ಜಮೀನಿನಲ್ಲೂ ಟ್ರ್ಯಾಕ್ಟರ್‌ ವಿಮಾನದ ಉಳುಮೆ


Team Udayavani, Feb 16, 2017, 3:45 AM IST

Air-Tractor-u.jpg

ಬೆಂಗಳೂರು: ಸಾಮಾನ್ಯ ಟ್ರ್ಯಾಕ್ಟರ್‌ಗಳನ್ನು ಬಳಿಸಿ ಬೇಸಾಯ ಮಾಡುವ ವಿಧಾನ ಈಗ ಹಳೆಯದಾಯ್ತು. ಆ ಟ್ರ್ಯಾಕ್ಟರ್‌ ಮಾಡುವ ಬಹುತೇಕ ಎಲ್ಲ ಚಟುವಟಿಕೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಪ್ರದೇಶಗಳಲ್ಲಿ ಕೆಲಸವನ್ನು ಮಾಡಿಮುಗಿಸಲು  ಏರ್‌ ಟ್ರ್ಯಾಕ್ಟರ್‌ ಅನ್ನು ಪರಿಚಯಿಸಲಾಗಿದೆ. 

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ-2017ರಲ್ಲಿ ಕಾಣಬಹುದಾಗಿದ್ದು ಇದನ್ನು ಆಸ್ಟ್ರೇಲಿಯದ ಕಂಪೆನಿಯೊಂದು ಅಭಿವೃದ್ಧಿಪಡಿಸಿದೆ.ಈ ವಿಮಾನದ ಸಹಾಯದಿಂದ ಬಿತ್ತನೆ, ರಸಗೊಬ್ಬರ ಸಿಂಪರಣೆ, ಬೆಂಕಿ ನಂದಿಸುವುದು, ಕೃಷಿ ಉತ್ಪನ್ನಗಳ ಸಾಗಣೆ ಸೇರಿದಂತೆ ಹಲವು ಕೆಲಸಗಳನ್ನು ಮಾಡಬಹುದು. ಕೃಷಿ ಉದ್ದೇಶಗಳಿಗೆ ಪೂರಕವಾಗಿ ವಿಮಾನದ ವಿನ್ಯಾಸ ರೂಪಿಸಲಾಗಿದೆ. ಅಗಲವಾದ ರೆಕ್ಕೆಗಳು, ಅದರ ಒಂದು ಭಾಗದಲ್ಲಿ ಟ್ಯಾಂಕರ್‌ ಹಾಗೂ ತಳಭಾಗದಲ್ಲಿ ಸಿಂಪರಣೆ ಮಾಡುವ ಚಿಕ್ಕ ರಂಧ್ರಗಳಿರುವ ಪೈಪ್‌ಗ್ಳನ್ನು ಅಳವಡಿಸಲಾಗಿದೆ. ಎಲ್ಲೆಂದರಲ್ಲಿ ಲ್ಯಾಂಡ್‌ ಮಾಡಬಹುದು. ಒಬ್ಬ ಪೈಲಟ್‌ ಮತ್ತೂಬ್ಬ ಸಹಾಯಕ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇದರಲ್ಲಿದೆ. 

ಸಣ್ಣ ರೈತರಿಗೆ ಸೂಕ್ತವಲ್ಲ
ಆದರೆ, ಇದು ಸಣ್ಣ-ಮಧ್ಯಮ ರೈತರಿಗೆ ಅಷ್ಟು ಅನುಕೂಲ ಆಗುವುದಿಲ್ಲ. ನೂರಾರು ಎಕರೆ ಭೂಮಿ ಹೊಂದಿರುವ ರೈತರು ಅಥವಾ ಸರ್ಕಾರದ ಜಮೀನುಗಳಿಗೆ ಹೆಚ್ಚು ನೆರವಾಗಲಿದೆ. ಅದರಲ್ಲೂ ಗುಡ್ಡಗಾಡು ಪ್ರದೇಶಗಳಲ್ಲಿರುವ ಜಮೀನುಗಳು, ಉಪ ಅರಣ್ಯ ಪ್ರದೇಶಗಳಲ್ಲಿ ಅದರಲ್ಲೂ ಹತ್ತಾರು ರೈತರು ಸೇರಿಕೊಂಡು ಒಂದು ಸೊಸೈಟಿ ಅಥವಾ ಸಂಘದಡಿ ಈ ಮಾದರಿಯ ವಿಮಾನಗಳ ಮೂಲಕ ಕೃಷಿ ಚಟುವಟಿಕೆಗಳನ್ನು ಮಾಡಬಹುದು. ಕನಿಷ್ಠ ಸಾವಿರ ಎಕರೆ ಭೂಮಿ ಇರುವ ಪ್ರದೇಶದಲ್ಲಿ ಏರ್‌ ಟ್ರ್ಯಾಕ್ಟರ್‌ ಹೇಳಿಮಾಡಿಸಿದ್ದಾಗಿದೆ ಎಂದು ಆಸ್ಟ್ರೇಲಿಯದ ಫೀಲ್ಡ್‌ ಏರ್‌ ಗ್ರೂಪ್‌ ಕಂಪೆನಿಗಳ ವಿಮಾನ ಮಾರುಕಟ್ಟೆ ವ್ಯವಸ್ಥಾಪಕ ಜೇಮ್ಸ್‌ ಒಬ್ರಿಯನ್‌ ತಿಳಿಸಿದ್ದಾರೆ. 

ಸಾವಿರ ಎಕರೆ ಭೂಮಿಗೆ ನೀರು ಅಥವಾ ರಸಗೊಬ್ಬರ ಸಿಂಪರಣೆಯನ್ನು ಏರ್‌ ಟ್ರ್ಯಾಕ್ಟರ್‌ 3ರಿಂದ 4 ತಾಸುಗಳಲ್ಲಿ ಮಾಡಿಮುಗಿಸುತ್ತದೆ. ಪ್ರತಿ ಗಂಟೆಗೆ 190 ಲೀ. ಇಂಧನ ಇದಕ್ಕೆ ಬೇಕಾಗುತ್ತದೆ. ಇಷ್ಟೇ ವಿಸ್ತೀರ್ಣದಲ್ಲಿ ಇದೇ ಕೆಲಸವನ್ನು ಮಾಡಲು 15ರಿಂದ 20 ಟ್ರ್ಯಾಕ್ಟರ್‌ಗಳು ಬೇಕಾಗುತ್ತದೆ. ಜತೆಗೆ 40ಕ್ಕೂ ಹೆಚ್ಚು ಕೂಲಿಕಾರ್ಮಿಕರು ಬೇಕಾಗುತ್ತದೆ. ಇದಕ್ಕೆ ಇಡೀ ದಿನ ವ್ಯಯಮಾಡಬೇಕಾಗುತ್ತದೆ. 1,600 ಲೀ.ನಿಂದ 2 ಸಾವಿರ ಲೀ. ಸಾಮರ್ಥ್ಯದ ನೀರಿನ ಟ್ಯಾಂಕರ್‌ ಇದರಲ್ಲಿದೆ. ಅದರಲ್ಲಿ ನೀರು ಅಥವಾ ರಸಗೊಬ್ಬರ ಸಿಂಪರಣೆ ಮಾಡಬಹುದು ಎನ್ನುತ್ತಾರೆ ಜೇಮ್ಸ್‌ ಒಬ್ರಿಯನ್‌. 

ಶೇ. 30ರಷ್ಟು ಇಳುವರಿ ಹೆಚ್ಚು
ಸಾಮಾನ್ಯವಾಗಿ ಟ್ರ್ಯಾಕ್ಟರ್‌ ಅನ್ನು ಜಮೀನಿನಲ್ಲಿ ತೆಗೆದುಕೊಂಡು ಹೋಗುವುದರಿಂದ ಬೆಳೆದುನಿಂತ ಬೆಳೆ ಹಾಳಾಗುವುದು, ಬೆಳೆಗೆ ರೋಗ ತಗುಲಿ ನಷ್ಟವಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಆದರೆ, ಏರ್‌ ಟ್ರ್ಯಾಕ್ಟರ್‌ ಜಮೀನಿ ಮೇಲಿನಿಂದ ಕೃಷಿ ಚಟುವಟಿಕೆ ನಡೆಸುವುದರಿಂದ ಶೇ. 30ರಷ್ಟು ಇಳುವರಿ ಹೆಚ್ಚು ಬರಲಿದೆ ಎಂದು ಅವರು ಅಭಿಪ್ರಾಯಪಡುತ್ತಾರೆ. 

ಆಸ್ಟ್ರೇಲಿಯದಲ್ಲಿ 200 ಏರ್‌ ಟ್ರ್ಯಾಕ್ಟರ್‌ಗಳನ್ನು ಕೃಷಿ ಉದ್ದೇಶಗಳಿಗೆ ಬಳಸಲಾಗುತ್ತಿದೆ. ಒಂದು ಏರ್‌ ಟ್ರ್ಯಾಕ್ಟರ್‌ ಬೆಲೆ  4,00,000 ಅಮೆರಿಕ ಡಾಲರ್‌(2,67,57,302 ರೂ.) ಶುರುವಾಗುತ್ತದೆ.  ಅಲ್ಲಿ ಈ ವಿಮಾನದಿಂದ ಹತ್ತಿ, ಗೋಧಿ, ಭತ್ತದ ಬೆಳೆ ಬೆಳೆಯಲಾಗುತ್ತಿದೆ. ಭಾರತದ ಕೃಷಿ ಚಟುವಟಿಕೆಗಳಿಗೂ ಇದನ್ನು ಬಳಸಲು ಅವಕಾಶ ಇದೆ. ಈ ಸಂಬಂಧ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆದಿದ್ದು, ಪೂರಕ ಸ್ಪಂದನೆಯೂ ದೊರಕಿದೆ ಎಂದು ಅವರು ಹೇಳಿದರು. 

ವಿಮಾನಕ್ಕೆ ಪ್ರತ್ಯೇಕ ಇಂಧನ ಬೇಕಾಗುತ್ತದೆ. ಆದರೆ, ಇದು ಸೇರಿದಂತೆ ಸಬ್ಸಿಡಿ ಮತ್ತಿತರ ಸೌಲಭ್ಯಗಳನ್ನು ಇಲ್ಲಿನ ಸರ್ಕಾರ ಪೂರೈಸಬೇಕಾಗುತ್ತದೆ. ವಿಮಾನ ತರಬೇತುದಾರ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಕಂಪನಿ ನೀಡುತ್ತದೆ. 

– ವಿಜಯಕುಮಾರ್‌ ಚಂದರಗಿ 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.