ರಣತಂತ್ರ ಬದಲಿಸಿದ ‘ಪಂಚ ಫ‌ಲಿತಾಂಶ’


Team Udayavani, Mar 20, 2017, 12:52 PM IST

Kumaraswamy-H-D-4-600.jpg

ಬೆಂಗಳೂರು: ಪಂಚರಾಜ್ಯ ಅದರಲ್ಲೂ ವಿಶೇಷವಾಗಿ ಉತ್ತರಪ್ರದೇಶ ಚುನಾವಣಾ ಫ‌ಲಿತಾಂಶದ ನಂತರ ರಾಜ್ಯದಲ್ಲಿ ಜೆಡಿಎಸ್‌ ಚುನಾವಣಾ ರಣತಂತ್ರ ಬದಲಾಯಿಸಿಕೊಳ್ಳಲು ಮುಂದಾಗಿದ್ದು ‘ನಾಲ್ಕು ಸೂತ್ರ’ಕ್ಕೆ ಶರಣಾಗಿದೆ. ಒಂದು ವರ್ಷ ನಿರಂತರ ಸಮಾವೇಶ, ಜನಸಂಪರ್ಕ ಸಭೆ ಮತ್ತು ಗ್ರಾಮವಾಸ್ತವ್ಯ, ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆ, ಸ್ಥಳೀಯ ಸಮಸ್ಯೆ ಹಾಗೂ ಯುವ ನಾಯಕತ್ವಕ್ಕೆ ಆದ್ಯತೆ. ಈ ನಾಲ್ಕು ಸೂತ್ರದ ಆಧಾರದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದ್ದು. ಇದಕ್ಕಾಗಿಯೇ ಜೆಡಿಎಸ್‌ ಕೋರ್‌ ಕಮಿಟಿ ಸದಸ್ಯರನ್ನೂ ಒಳಗೊಂಡ ನಾನಾ ಕ್ಷೇತ್ರದ ಯುವ ತಜ್ಞರ ‘ಥಿಂಕ್‌ ಟ್ಯಾಂಕ್‌’ ತಂಡವೂ ರಚನೆಯಾಗಿದೆ.

ಈ ತಂಡ ಈಗಾಗಲೇ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲೂ ಸಮೀಕ್ಷೆ ನಡೆಸಿ ಸ್ಥಳೀಯ ಸಮಸ್ಯೆ, ವರ್ಚಸ್ವಿ ಹಾಗೂ ಪ್ರಭಾವಿ ಯುವ ನಾಯಕತ್ವ, ಗ್ರಾಮವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಳ್ಳಬಹುದಾದ ಪ್ರದೇಶಗಳ ಬಗ್ಗೆ ಪಟ್ಟಿ ಸಿದ್ಧಪಡಿಸಿದೆ. ಜನತೆ ಜತೆ ನಿರಂತರವಾಗಿ ಸಂಪರ್ಕ ಸಾಧಿಸುವ ‘ನಮ್ಮ ಎಚ್‌ಡಿಕೆ’ ಸಾಮಾಜಿಕ ಜಾಲತಾಣ ಹಾಗೂ ಬೆಂಗಳೂರಿನಲ್ಲಿ ಓಲಾ -ಉಬರ್‌ ಮಾದರಿಯಲ್ಲೇ ಟ್ಯಾಕ್ಸಿ ಚಾಲಕರಿಗಾಗಿ ಸಿದ್ಧಗೊಳ್ಳುತ್ತಿರುವ ‘ಎಚ್‌ಡಿಕೆ ಆ್ಯಪ್‌’ ಹಿಂದಿರುವುದು ಇದೇ ‘ಥಿಂಕ್‌ ಟ್ಯಾಂಕ್‌’ ಟೀಂ. ಜೆಡಿಎಸ್‌, ಮುಂದಿನ ಮೂರು ವರ್ಷದ ಯೋಜನೆ ಸಿದ್ಧಪಡಿಸಿದ್ದು 2018ರ ವಿಧಾನಸಭೆ, 2019ರ ಲೋಕಸಭೆ ಹಾಗೂ 2020ರಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ರಣತಂತ್ರ ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಕರ್ನಾಟಕ ಭಾಗದಲ್ಲಿ ಗ್ರಾಮವಾಸ್ತವ್ಯ, ಹಳೇ ಮೈಸೂರು ಭಾಗದಲ್ಲಿ ಜನಸಂಪರ್ಕ ಸಭೆ, ಉಳಿದ ಕಡೆ ಸಮಾವೇಶಗಳ ಮೂಲಕ ಪಕ್ಷದ ವರ್ಚಸ್ಸು ವೃದ್ಧಿಸುವುದು. ಸ್ಥಳೀಯವಾಗಿ ಪ್ರಭಾವ ಇರುವ ಯುವಸಮೂಹವನ್ನು ಪಕ್ಷದತ್ತ ಸೆಳೆಯಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಪ್ರಭಾವಿ ಮಾಧ್ಯಮವಾದ ಸಾಮಾಜಿಕ ಜಾಲತಾಣದ ಮೂಲಕ ನಿರಂತರವಾಗಿ ಜನಸಮೂಹದ ಜತೆ ಸಂಪರ್ಕ ಸಾಧಿಸಲು ಹಾಗೂ ಜಿಲ್ಲಾ ಮತ್ತು ವಿಭಾಗಾವಾರು ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಡುವ ಸಲುವಾಗಿಯೇ 30 ಯುವಕರ ತಂಡ ರಚಿಸಲಾಗಿದೆ ಎಂದು ಹೇಳಲಾಗಿದೆ.

‘ಶ್ರಮಜೀವಿ’ ಸಮಾವೇಶ: ಒಂದು ವರ್ಷ ನಿರಂತರ ಸಮಾವೇಶ ನಡೆಸಲು ತೀರ್ಮಾನಿಸಿರುವ ಜೆಡಿಎಸ್‌, ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬವಾದ ಮೇ 18ರಂದು ‘ಶ್ರಮಜೀವಿ’ ಹೆಸರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ತೀರ್ಮಾನಿಸಿದೆ. ಆ ಸಮಾವೇಶಕ್ಕೆ ಜನತಾಪರಿವಾರದ ಎಲ್ಲ ನಾಯಕರಿಗೂ ಆಹ್ವಾನ ನೀಡಲು ನಿರ್ಧರಿಸಲಾಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಪ್ರಾದೇಶಿಕ ಪಕ್ಷ ಅಗತ್ಯವೆಂಬ ಪ್ರತಿಪಾದನೆ ಜತೆಗೆ ಅದೇ ಕಾರಣಕ್ಕೆ ಈ ವಯಸ್ಸಿನಲ್ಲಿಯೂ ದೇಶ ಹಾಗೂ ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ ದೇವೇಗೌಡರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂಬುದನ್ನು ಬಿಂಬಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ನಿರಂತರ ಸಮಾವೇಶಗಳಿಗೆ ಮಾ.23 ರಂದು ಚಾಲನೆ ನೀಡಿ, ಆ ನಂತರ ಚಿತ್ರದುರ್ಗ, ಹುಬ್ಬಳ್ಳಿ, ಮೈಸೂರು, ಕಲಬುರಗಿ, ಬಳ್ಳಾರಿ ಭಾಗದಲ್ಲಿ ಹಿಂದುಳಿದ, ಅಲ್ಪಸಂಖ್ಯಾತ, ಮಹಿಳಾ ಸಮಾವೇಶ ನಡೆಸಲು ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಲನೆಯಾಗದ ಎಚ್‌ಡಿಕೆ ಹತ್ತು ದಿನ ಹುಬ್ಬಳ್ಳಿ ವಾಸ್ತವ್ಯ
ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಹಾಗೂ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಲು ತಿಂಗಳಲ್ಲಿ ಹತ್ತು ದಿನ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುತ್ತೇನೆಂದು ಹೇಳಿದ್ದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಅಲ್ಲಿ ಮನೆ ಮಾಡಿ ಗೃಹಪ್ರವೇಶ ಮಾಡಿದರೂ ತಿಂಗಳಲ್ಲಿ ಹತ್ತು ದಿನ ವಾಸ್ತವ್ಯ ಮಾಡುತ್ತಿಲ್ಲ. ಪ್ರಾರಂಭದಲ್ಲಿ ಕೆಲ ದಿನ, ಆ ನಂತರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಇದ್ದದ್ದು, ಇತ್ತೀಚೆಗೆ ಪ್ರವಾಸ ಕೈಗೊಂಡಾಗ ಹೋಗಿ ಬಂದದ್ದು ಬಿಟ್ಟರೆ ಹುಬ್ಬಳ್ಳಿ ಮನೆ ‘ಖಾಲಿ’ಯಾಗಿಯೇ ಇರುತ್ತದೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಅನಾರೋಗ್ಯ, ವಿಧಾನಸಭೆ ಅಧಿವೇಶದಿಂದಾಗಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲು ಸಾಧ್ಯವಾಗುತ್ತಿಲ್ಲ. ಏ.1 ರ ನಂತರ 15 ದಿನ ಹುಬ್ಬಳ್ಳಿಯಲ್ಲೇ ಕುಮಾರಸ್ವಾಮಿ ಇರಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸುತ್ತವೆ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.