ಇನ್ಫಿಯ ಕಿರಿಯ ಸಿಬ್ಬಂದಿಗಿಲ್ಲ ಎಚ್‌-1ಬಿ ಭಾಗ್ಯ!


Team Udayavani, Mar 21, 2017, 3:50 AM IST

20-PTI-1.jpg

ಬೆಂಗಳೂರು: ಸಂಸ್ಥೆಯ ಯಾವುದೇ ಕಿರಿಯ ಉದ್ಯೋಗಿಗಳು ಇನ್ನು ಎಚ್‌- 1ಬಿ ವೀಸಾಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಐಟಿ ದಿಗ್ಗಜ ಇನ್ಫೋಸಿಸ್‌ ತನ್ನ ಸಿಬ್ಬಂದಿಗೆ ಸೂಚನೆ ಹೊರಡಿಸಿದೆ. ಐಟಿ ಉದ್ಯೋಗದ ಹೊಸ್ತಿಲಲ್ಲೇ ಅಮೆರಿಕದ ಕನಸು ಕಾಣುವ ಸಂಸ್ಥೆಯ ಆಕಾಂಕ್ಷಿಗಳಿಗೆ ಇದರಿಂದ ನಿರಾಶೆ ಆದಂತಾಗಿದೆ.

“ಎಚ್‌- 1ಬಿ ವೀಸಾ ಬಳಸಿಕೊಂಡು ವಿದೇಶಕ್ಕೆ ಹಾರುವ ಪರಿಪಾಠ ನಿಲ್ಲಬೇಕು’ ಎಂದು ಇತ್ತೀಚೆಗಷ್ಟೇ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ ಬೆನ್ನಲ್ಲೇ ಸಂಸ್ಥೆ ಈ ತೀರ್ಮಾನಕ್ಕೆ ಬಂದಿದೆ. ಕನಿಷ್ಠ 4 ವರ್ಷದ ತನಕ ಯಾವ ಸಿಬ್ಬಂದಿಯೂ ಅರ್ಜಿ ಸಲ್ಲಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

“ಸಾಗರೋತ್ತರದ ಮಂದಿ ಭಾರತಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತು ಅಲ್ಲಿನ ಕಿರಿಯ ಉದ್ಯೋಗಿಗಳಿಗೆ ಭಾರತ ಕೆಲಸ ಕೊಟ್ಟಿದೆ. ಎಚ್‌-1ಬಿ ವೀಸಾದ ಕನಸಿನ ಗುಂಗಿನಲ್ಲೇ ಇಲ್ಲಿನ ಕಿರಿಯ ಉದ್ಯೋಗಿಗಳು ಕೆಲಸಕ್ಕೆ ಬರುತ್ತಾರೆ’ ಎಂಬುದು ಸಂಸ್ಥೆಯ ಎಕ್ಸಿಕ್ಯೂಟಿವ್‌ ಒಬ್ಬರ ಮಾತು. ಇದರೊಂದಿಗೆ, ಸಿಸ್ಟಮ್ಸ್‌ ಎಂಜಿನಿಯರ್‌ ಮತ್ತು ಸೀನಿಯರ್‌ ಸಿಸ್ಟಮ್ಸ್‌ ಎಂಜಿನಿಯರುಗಳೂ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಟ್ರಂಪ್‌ ಸರಕಾರದ ಎಚ್‌-1ಬಿ ವೀಸಾ ಕಡಿತ ನೀತಿ ಹಿನ್ನೆಲೆಯಲ್ಲಿ ಈ ಕ್ರಮ ಎನ್ನಲಾಗಿದೆ.

ಯಾರಿಗೂ ಲಾಭ ಇಲ್ಲ:  ಸಂಸ್ಥೆಯ ಈ ಆದೇಶದಿಂದ ಹಿರಿಯ ಉದ್ಯೋಗಿಗಳಿಗೆ ಲಾಭವಂತೂ ಇಲ್ಲ. ಲಿಂಕ್ಡ್ಇನ್‌ನ ಪ್ರಕಾರ, ಅಮೆರಿಕದಲ್ಲಿ 150 ಕೆಲಸ ಖಾಲಿ ಇದೆ ಎಂದು ಕಳೆದ ತಿಂಗಳು ಜಾಹೀರಾತು ಪ್ರಕಟವಾಗಿತ್ತು. ಅನೇಕ ಸಂಸ್ಥೆಗಳು ಕೇವಲ 2 ವರ್ಷದ ಅನುಭವ ಕೇಳಿದ್ದವು. ಈಗ ಹಿರಿಯ (ಅನುಭವಿ) ಸಿಬ್ಬಂದಿಗೆ ಈ ವೀಸಾ ಸೌಲಭ್ಯ ಸಿಕ್ಕರೂ ಪ್ರಯೋಜನವಿಲ್ಲ.. ಸಂಸ್ಥೆ ತೊರೆಯುವ ಉದ್ಯೋಗಿಗಳನ್ನು ಆದಷ್ಟು ತನ್ನಲ್ಲಿಯೇ ಉಳಿಸಿಕೊಳ್ಳಲು ಇನ್ಫೋಸಿಸ್‌ ನಿರ್ಧರಿಸಿದೆ ಎನ್ನಲಾಗಿದೆ.

ಕಾಗ್ನಿಝಂಟ್‌ನ 6 ಸಾವಿರ ಕೆಲಸಕ್ಕೆ ಕತ್ತರಿ?
ವೇತನ ಮೌಲ್ಯಮಾಪನ ಸಮೀಪಿಸುತ್ತಿದ್ದಂತೆ ಐಟಿ ಜಗತ್ತಿನಲ್ಲಿ ಉದ್ಯೋಗ ಕತ್ತರಿ ಪರ್ವ ಆರಂಭಗೊಂಡಿದೆ. ಅಮೆರಿಕದ ಮೂಲದ ಕಾಗ್ನಿಜೆಂಟ್‌ ಸಂಸ್ಥೆ ಇದೀಗ ಭಾರತದಲ್ಲಿ 6 ಸಾವಿರ ಸಿಬ್ಬಂದಿಗೆ ಗೇಟ್‌ಪಾಸ್‌ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ. ಒಟ್ಟಾರೆ 2,65,000 ಸಿಬ್ಬಂದಿ ಇರುವ ಕಾಗ್ನಿಜೆಂಟ್‌ ಸಂಸ್ಥೆಯಲ್ಲಿ ಶೇ.2-3 ಮಂದಿ ಕನಿಷ್ಠ ಕಾರ್ಯನಿರ್ವಹಣೆಗೆ ಒಳಪಟ್ಟಿದ್ದಾರೆ. ಕಂಪೆನಿ ಯಾಂತ್ರೀಕೃತ ಅಳವಡಿಕೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ 6 ಸಾವಿರ ಸಿಬ್ಬಂದಿಯ ಕೆಲಸಕ್ಕೆ ಕುತ್ತು ಬರಲಿದೆ ಎನ್ನಲಾಗಿದೆ. “ಇಂಥ ಕ್ರಮಗಳನ್ನು ಇತರ ಐಟಿ ಕಂಪೆನಿಗಳೂ ಕೈಗೊಳ್ಳುತ್ತವೆ. ನಾವು ಮಾತ್ರ ಅಲ್ಲ’ ಎಂದು ಕಂಪೆನಿ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.