ಐಐಎಸ್ಸಿ ದಾಳಿ: ಶಂಕಿತ ಆರೋಪಿ ಶೀಘ್ರ ನಗರಕ್ಕೆ
Team Udayavani, Mar 19, 2017, 3:50 AM IST
ಬೆಂಗಳೂರು: ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಆವರಣದಲ್ಲಿ 2005ರಲ್ಲಿ ನಡೆದಿದ್ದ ಉಗ್ರ ದಾಳಿಯ ಶಂಕಿತ ಆರೋಪಿ ಯನ್ನು ಶೀಘ್ರ ನಗರಕ್ಕೆ ಕರೆತರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಉಗ್ರ ನಿಗ್ರಹ ದಳ ಹಾಗೂ ತ್ರಿಪುರಾ ಪೊಲೀಸರು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಜೋಗೇಂದ್ರ ನಗರದ ಶಂಕಿತ ಆರೋಪಿ ಹಬೀಬ್ ಮಿಯಾ (37) ಎಂಬಾತನನ್ನು ಅಗರ್ತಲಾ ಬಳಿ ಬಂಧಿಸಲಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಐಐಎಸ್ಸಿ ದಾಳಿಯ ಶಂಕಿತ ಆರೋಪಿ
ಯನ್ನು ತ್ರಿಪುರಾದ ಜೋಗೇಂದ್ರ ನಗರದಲ್ಲಿ ವಶಕ್ಕೆ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಕೋರ್ಟ್ ಅನುಮತಿ ನೀಡಿದ ಕೂಡಲೇ ಆರೋಪಿಯನ್ನು ನಗರಕ್ಕೆ ಕರೆತರಲಾಗುವುದು ಎಂದರು.
ಹವಾಮಾನ ಪರಿಸ್ಥಿತಿ ಆಧರಿಸಿ ಶನಿವಾರ ಅಥವಾ ರವಿವಾರ ಆರೋಪಿಯನ್ನು ವಿಮಾನದ ಮೂಲಕ ನಗರಕ್ಕೆ ಕರೆತರಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 2005ರ ಡಿ. 28ರಂದು ಬೆಂಗಳೂರಿನ ಐಐಎಸ್ಸಿ ಆವರಣಕ್ಕೆ ನುಗ್ಗಿದ ಉಗ್ರರು, ಗುಂಡಿನ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್