ಕಲಾಪಕ್ಕೆ ಚಕ್ಕರ್, ಚುನಾವಣಾ ಪ್ರಚಾರಕ್ಕೆ ಹಾಜರ್; ಸ್ಪೀಕರ್ ಗರಂ
Team Udayavani, Mar 27, 2017, 1:22 PM IST
ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಪ್ರಚಾರದ ಭರಾಟೆಯಿಂದಾಗಿ ಸೋಮವಾರ ವಿಧಾನಸಭೆ ಕಲಾಪದಲ್ಲಿ ಬಹುತೇಕ ಸಚಿವರು, ಶಾಸಕರು ಗೈರಾಗಿದ್ದರು. ಈ ಗೈರು ಹಾಜರಿ ಬಗ್ಗೆ ಸ್ಪೀಕರ್ ಕೆಬಿ ಕೋಳಿವಾಡ, ಬಿಜೆಪಿ ನಾಯಕ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ಇಂದಿನ ಪ್ರಶ್ನೋತ್ತರ ಕಲಾಪವನ್ನು ಸ್ಪೀಕರ್ ಮಂಗಳವಾರಕ್ಕೆ ಮುಂದೂಡಿದರು.
ವಿಧಾನಸಭೆಯ ಕಲಾಪ ಆರಂಭವಾದಾಗ ಸದನದಲ್ಲಿ ಖಾಲಿ, ಖಾಲಿ ಕುರ್ಚಿಗಳೇ ಕಾಣಿಸಿದ್ದನ್ನು ಕಂಡು, ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ತೀವ್ರ ಬರಗಾಲ ಕಾಡುತ್ತಿದೆ. ಆದರೆ ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಉಪಚುನಾವಣೆಯ ಪ್ರಚಾರವೇ ಮುಖ್ಯವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಶಾಸಕರು, ಸಚಿವರ ದಂಡು ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬೀಡು ಬಿಟ್ಟಿದೆ. ಸದನದಲ್ಲಿ ಸಚಿವರೇ ಇಲ್ಲದ ಮೇಲೆ ಕಲಾಪ ಯಾರಿಗೆ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಸ್ಪೀಕರ್ ಕೆಬಿ ಕೋಳಿವಾಡ ಅವರು ಅಸಮಾಧಾನವ್ಯಕ್ತಪಡಿಸಿ, ಬಜೆಟ್ ಮೇಲೆ ಹೆಚ್ಚು ಮಂದಿ ಸಚಿವರು ಮಾತನಾಡಲಿ ಎಂಬ ಉದ್ದೇಶದಿಂದ ಇಂದಿನ ಪ್ರಶ್ನೋತ್ತರ ಕಲಾಪವನ್ನು ನಾಳೆಗೆ ಮುಂದೂಡಿದ್ದೇನೆ. ಇದರಲ್ಲಿ ಯಾವುದೇ ದುರುದ್ದೇಶ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ