ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಭಾತ್ಯಾಗ


Team Udayavani, Feb 14, 2017, 7:18 AM IST

14-sss-8.jpg

ವಿಧಾನಸಭೆ: ಐಟಿ ದಾಳಿಗೊಳಗಾದ ಸಚಿವ ರಮೇಶ್‌ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ
ಪ್ರಕರಣ ಇತ್ಯರ್ಥವಾಗುವವರೆಗೆ ಮುಖ್ಯಮಂತ್ರಿಗಳೇ ಅವರನ್ನು  ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು
ಸಭಾತ್ಯಾಗ ಮಾಡಿದರು.

ಸಚಿವ ರಮೇಶ್‌ ಜಾರಕಿಹೊಳಿ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕುರಿತು ಪ್ರತಿಪಕ್ಷ ನಾಯಕ ಜಗದೀಶ್‌
ಶೆಟ್ಟರ್‌ ಮತ್ತಿತರರು ಮಂಡಿಸಿದ ನಿಲುವಳಿ ಸೂಚನೆ ಪ್ರಸ್ತಾಪವನ್ನು ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ನಿಯಮ 69ಕ್ಕೆ ಪರಿವರ್ತಿಸಿ
ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರು. ಅದರಂತೆ ಜಗದೀಶ್‌ ಶೆಟ್ಟರ್‌ ಚರ್ಚೆ ಆರಂಭಿಸುತ್ತಿದ್ದಂತೆ ಮಧ್ಯಪ್ರವೇಶಿಸಿದ ಕಾನೂನು
ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ದಾಖಲೆಗಳಿದ್ದರೆ ಅದನ್ನು ಆಧರಿಸಿ ಮಾತನಾಡಿದರೆ ಸರ್ಕಾರ
ಬೆಳಕು ಚೆಲ್ಲಲು ಸಾಧ್ಯ. ಐಟಿ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದರೆ ಅದರ ಮೇಲೆ ಚರ್ಚೆ ಮಾಡೋಣ. ಸರ್ಕಾರ ಉತ್ತರ
ನೀಡುತ್ತದೆ. ಅದು ಬಿಟ್ಟು ರಾಜಕೀಯ ಕಾರಣಗಳಿಗಾಗಿ ವಿಷಯ ಪ್ರಸ್ತಾಪಿಸಿ ಸದನದ ಸಮಯ ವ್ಯರ್ಥ ಮಾಡುವುದು ಸರಿಯಲ್ಲ
ಎಂದರು. ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ರಮೇಶ್‌ ಕುಮಾರ್‌ ಕೂಡ ಇದಕ್ಕೆ ದನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್‌ ಶೆಟ್ಟರ್‌, ಐಟಿ ದಾಳಿ ವೇಳೆ ಸಿಕ್ಕಿದೆ ಎನ್ನಲಾದ ಆಸ್ತಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಸಚಿವರೇ ಒಪ್ಪಿಕೊಂಡ ಕೆಲವು ಅಂಶಗಳ ಆಧಾರದ ಮೇಲೆ ಚರ್ಚಿಸುತ್ತೇನೆ. ಐಟಿ ದಾಳಿ ವೇಳೆ 115 ಕೋಟಿ ರೂ. ಆಸ್ತಿ ಪತ್ತೆಯಾಗಿದ್ದಾಗಿ  ಸಚಿವರೇ ಒಪ್ಪಿಕೊಂಡಿದ್ದಾರೆ. ಈ ಆಸ್ತಿ ಕುರಿತು ಅವರು ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಥವಾ ಲೋಕಾಯುಕ್ತರ
ಮುಂದೆ ಪ್ರತಿ ವರ್ಷ ಘೋಷಿಸುವ ಆಸ್ತಿಯಲ್ಲಿ ನಮೂದಿಸಿದ್ದರೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.

ನೈತಿಕತೆ ಎಲ್ಲಿ ಉಳಿದಿದೆ?: ಮಧ್ಯಪ್ರವೇಶಿಸಿದ ಸಚಿವ ಕೆ.ಆರ್‌. ರಮೇಶ್‌ಕುಮಾರ್‌, ರಾಜಕಾರಣದಲ್ಲಿ ಈಗ ನೈತಿಕತೆ ಎಲ್ಲಿ ಉಳಿದಿದೆ. ಹಿಂದೆ ನೆಹರೂ ಪ್ರಧಾನಿಯಾಗಿದ್ದಾಗ ಪ್ರತಿಪಕ್ಷದಲ್ಲಿದ್ದ ಆಚಾರ್ಯ ಕೃಪಲಾನಿ ಕಳಪೆ ರಕ್ಷಣಾ ಸಾಮಗ್ರಿ ಖರೀದಿಸಿದ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ನೆಹರು ಯಾವುದೇ ದಾಖಲೆಗಳನ್ನು ಕೇಳದೆ ಖರೀದಿಯನ್ನೇ ರದ್ದುಪಡಿಸಿದ್ದರು. ರೈಲು ಅಪಘಾತವಾದಾಗ ರೈಲ್ವೆ ಸಚಿವರಾಗಿದ್ದ ಲಾಲ್‌ಬಹದ್ದೂರ್‌ ಶಾಸಿŒ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಅಷ್ಟೇ ಏಕೆ, ರಾಜ್ಯದಲ್ಲಿ ರಾಮರಾಯರು ಗೃಹ ಸಚಿವರಾಗಿದ್ದಾಗ ಮಧುಗಿರಿಯಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಈ ಪ್ರಕರಣ ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು, ನಿಮ್ಮ ಮಗಳಿಗೇ ಈ ಪರಿಸ್ಥಿತಿ ಬಂದಿದ್ದರೆ ಎಂದು ಗೃಹ ಸಚಿವರನ್ನು ಪ್ರಶ್ನಿಸಿದಾಗ ಅವರು ಮರುಮಾತನಾಡದೆ ತಮ್ಮ ಸ್ಥಾನ ತ್ಯಜಿಸಿದ್ದರು. ಈಗ ಅಂಥವರು ಎಲ್ಲಿದ್ದಾರೆ. ಕತ್ತು ಹಿಡಿದು ತಳ್ಳಿದರೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.

ಏಕಾಂಗಿ ಶೆಟ್ಟರ್‌
ಜಗದೀಶ್‌ ಶೆಟ್ಟರ್‌ ಪಟ್ಟು ಬಿಡದೆ ರಮೇಶ್‌ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿದಾಗ ಆಡಳಿತ ಪಕ್ಷದ ಸದಸ್ಯರು ಅವರ ವಿರುದ್ಧ ತಿರುಗಿಬಿದ್ದರು. ಈ ಸಂದರ್ಭದಲ್ಲಿ ಜಗದೀಶ್‌ ಶೆಟ್ಟರ್‌ ಒಬ್ಬರೇ ಅವರಿಗೆ ಪ್ರತ್ಯುತ್ತರ ನೀಡಿದರೇ ಹೊರತು ಬಿಜೆಪಿ ಸದಸ್ಯರು ಅವರಿಗೆ
ಬೆಂಬಲ ವ್ಯಕ್ತಪಡಿಸಲಿಲ್ಲ. ಹೀಗಾಗಿ ಕಾಂಗ್ರೆಸ್‌ ಸದಸ್ಯರೊಂದಿಗೆ ಏಕಾಂಗಿಯಾಗಿ ವಾದ ಮಂಡಿಸಲು ಸಾಧ್ಯವಾಗದ ಶೆಟ್ಟರ್‌, 
ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಭಾತ್ಯಾಗ ಮಾಡುವುದಾಗಿ ಹೇಳಿ ಸದನದಿಂದ ಹೊರನಡೆದರು. ಬಳಿಕ ಬಿಜೆಪಿ ಸದಸ್ಯರು ಅವರ ಹಿಂದೆ ಹೋದರು. 

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.