ಉಷ್ಣಾಂಶ ಏರಿಕೆ: ಈ ಬಾರಿ ಮಾವು ಇಳುವರಿ ಇಳಿಕೆ?


Team Udayavani, Mar 20, 2017, 12:47 PM IST

Mango-Crop-600.jpg

ಚಿತ್ರದುರ್ಗ: ರೈತರನ್ನು ಎಡೆಬಿಡದೆ ಕಾಡುತ್ತಿರುವ ಬರ, ಮಳೆ ಕೊರತೆ ಹಾಗೂ ರೋಗ ಬಾಧೆಯಿಂದಾಗಿ ‘ಹಣ್ಣುಗಳ ರಾಜ’ ಮಾವಿನ ಫಸಲು ಈ ಬಾರಿ ಕಡಿಮೆಯಾಗುವ ಲಕ್ಷಣ ಗೋಚರಿಸುತ್ತಿದೆ. ಅಂತರ್ಜಲ ಕಡಿಮೆಯಾಗಿದ್ದರಿಂದ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ. ಉಷ್ಣಾಂಶದಲ್ಲಿ ತೀವ್ರ ಏರಿಕೆಯಾಗುತ್ತಿರುವುದು ಮಾವಿನ ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮಾವಿನ ಇಳುವರಿ ಕುಸಿತದಿಂದ ಬೇಸತ್ತ ಬೆಳೆಗಾರರು ಫಸಲಿಗೆ ಬಂದಿರುವ ಮಾವಿನಮರಗಳಿಗೆ ಕೊಡಲಿಪೆಟ್ಟು ಹಾಕುತ್ತಿದ್ದಾರೆ. ಅಲ್ಲದೆ ಹವಾಮಾನ ವೈಪರೀತ್ಯದಿಂದ ಮಾವಿನ ಇಳುವರಿ ಶೇ.30ರಿಂದ 50ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತೋಟಗಾರಿಕಾ ತಜ್ಞರು.

ಮಾವಿನ ಫಸಲು ಅರ್ಧಕ್ಕರ್ಧ ಕಡಿಮೆಯಾದರೆ ಸಹಜವಾಗಿ ಮಾವಿನಹಣ್ಣಿನ ಬೆಲೆ ಗಗನಕ್ಕೇರಲಿದೆ. ಇದರಿಂದ ಗ್ರಾಹಕರ ಜೇಬಿಗೂ ಕತ್ತರಿ ಬೀಳಲಿದೆ. ಹೀಗಾಗಿ ಬೆಳೆಗಾರರು ಹಾಗೂ ಗ್ರಾಹಕರಿಗೆ ಈ ಬಾರಿ ಮಾವು ಕಹಿಯಾದರೆ, ಮಧ್ಯವರ್ತಿಗಳು ಹಾಗೂ ವ್ಯಾಪಾರಿಗಳಿಗೆ ಭರಪೂರ ಲಾಭವಾಗುವ ಸಾಧ್ಯತೆ ಇದೆ. ‘ಹಣ್ಣುಗಳ ರಾಜ’ ಮಾವು ಕಡಿಮೆ ನೀರು ಬೇಡುವ ಬೆಳೆ. ಬಯಲುಸೀಮೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯನ್ನಾಗಿ ಮಾವು ಬೆಳೆಯಲಾಗುತ್ತಿದೆ. ಪ್ರಪಂಚದ ಒಟ್ಟು ಮಾವು ಬೆಳೆ ಕ್ಷೇತ್ರದ ಶೇ.63ರಷ್ಟನ್ನು ಭಾರತೀಯ ರೈತರೇ ಬೆಳೆಯುತ್ತಿದ್ದಾರೆ.

ಕರ್ನಾಟಕದ ಸುಮಾರು 1,73,080 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದ್ದು, ವಾರ್ಷಿಕ ಸುಮಾರು 16,41,165 ಟನ್‌ ಹಣ್ಣು ಉತ್ಪಾದನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಮುಖವಾಗಿ ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಾವು ಬೆಳೆಯಲಾಗುತ್ತಿದೆ. ಅತ್ಯುತ್ತಮ ತಳಿಗಳಾದ ಆಪೂಸ್‌ (ಬಾದಾಮಿ), ಪೈರಿ (ರಸಪೂರಿ), ತೋತಾಪುರಿ, ನೀಲಂ, ಮಲಗೋವಾ, ಮಲ್ಲಿಕಾ, ಬಂಗನಪಲ್ಲಿ, ಅಮರಪಲ್ಲಿ, ಅರ್ಕಾಪುನೀತ್‌, ಅರ್ಕಾನೀಲ್‌ ಕಿರಣ್‌, ಸಿಂಧೂ, ರತ್ನ ತಳಿಗಳನ್ನು ರೈತರು ಬೆಳೆಯುತ್ತಿದ್ದಾರೆ.

ಮಾವಿನ ಹೂವು ಕಾಯಿ ಕಟ್ಟಲಿಲ್ಲ: ರಾಜ್ಯವನ್ನು ಕಾಡುತ್ತಿರುವ ಬರ, ಮುಂಗಾರು- ಹಿಂಗಾರು ಮಳೆ ಕೊರತೆ, ವಾತಾವರಣದಲ್ಲಿ ತೇವಾಂಶ ಇಲ್ಲದಿರುವುದು ಮಾವಿನ ಫಸಲು ಕಡಿಮೆಯಾಗಲು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಭೂಮಿಯಲ್ಲಿ ತೇವಾಂಶ ಕೊರತೆಯಿಂದಾಗಿ ಮಾವಿನ ಹೂವು ಬಿಡುವ ಸಂದರ್ಭದಲ್ಲಿ ಹೆಚ್ಚು ಬಿಡಲಿಲ್ಲ. ನಿಂತ ಹೂವುಗಳು ಕೂಡ ಕಾಯಿ ಕಟ್ಟಲಿಲ್ಲ. ಮಾವಿನ ಬೆಳೆಗೆ ಕೀಟ, ರೋಗಗಳ ಬಾಧೆ ಮತ್ತು ಪೋಷಕಾಂಶಗಳ ಕೊರತೆಯಿಂದಲೂ ಸಹ ಇಳುವರಿ ಕಡಿಮೆಯಾಗಿದೆ. ಜೊತೆಗೆ ಕಾಂಡಕೊರಕ ರೋಗವೂ ಕಾಣಿಸಿಕೊಂಡು ಬೆಳೆಗಾರರ ನಿದ್ದೆಗೆಡಿಸಿದೆ. ಬರ, ತೇವಾಂಶ ಕೊರತೆ,ವಾತಾವರಣದಲ್ಲಿ ಉಷ್ಣಾಂಶ ಏರಿಕೆ, ಮಾವಿನ ಮರಗಳಿಗೆ ಕಾಡಿದ ರೋಗ, ಕೀಟ ಬಾಧೆಯಿಂದಾಗಿ ಮಾವಿನ ಇಳುವರಿ ಶೇ.50ರಷ್ಟು ಕಡಿಮೆಯಾಗಿದೆ. ಮರವನ್ನು ಕಾಡುತ್ತಿರುವ ಕಾಂಡ ಕೊರಕ ರೋಗದಿಂದ ಮಾವಿನ ಮರಗಳನ್ನು ಕಡಿದು ಹಾಕಲಾಗುತ್ತಿದೆ.
ವಿಜಯಕುಮಾರ್‌, ಮಾವು ಬೆಳೆಗಾರ, ಹಿರೇಎಮ್ಮಿಗನೂರು

ಕಾಂಡಕೊರಕ ರೋಗದಿಂದ ಬೆಳೆಗಾರರು ಮಾವಿನ ಮರಗಳನ್ನು ಕಡಿದು ಹಾಕುತ್ತಿದ್ದಾರೆ. ಮಾವಿನ ಮರಗಳ ಪುನಶ್ಚೇತನಕ್ಕೆ ಪ್ರತ್ಯೇಕ ಯೋಜನೆ ಇದೆ. ಯಾವುದೇ ಕಾರಣಕ್ಕೂ ಮರವನ್ನು ಕಡಿಯದೆ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಮಾವು ಇಳುವರಿ ಹೆಚ್ಚಿಸಲು ಮುಂದಾಗಬೇಕು.
– ಡಾ| ಬಾಲಕೃಷ್ಣ, ತೋಟಗಾರಿಕೆ ಇಲಾಖೆ ಉಪನಿರ್ದೇಶ

– ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.