“ಜೆ.ಎಚ್‌.ಪಟೇಲರು ಗುರುಗಳು, ರಾಮಕೃಷ್ಣ ಹೆಗಡೆ ರೋಲ್‌ ಮಾಡಲ್‌’


Team Udayavani, Mar 24, 2017, 3:45 AM IST

ramesh-24.jpg

ವಿಧಾನಸಭೆ: “ಟ್ರಯಲ್‌ ನೋಡೋಣ ಎಂದು ಮದುವೆಯಾದೆ. ನಂತರ ನನ್ನ ಹೆಂಡ್ತಿ ಮತ್ತು ತಾಯಿ ಹೊಂದಿಕೊಂಡು ಹೋಗುವಂತೆ ಹೇಗೋ ಮ್ಯಾನೇಜ್‌ ಮಾಡಿದೆ, ಈಗಲೂ ಮಾಡುತ್ತಿದ್ದೇನೆ’

ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಹೇಳಿದ ಈ ಮಾತು ಸದನದಲ್ಲಿ ಕೆಲಕಾಲ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.ಅಂತರ್‌-ವಿಷಯ ಮತ್ತು ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆಯನ್ನು ವಿಶ್ವವಿದ್ಯಾಲಯವಾಗಿ ರೂಪಿಸುವ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆ ಸಂದರ್ಭದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಸ್ತುತ ವಿಶ್ವವಿದ್ಯಾಲಯಗಳು ಯಾವ ರೀತಿ ಕೆಲಸ ನಿರ್ವಹಿಸುತ್ತವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಿರುವಾಗ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿರುವ ಅಂತರ್‌-ವಿಷಯ ಮತ್ತು ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆಯನ್ನು ವಿಶ್ವವಿದ್ಯಾಲಯವನ್ನಾಗಿ ಪರಿಗಣಿಸುವ ಮೂಲಕ ಅದು ಕೂಡ ಹಾಳಾಗಲು ಅವಕಾಶ ಮಾಡಿಕೊಡಬೇಡಿ ಎಂದು ಆರೋಗ್ಯ ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಮೇಶ್‌ಕುಮಾರ್‌, ನಾನು 27ನೇ ವಯಸ್ಸಿಗೇ ಮದುವೆ ಮಾಡಿಕೊಂಡೆ. ಆ ಸಂದರ್ಭದಲ್ಲಿ ನನ್ನ ಗೆಳೆಯರೆಲ್ಲಾ ಮದುವೆ ನಿನ್ನ ನಡವಳಿಕೆಗೆ ಒಪ್ಪುವುದಿಲ್ಲ ಎಂದು ಎಚ್ಚರಿಸಿದರು. ಹೀಗಾಗಿ ಮದುವೆಯಾದರೆ ಹೆಂಡತಿ ನನ್ನ ತಾಯಿಯನ್ನು ಹೇಗೆ ನೋಡಿಕೊಳ್ಳುತ್ತಾಳೆ, ಕುಟುಂಬದೊಂದಿಗೆ ಹೊಂದಿಕೊಳ್ಳುತ್ತಾಳೆಯೇ ಎಂಬ ಆತಂಕ ಉಂಟಾಯಿತು. ಆದರೂ ಟ್ರಯಲ್‌ ನೋಡೋಣ ಎಂದು ಮದುವೆ ಮಾಡಿಕೊಂಡೆ. ನಂತರ ನನ್ನ ಹೆಂಡ್ತಿ ಮತ್ತು ತಾಯಿ ಹೊಂದಿಕೊಂಡು ಹೋಗುವಂತೆ ಹೇಗೋ ಮ್ಯಾನೇಜ್‌ ಮಾಡಿದೆ. ಈಗಲೂ ಮಾಡುತ್ತಿದ್ದೇನೆ ಎಂದರು.

ಅಷ್ಟರಲ್ಲಿ ಸಚಿವರ ಕಾಲೆಳೆದ ಬಿಜೆಪಿಯ ಸುರೇಶ್‌ಕುಮಾರ್‌, ಟ್ರಯಲ್‌ ನೋಡುವುದಕ್ಕಾಗಿ ಮದುವೆ ಮಾಡಿಕೊಂಡೆ ಎಂದಿರಿ. ಅದರ ಅರ್ಥವೇನು ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್‌ಕುಮಾರ್‌, ನಾನು ನಿಮ್ಮಷ್ಟು ಇನ್ನೋಸೆಂಟ್‌ ವ್ಯಕ್ತಿಯೇನೂ ಅಲ್ಲ. ಯುವಕನಾಗಿದ್ದಾಗ ಸಾಕಷ್ಟು ಕಿಲಾಡಿಯಾಗಿದ್ದೆ. ಜೆ.ಎಚ್‌.ಪಟೇಲರು ನನ್ನ ಗುರುಗಳು, ರಾಮಕೃಷ್ಣ ಹೆಗಡೆ ರೋಲ್‌ ಮಾಡಲ್‌, ಈಗ ನಿಮ್ಮೊಂದಿಗೆ (ಬಿಜೆಪಿ) ಸೇರಿಕೊಂಡಿದ್ದಾರಲ್ಲಾ ಎಸ್‌.ಎಂ.ಕೃಷ್ಣ ಅವರ ಬಗ್ಗೆ ಅಮಿತವಾದ ಅಭಿಮಾನ ಹೊಂದಿದವನು. ಇನ್ನೇನಾದರೂ ಹೇಳಬೇಕೇ ಎಂದು ಪ್ರಶ್ನಿಸಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.