ಸಿಎಂ ಸಂಧಾನ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್
Team Udayavani, Mar 23, 2017, 7:00 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಜೊತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಕನಿಷ್ಠ ಹತ್ತು ಸಾವಿರ ರೂಪಾಯಿ ಮಾಸಿಕ ಗೌರವಧನಕ್ಕಾಗಿ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಹೋರಾಟ ಗುರುವಾರ ವಾಪಸ್ ತೆಗೆದುಕೊಂಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ತೀವ್ರಗೊಳಿಸಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಹಾಗೂ ಇತರ ಮುಖಂಡರನ್ನು ಸಿಎಂ ಗೃಹ ಕಚೇರಿಗೆ ಕರೆದೊಯ್ದಿದ್ದರು.
ತಾವು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಪರವಾಗಿದ್ದು, ನಿಮ್ಮ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಯಾವ ಕಾರಣಕ್ಕೂ ಕೊಟ್ಟ ಮಾತು ತಪ್ಪುವುದಿಲ್ಲ. ನೀತಿ ಸಂಹಿತೆ ಸಮಸ್ಯೆ ಇದೆ. ಹಾಗಾಗಿ ಏಪ್ರಿಲ್ 19ರ ಬದಲು, ಏ.10ರಂದೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಮಾತುಕತೆ ನಡೆಸುವಂತೆ ಸಚಿವೆ ಉಮಾಶ್ರೀಗೆ ಸೂಚನೆ ನೀಡಿದ್ದರು. ಅದರಂತೆ ಉಮಾಶ್ರೀ ಅವರು ಮಾತುಕತೆ ನಡೆಸಿದ ಬಳಿಕ, ಪ್ರತಿಭಟನೆ ವಾಪಸ್ ಪಡೆದುಕೊಂಡಿರುವುದಾಗಿ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಫ್ರೀಡಂಪಾರ್ಕ್ ನಲ್ಲಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ