ಅಂಗನವಾಡಿ ನೌಕರರ ಪ್ರತಿಭಟನೆ
Team Udayavani, Jun 12, 2018, 11:44 AM IST
ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿರುವುದು ಹಾಗೂ ಮಕ್ಕಳ ಪೌಷ್ಟಿಕ ಆಹಾರದ ಹಣವನ್ನು ಪೋಷಕರ ಖಾತೆಗೆ ನೇರ ವರ್ಗಾವಣೆ ಮಾಡುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಹಿ ಸಂಗ್ರಹ ಚಳವಳಿ ನಡೆಸಿತು.
ಚಳವಳಿಗೆ ಚಾಲನೆ ನೀಡಿ ಮಾತನಾಡಿದ ಆಹಾರ ತಜ್ಞ ಕೆ.ಸಿ.ರಘು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಖಾಯಂಗೊಳಿಸಬೇಕಾದ ಕೇಂದ್ರ ಸರ್ಕಾರ, ಅಂಗನವಾಡಿಗೆ ಈ ಹಿಂದೆ ನೀಡುತ್ತಿದ್ದ 18,391 ಕೋಟಿ ರೂ. ಅನುದಾನವನ್ನು 2015-16ನೇ ಸಾಲಿನಲ್ಲಿ 8,754 ಕೋಟಿಗೆ ಇಳಿಸಿ ಕೇವಲ ಶೇ.25ರಷ್ಟು ಅನುದಾನ ನೀಡುತ್ತಿದೆ. ಈ ಮೂಲಕ ಅಂಗನವಾಡಿ ವ್ಯವಸ್ಥೆಯನ್ನು ಹಂತ ಹಂತವಾಗಿ ಕಡೆಗಣಿಸುತ್ತಿದೆ ಎಂದು ದೂರಿದರು.
ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮೀ, ದೇಶದಲ್ಲಿ 14 ಲಕ್ಷ ಅಂಗನವಾಡಿ ಕೇಂದ್ರಗಳಿದ್ದು, 11.50 ಕೋಟಿ ಫಲಾನುಭವಿಗಳಿದ್ದಾರೆ. ಉತ್ತಮ ಯೋಜನೆಯನ್ನು ಮೊಟಕುಗೊಳಿಸಿ, ಹಣವನ್ನು ನೇರವಾಗಿ ಮಗುವಿನ ಪೋಷಕರ ಖಾತೆಗೆ ವರ್ಗಾಯಿಸಿದರೆ ಆ ಹಣದಿಂದ ಮಗು, ಗರ್ಭಿಣಿ, ಬಾಣಂತಿಯೇ ಪೌಷ್ಟಿಕ ಆಹಾರ ಸೇವಿಸುತ್ತಾರೆ ಎಂಬುದಕ್ಕೆ ಖಾತ್ರಿ ಏನಿದೆ? ಎಂದು ಪ್ರಶ್ನಿಸಿದರು. ಚಿಂತಕ ಇಂದೂಧರ ಹೊನ್ನಾಪುರ, ಸಂಘದ ಜಿಲ್ಲಾಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ