ಅಹಿಂದ ಕಲ್ಯಾಣಕ್ಕೆ ಭರಪೂರ ನೆರವು


Team Udayavani, Mar 16, 2017, 3:30 AM IST

Ahinda-15-3.jpg

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಈ ಬಜೆಟ್‌ನಲ್ಲಿಯೂ ಎದ್ದು ಕಾಣುತ್ತಿದ್ದು, ಅಹಿಂದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ಸ್ವದ್ಯೋಗ ಕೈಗೊಳ್ಳಲು ಪ್ರೋತ್ಸಾಹ ಧನ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಜೊತೆಗೆ ಪ್ರೋತ್ಸಾಹಧನ ಹಾಗೂ ಎಸ್ಸಿ ಎಸ್ಟಿ ಸಮುದಾಯದ 2 ಲಕ್ಷ ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವುದು ಸೇರಿದಂತೆ ಅಹಿಂದ ವರ್ಗದ ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಲಕ್ಷ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ತರಬೇತಿ: 2017-18ನೇ ಸಾಲಿನಲ್ಲಿ ಪ್ರಮುಖವಾಗಿ ಪ್ರತಿ ಜಿಲ್ಲೆಗೊಂದರಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸಿ, ಪಿಯುಸಿವರೆಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ. ಒಂದು ಲಕ್ಷ ಎಸ್ಸಿ ಎಸ್ಟಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವುದು. ಎಸ್ಸಿ ಎಸ್ಟಿ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಬುಕ್‌ ಬ್ಯಾಂಕ್‌ ಸ್ಥಾಪನೆ. ಭೂ ರಹಿತ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು 10 ಲಕ್ಷದಿಂದ 15 ಲಕ್ಷ ರೂಪಾಯಿಗೆ ನೆರವು ಹೆಚ್ಚಿಸುವುದು. ಸ್ವಉದ್ಯೋಗ ಕೈಗೊಳ್ಳಲು ಶೇ.50ರ ಸಬ್ಸಿಡಿ ದರದಲ್ಲಿ 2000 ಯುವಕರಿಗೆ 5 ಲಕ್ಷದವರೆಗೆ ಸಹಾಯಧನ ನೀಡುವುದು. 5 ಸಾವಿರ ಯುವಕರಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯಡಿ 3 ಲಕ್ಷ ರೂ.ವರೆಗೆ ನೆರವು ನೀಡಲು ನಿರ್ಧರಿಸಲಾಗಿದೆ.

ಆದಿವಾಸಿಗಳ ಸಮುದಾಯ ಭವನಕ್ಕೆ15 ಕೋಟಿ ರೂ.: ಕಾನೂನು ಪದವೀಧರರ ಮಾಸಿಕ ಭತ್ಯೆಯನ್ನು 2 ಸಾವಿರ ರೂ.ನಿಂದ 5 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಆದಿವಾಸಿಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸಮುದಾಯಭವನ ನಿರ್ಮಾಣಕ್ಕೆ 15 ಕೋಟಿ ರೂ. ಮೀಸಲಿಡಲಾಗಿದೆ. ಬಿಪಿಎಲ್‌ ಕುಟುಂಬಗಳ ಗೃಹ ನಿರ್ಮಾಣಕ್ಕೆ ನಿಗದಿಪಡಿಸಿದ ಮೊತ್ತವನ್ನು ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷದಿಂದ 1.75 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 1.8 ಲಕ್ಷದಿಂದ 2 ಲಕ್ಷ ರೂ.ಗಳಿಗೆ ಏರಿಸಲಾಗಿದೆ.

ವಿಧವೆಯರ ಪುನರ್ವಿವಾಹಕ್ಕೆ 3 ಲಕ್ಷ ರೂ.: ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ವಿಧವೆಯರು ಮರುಮದುವೆಯಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ, ಅಂತರ್ಜಾತಿ ವಿವಾಹವಾದರೆ, 2 ಲಕ್ಷ ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಲಾಗಿದೆ. ಜತೆಗೆ ಆ ವರ್ಗದ ಉದ್ಯಮಿಗಳಿಗೆ ಸಾಲಕ್ಕೆ ಖಾತರಿ ನೀಡಲು 100 ಕೋಟಿ ರೂ. ಮೂಲ ನಿಧಿ ಸ್ಥಾಪನೆ ಸೇರಿದಂತೆ 2017-18 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 6,363 ಕೋಟಿ ರೂ. ಮೀಸಲಿಡಲಾಗಿದೆ. 

ಹಿಂದುಳಿದ ಜಾತಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂ.: ‘ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಹಾಸ್ಟೆಲ್‌ಗ‌ಳಲ್ಲಿ ಡಿಜಿಟಲ್‌ ಗ್ರಂಥಾಲಯ, ಐಐಎಂ, ಐಐಟಿ ಹಾಗೂ ಐಐಎಸ್‌ಸಿಯಂತಹ  ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಒಂದು ಬಾರಿ 2 ಲಕ್ಷ ರೂ. ಸಹಾಯಧನ ನೀಡಲು  ಸರ್ಕಾರ ತೀರ್ಮಾನಿಸಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ 100 ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ ಮಂಜೂರು ಮಾಡಲು ಘೋಷಿಸಲಾಗಿದೆ. ಈ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3,154 ಕೋಟಿ ರೂ. ಮೀಸಲಿಡಲಾಗಿದೆ.

– ಭೂರಹಿತ ಕೃಷಿಕಾರ್ಮಿಕರಿಗೆ  ಜಮೀನು ಖರೀದಿಗೆ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ನೆರವು ಹೆಚ್ಚಳ

– ಆದಿವಾಸಿಗಳ ಸಮುದಾಯ ಭವನಕ್ಕೆ 15 ಕೋಟಿ ರೂ. ನೆರವು, ವಿಧವೆಯರ ಪುನರ್ವಿವಾಹಕ್ಕೂ ಪ್ರೋತ್ಸಾಹ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.