ಐಟಿ ಕಂಪನಿಗಳಲ್ಲೀಗ ಉದ್ಯೋಗ ನಷ್ಟದ ಭೀತಿ


Team Udayavani, Mar 23, 2017, 3:45 AM IST

IT-23.jpg

ಬೆಂಗಳೂರು/ಚೆನ್ನೈ: ಟೆನ್ಶನ್ .. ಟೆನ್ಶನ್ … ಕ್ಷಣ ಕ್ಷಣಕ್ಕೂ ಕೆಲಸ ಕಳ್ಕೊಬೇಕಾಗುತ್ತಾ ಅನ್ನೋ ತೊಳಲಾಟ! ಹೌದು, ಬೆಂಗಳೂರು ಸೇರಿ ದೇಶದ ಪ್ರಮುಖ ಕೇಂದ್ರಗಳಲ್ಲಿರುವ ದಿಗ್ಗಜ ಐಟಿ ಕಂಪನಿ ಉದ್ಯೋಗಿಗಳಿಗೆ ಈಗ ಯಾವುದೇ ಕ್ಷಣದಲ್ಲಿ  ಕೆಲಸ ಕಳೆದುಕೊಳ್ಳಬೇಕಾಗಿ ಬರುತ್ತದೋ ಎನ್ನುವ ಭೀತಿ ಶುರುವಾಗಿದೆ. ಈಗಾಗಲೇ ಅನೇಕ ಕಂಪನಿಗಳು ಕರ್ತವ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸದ ನೆಪದಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿದರೆ, ಇನ್ನು ಕೆಲ ಕಂಪನಿಗಳು ಈ ಸಿದ್ಧತೆಯಲ್ಲಿವೆ.

ಇದೀಗ ಅಮೆರಿಕದ ಕಾಂಗ್ನಿಜೆಂಟ್‌ ಕಂಪನಿ ಚೆನ್ನೈ ಶಾಖೆಯಲ್ಲಿರುವ ಅಗತ್ಯಕ್ಕಿಂತ ಹೆಚ್ಚಿಗೆ ಇರುವ ಮತ್ತು ನಿರೀಕ್ಷೆಯಂತೆ ಕೆಲಸ ಮಾಡದ 6,000ದಿಂದ 10,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಲೆಕ್ಕಾಚಾರದಲ್ಲಿದೆ. ಉದ್ಯೋಗಿಗಳ ಕಾರ್ಯನಿರ್ವಹಣೆ, ಸೇವಾ ಸಾಮರ್ಥ್ಯಗಳನ್ನು ಒರೆಗೆ ಹಚ್ಚುವ ವಾರ್ಷಿಕ ಮೌಲ್ಯಮಾಪನ (ಆ್ಯನ್ಯುವಲ್‌ ಅಪ್ರೈಸಲ್‌) ಸಂದರ್ಭದಲ್ಲಿಯೇ ಕಂಪನಿಗಳು ತನ್ನ ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲು ಹೊರಟಿವೆ. ಇನ್ಫೋಸಿಸ್‌, ವಿಪ್ರೋ ಮತ್ತು ಟಿಸಿಎಸ್‌ ಕಂಪನಿಗಳೂ ಇದರಿಂದ ಹೊರತಾಗಿಲ್ಲ.  ಇದು ಹೀಗಾದರೆ ಅಮೆರಿಕದಲ್ಲಿ ಅಲ್ಲಿನವರಿಗೆ ಕೆಲಸ ನೀಡಬೇಕೆಂಬ ಒತ್ತಾಯ, ಎಚ್‌-1ಬಿ ವೀಸಾ ಮೇಲೆ ಆ ರಾಷ್ಟ್ರದ ಸಂಸತ್‌ನಲ್ಲಿ ಆರು ವಿಧೇಯಕಗಳ ಮಂಡನೆ ವಿಚಾರಗಳೂ ಭಾರತೀಯರಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗವೆಂದರೆ ಕೊಂಚ ಯೋಚನೆ ಮಾಡುವಂತಾಗಿದೆ.

ಯಾಂತ್ರೀಕೃತ, ಡಿಜಿಟಲೀಕರಣವೂ ಕಾರಣ
ಅಷ್ಟಕ್ಕೂ ಉದ್ಯೋಗಿಗಳ ಪ್ರಮಾಣ ಕಡಿಮೆ ಮಾಡಲು ಇನ್ನೂ ಕೆಲ ಕಾರಣಗಳಿವೆ. ಐಟಿ ಸೇವೆಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದು, ಆಧುನಿಕ ತಂತ್ರಜ್ಞಾನ ಮತ್ತು ಯಾಂತ್ರೀಕೃತ (ಸ್ವಯಂಚಾಲಿತ) ವ್ಯವಸ್ಥೆಗಳ ಕಡೆ ಕಂಪನಿಗಳು ಹೆಚ್ಚಿನ ಒಲವು ಹೊಂದುತ್ತಿರುವುದೂ ಇದಕ್ಕೊಂದು ಕಾರಣವಾಗಿದೆ.

ಇವೆಲ್ಲದರ ಜತೆಗೆ ಬಹುತೇಕ ಐಟಿ ಕಂಪನಿಗಳ ಆದಾಯದ ಶೇ.20ರಷ್ಟು ಆದಾಯ ಯಾಂತ್ರೀಕೃತ ಮತ್ತು ಡಿಜಿಟಲ್‌ ಸೇವೆಗಳನ್ನೇ ಅವಲಂಬಿಸಿದೆ. ಹೀಗಾಗಿ ಕಂಪನಿಗಳು ಇದರತ್ತ ಹೆಚ್ಚಿನ ಒಲವು ಹೊಂದಿವೆ ಎಂದೇ ಹೇಳಲಾಗುತ್ತಿದೆ. ಇವೆಲ್ಲದರ ಜತೆಗೆ ನೋಟುಗಳ ಅಪನಗದೀಕಣ ಅನೇಕ ಸಣ್ಣ-ಪುಟ್ಟ ಕಂಪನಿಗಳ ಆದಾಯದ ಮೇಲೆ ಪರಿಣಾಮ ಬೀರಿದ್ದು, ಹೀಗಾಗಿ ಉದ್ಯೋಗಕ್ಕೆ ಕುತ್ತು ಬಂದಿದೆ ಎನ್ನುವುದೂ ಅಷ್ಟೇ ಸತ್ಯ.

ಎಂಜಿನಿಯರಿಂಗ್‌ ಪದವೀಧರರಿಗೆ ಕತ್ತರಿ
ವರದಿಯ ಪ್ರಕಾರ 2017ರಲ್ಲಿ ಎಂಜಿನಿಯರಿಂಗ್‌ ಪದವೀಧರ ಉದ್ಯೋಗಿಗಳ ಜತೆಗಿನ ಒಪ್ಪಂದ ಪ್ರಕ್ರಿಯೆಯಲ್ಲಿ ಇಳಿಮುಖ ಕಂಡುಬಂದಿದ್ದು, ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳು ಶೇ.40ರಷ್ಟು ಎಂಜಿನಿಯರಿಂಗ್‌ ಪದವೀಧರ ಉದ್ಯೋಗಿಗಳನ್ನು ಕಡಿತಗೊಳಿಸುವ ನಿರ್ಧಾರಕ್ಕೆ ಬಂದಿವೆ ಎನ್ನಲಾಗುತ್ತಿದೆ.

“ಯಾಂತ್ರೀಕೃತ ಮತ್ತು ಡಿಜಿಟಲ್‌ ಸೇವೆ ಸೇರಿ ಒಟ್ಟಾರೆ ತಂತ್ರಜ್ಞಾನ ಕ್ಷೇತ್ರದಲ್ಲಾದ ಕ್ರಾಂತಿಯಿಂದಾಗಿ 2025ರ ವೇಳೆಗೆ ದೇಶದಲ್ಲಿ 20 ಕೋಟಿ ಮಧ್ಯಮ ವರ್ಗದ ಯುವಕರು ಉದ್ಯೋಗವಿಲ್ಲದೇ ಅಥವಾ ಉದ್ಯೋಗ ಕಳೆದುಕೊಂಡು ಪರದಾಡಬೇಕಾದ ಸ್ಥಿತಿ ಬಂದೊದಗಬಹುದು’ ಎಂದು ಕಳೆದ ವರ್ಷ ಕರ್ನಾಟಕ ಐಟಿ ತಜ್ಞ ಮೋಹನದಾಸ್‌ ಪೈ ಹೇಳಿರುವ ಹೇಳಿಕೆ ಈಗ ಇಲ್ಲಿ ಸಾಕಷ್ಟು ಪ್ರಸ್ತುತವೆನಿಸಿದೆ.

ಯಾವೆಲ್ಲ ಕಂಪನಿಗಳು?
* ಸಿಸ್ಕೊ: 2017ನೇ ಸಾಲಿನಲ್ಲಿ ಶೇ.7ರಷ್ಟು ಉದ್ಯೋಗಿಗಳ ವಜಾ ಪ್ರಕಟಣೆ
* ಐಬಿಎಂ: 5000 ಉದ್ಯೋಗಿಗಳ ಕಡಿತಕ್ಕೆ ಮುಂದು
* ಮೈಕ್ರೋಸಾಫ್ಟ್ : 2800 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ನಿರ್ಧರಿಸಿ, ಸ್ಮಾರ್ಟ್‌ಫೋನ್‌ ಬಿಸಿನೆಸ್‌ ಆರಂಭಿಸಲು ಮುಂದು
* ಸ್ನ್ಯಾಪ್‌ಡೀಲ್‌, ಕ್ರಾಫ್ಟ್ಸ್ವಿಲ್ಲಾ, ಸ್ಟೇಝಿಲ್ಲಾ, ಯೆಪ್‌ಮೀ, ಟೊಲೆಕೊÕà ಸೇರಿ ಇನ್ನೂ ಕೆಲ ಕಂಪನಿಗಳಲ್ಲಿ ವೇತನ ಕಡಿತಗೊಳಿಸಿದೆ. ಕೆಲಸದಿಂದ ತೆಗೆಯುತ್ತಿರುವ ಬಗ್ಗೆ ಪಿಂಕ್‌ ಸ್ಲಿಪ್‌ ನೀಡಿವೆ.
* ಸ್ನ್ಯಾಪ್‌ಡೀಲ್‌ 600, ಯೆಪ್‌ಮೀ 30 ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.