ ಅವರೂ ಸಹ ನನಗೆ ಯಾವುದೇ ಸೂಚನೆ ನೀಡಿಲ್ಲ. ನಾನು ಸಾಮಾಜಿಕ ಕೆಲಸಗಳಲ್ಲಿ ನಿರತನಾಗಿದ್ದೇನೆ. ಅದರಲ್ಲಿ ಸಕ್ರೀಯನಾಗಿರುವುದರಿಂದ ಮತ್ತೆ ಸಂಪುಟ ಸೇರುವುದು ಕಷ್ಟ ಎಂದು ತಿಳಿಸಿದರು.
ಸಚಿವ ಸ್ಥಾನ ಕಳೆದುಕೊಂಡ ಮೇಲೆ ನಾನು ಜೆಡಿಎಸ್ ಸೇರುತ್ತೇನೆ ಎಂಬ ಮಾತು ಕೇಳಿ ಬಂತು. ನಾನು ಮೊದಲು ಜೆಡಿಎಸ್ನಲ್ಲಿ ಇದ್ದೆ, ಹೀಗಾಗಿ ಜೆಡಿಎಸ್ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಆದರೆ, ನಾನು ಈಗ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿಯೇ ಕೆಲಸ ಮಾಡಲು ಸಿದ್ದನಾಗಿದ್ದೇನೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಟ್ಟು ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಎಂಬ ಮಾಹಿತಿ ಗೊತ್ತಿಲ್ಲ. ಆ ರೀತಿಯ ಮಾಹಿತಿ ಬಂದಾಗ ತಿಳಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ