ಎಸ್.ಎಂ. ಕೃಷ್ಣ ಇಂದು ದಿಲ್ಲಿಗೆ
Team Udayavani, Mar 20, 2017, 10:47 AM IST
ಬೆಂಗಳೂರು: ಸಹೋದರಿ ನಿಧನದಿಂದಾಗಿ ಬಿಜೆಪಿ ಸೇರುವ ದಿನಾಂಕ ಮುಂದೂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇದೀಗ ಆ ನಿಟ್ಟಿನಲ್ಲಿ ಮತ್ತೆ ಸೋಮವಾರ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲಿರುವ ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರ್ಪಡೆಗೆ ದಿನಾಂಕ ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ನಿಗದಿಯಾಗಿದ್ದಂತೆ ಮಾ. 15ರಂದು ಕೃಷ್ಣ ಅವರು ಬಿಜೆಪಿ ಸೇರಬೇಕಿತ್ತು. ಅದರಂತೆ ಅವರು ಮಾ. 14ರಂದು ದಿಲ್ಲಿಗೆ ತೆರಳಿದ್ದರಾದರೂ ಸಹೋದರಿ ನಿಧನರಾಗಿದ್ದರಿಂದ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿ ಬೆಂಗಳೂರಿಗೆ ವಾಪಸಾಗಿದ್ದರು.
ನಿಧನರಾದ ಸಹೋದರಿಯ ವೈಕುಂಠ ಸಮಾರಾಧನೆ ಮುಗಿಯುವವರೆಗೆ ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರುವುದಿಲ್ಲ ಎಂದು ಹೇಳಲಾಗುತ್ತಿತ್ತಾದರೂ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುನ್ನವೇ ಅವರು ಬಿಜೆಪಿ ಸೇರಬೇಕು ಎಂಬ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಈ ಕುರಿತು ಅಮಿತ್ ಶಾ ಅವರೊಂದಿಗೆ ಚರ್ಚಿಸಲು ದಿಲ್ಲಿಗೆ ತೆರಳುತ್ತಿದ್ದಾರೆ. ಅಮಿತ್ ಶಾ ಜತೆಗಿನ ಮಾತುಕತೆ ಬಳಿಕ ಬಿಜೆಪಿ ಸೇರುವ ದಿನಾಂಕ ನಿಗದಿಯಾಗಲಿದೆ.
ಕೃಷ್ಣ ಬಿಜೆಪಿ ಸೇರ್ಪಡೆ ವಿರುದ್ಧ ಮೋದಿಗೆ ಪತ್ರ: ಹಿರೇಮಠ
ಹುಬ್ಬಳ್ಳಿ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ 180 ಎಕ್ರೆ ಅರಣ್ಯ ಪ್ರದೇಶ ಕಬಳಿಸಿದ ಅಳಿಯ ವಿ.ಜಿ. ಸಿದ್ಧಾರ್ಥನ ಅಕ್ರಮಕ್ಕೆ ಬೆಂಬಲ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಬಿಜೆಪಿಗೆ ಆಹ್ವಾನಿಸಬಾರದೆಂದು ಪ್ರಧಾನಿ ಮೋದಿಗೆ ಪತ್ರ ಬರೆಯಲಾಗುವುದು ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ತಿಳಿಸಿದ್ದಾರೆ. ವಿ.ಜಿ. ಸಿದ್ಧಾರ್ಥ ಕಾನೂನುಬಾಹಿರವಾಗಿ ಅರಣ್ಯ ಕಬಳಿಸಿದ್ದಾರೆ. ಅಳಿಯನನ್ನು ಉಳಿಸಲು ಯತ್ನಿಸಿರುವ ಎಸ್.ಎಂ. ಕೃಷ್ಣ ಉನ್ನತ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ರಾಷ್ಟ್ರಪತಿ ಅಥವಾ ಉಪರಾಷ್ಟ್ರಪತಿ ಸ್ಥಾನದ ಮೇಲೆ ಕಣ್ಣಿಟ್ಟು ಬಿಜೆಪಿ ಸೇರುತ್ತಿದ್ದಾರೆ. ಕಾಳಧನದ ವಿರುದ್ಧ ಸಮರ ಸಾರಿರುವ ಪ್ರಧಾನಿ ಅವರು ಕೃಷ್ಣ ಅಂತಹವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ