ಅಹಿಂದ ಕಲ್ಯಾಣಕ್ಕೆ ಭರಪೂರ ನೆರವು


Team Udayavani, Mar 16, 2017, 3:30 AM IST

Ahinda-15-3.jpg

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಈ ಬಜೆಟ್‌ನಲ್ಲಿಯೂ ಎದ್ದು ಕಾಣುತ್ತಿದ್ದು, ಅಹಿಂದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ಸ್ವದ್ಯೋಗ ಕೈಗೊಳ್ಳಲು ಪ್ರೋತ್ಸಾಹ ಧನ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಜೊತೆಗೆ ಪ್ರೋತ್ಸಾಹಧನ ಹಾಗೂ ಎಸ್ಸಿ ಎಸ್ಟಿ ಸಮುದಾಯದ 2 ಲಕ್ಷ ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವುದು ಸೇರಿದಂತೆ ಅಹಿಂದ ವರ್ಗದ ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಲಕ್ಷ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ತರಬೇತಿ: 2017-18ನೇ ಸಾಲಿನಲ್ಲಿ ಪ್ರಮುಖವಾಗಿ ಪ್ರತಿ ಜಿಲ್ಲೆಗೊಂದರಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸಿ, ಪಿಯುಸಿವರೆಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ. ಒಂದು ಲಕ್ಷ ಎಸ್ಸಿ ಎಸ್ಟಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವುದು. ಎಸ್ಸಿ ಎಸ್ಟಿ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಬುಕ್‌ ಬ್ಯಾಂಕ್‌ ಸ್ಥಾಪನೆ. ಭೂ ರಹಿತ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು 10 ಲಕ್ಷದಿಂದ 15 ಲಕ್ಷ ರೂಪಾಯಿಗೆ ನೆರವು ಹೆಚ್ಚಿಸುವುದು. ಸ್ವಉದ್ಯೋಗ ಕೈಗೊಳ್ಳಲು ಶೇ.50ರ ಸಬ್ಸಿಡಿ ದರದಲ್ಲಿ 2000 ಯುವಕರಿಗೆ 5 ಲಕ್ಷದವರೆಗೆ ಸಹಾಯಧನ ನೀಡುವುದು. 5 ಸಾವಿರ ಯುವಕರಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯಡಿ 3 ಲಕ್ಷ ರೂ.ವರೆಗೆ ನೆರವು ನೀಡಲು ನಿರ್ಧರಿಸಲಾಗಿದೆ.

ಆದಿವಾಸಿಗಳ ಸಮುದಾಯ ಭವನಕ್ಕೆ15 ಕೋಟಿ ರೂ.: ಕಾನೂನು ಪದವೀಧರರ ಮಾಸಿಕ ಭತ್ಯೆಯನ್ನು 2 ಸಾವಿರ ರೂ.ನಿಂದ 5 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಆದಿವಾಸಿಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸಮುದಾಯಭವನ ನಿರ್ಮಾಣಕ್ಕೆ 15 ಕೋಟಿ ರೂ. ಮೀಸಲಿಡಲಾಗಿದೆ. ಬಿಪಿಎಲ್‌ ಕುಟುಂಬಗಳ ಗೃಹ ನಿರ್ಮಾಣಕ್ಕೆ ನಿಗದಿಪಡಿಸಿದ ಮೊತ್ತವನ್ನು ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷದಿಂದ 1.75 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 1.8 ಲಕ್ಷದಿಂದ 2 ಲಕ್ಷ ರೂ.ಗಳಿಗೆ ಏರಿಸಲಾಗಿದೆ.

ವಿಧವೆಯರ ಪುನರ್ವಿವಾಹಕ್ಕೆ 3 ಲಕ್ಷ ರೂ.: ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ವಿಧವೆಯರು ಮರುಮದುವೆಯಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ, ಅಂತರ್ಜಾತಿ ವಿವಾಹವಾದರೆ, 2 ಲಕ್ಷ ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಲಾಗಿದೆ. ಜತೆಗೆ ಆ ವರ್ಗದ ಉದ್ಯಮಿಗಳಿಗೆ ಸಾಲಕ್ಕೆ ಖಾತರಿ ನೀಡಲು 100 ಕೋಟಿ ರೂ. ಮೂಲ ನಿಧಿ ಸ್ಥಾಪನೆ ಸೇರಿದಂತೆ 2017-18 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 6,363 ಕೋಟಿ ರೂ. ಮೀಸಲಿಡಲಾಗಿದೆ. 

ಹಿಂದುಳಿದ ಜಾತಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂ.: ‘ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಹಾಸ್ಟೆಲ್‌ಗ‌ಳಲ್ಲಿ ಡಿಜಿಟಲ್‌ ಗ್ರಂಥಾಲಯ, ಐಐಎಂ, ಐಐಟಿ ಹಾಗೂ ಐಐಎಸ್‌ಸಿಯಂತಹ  ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಒಂದು ಬಾರಿ 2 ಲಕ್ಷ ರೂ. ಸಹಾಯಧನ ನೀಡಲು  ಸರ್ಕಾರ ತೀರ್ಮಾನಿಸಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ 100 ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ ಮಂಜೂರು ಮಾಡಲು ಘೋಷಿಸಲಾಗಿದೆ. ಈ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3,154 ಕೋಟಿ ರೂ. ಮೀಸಲಿಡಲಾಗಿದೆ.

– ಭೂರಹಿತ ಕೃಷಿಕಾರ್ಮಿಕರಿಗೆ  ಜಮೀನು ಖರೀದಿಗೆ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ನೆರವು ಹೆಚ್ಚಳ

– ಆದಿವಾಸಿಗಳ ಸಮುದಾಯ ಭವನಕ್ಕೆ 15 ಕೋಟಿ ರೂ. ನೆರವು, ವಿಧವೆಯರ ಪುನರ್ವಿವಾಹಕ್ಕೂ ಪ್ರೋತ್ಸಾಹ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.