ನಾಳೆಯಿಂದ ಹಾಲು, ಮೊಸರು ತುಟ್ಟಿ


Team Udayavani, Mar 31, 2017, 6:46 AM IST

31-STATE-2.jpg

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹಾಲು ಮತ್ತು ಮೊಸರು ಬೆಲೆ ಹೆಚ್ಚಳ ಮಾಡಿದ್ದು, ಶನಿವಾರದಿಂದಲೇ ಎಲ್ಲ ಮಾದರಿಯ ಹಾಲು, ಮೊಸರು ಲೀಟರ್‌ಗೆ ದಕ್ಷಿಣ ಕರ್ನಾಟಕದಲ್ಲಿ 2 ರೂ. ಹಾಗೂ ಉತ್ತರ ಕರ್ನಾಟಕದಲ್ಲಿ 1 ರೂ. ಹೆಚ್ಚಳವಾಗಲಿದೆ.

ಏಪ್ರಿಲ್‌ 1 ರಿಂದ ಎಲ್ಲಾ ಮಾದರಿಯ ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿಗೆ ದರ ಹೆಚ್ಚಿಸಿ ಕೆಎಂಎಫ್ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತೀವ್ರ ಬರಗಾಲ ಇರುವುದರಿಂದ ಹಾಲು ಉತ್ಪಾದಕರಿಗೆ ಮೇವು ಮತ್ತು ನೀರು ಸಂಗ್ರಹಿಸುವುದು ಕಷ್ಟವಾಗಿರುವುದರಿಂದ ಹೆಚ್ಚಳ ಮಾಡಿರುವ ದರವನ್ನು ಪೂರ್ಣ ವಾಗಿ ಹಾಲು ಉತ್ಪಾದಕರಿಗೆ ಮೊದಲ ದಿನ ದಿಂದಲೇ ನೀಡಲಾಗುವುದು ಎಂದು ಕರ್ನಾಟಕ
ಹಾಲು ಮಹಾ ಮಂಡಳ ತಿಳಿಸಿದೆ.  

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬೆಳಗಾವಿ, ಬಳ್ಳಾರಿ, ಧಾರವಾಡ ಹಾಲು ಒಕ್ಕೂಟ ಸೇರಿದಂತೆ ಐದು ಒಕ್ಕೂಟಗಳ ವ್ಯಾಪ್ತಿಯಲ್ಲಿ ಬರುವ 13 ಜಿಲ್ಲೆಗಳಿಗೆ 1 ರೂ. ಹೆಚ್ಚಳ ಮಾಡಲಾಗಿದ್ದು, ದಕ್ಷಿಣ ಕರ್ನಾಟಕ ಉಳಿದ ಜಿಲ್ಲೆಗಳಿಗೆ ಪ್ರತಿ ಲೀಟರ್‌ ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ದಕ್ಷಿಣ ಕರ್ನಾಟಕದ ಭಾಗಕ್ಕಿಂತಲೂ ಈಗಾಗಲೇ ಪ್ರತಿ ಲೀಟರ್‌ಗೆ ಒಂದು ರೂ. ಹೆಚ್ಚಿಗೆ ಇರುವುದರಿಂದ ರಾಜ್ಯಾದ್ಯಂತ ಏಕ ರೂಪದ ದರ ಜಾರಿಗೆ ತರಲು ಕೆಎಂಎಫ್ ಈ ತೀರ್ಮಾನ ಮಾಡಿದೆ. ರಾಜ್ಯದಲ್ಲಿ 
ಸದ್ಯ 60 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತಿದ್ದು, ಕಳೆದ ವರ್ಷಕ್ಕಿಂತ 1 ಲಕ್ಷ ಲೀಟರ್‌ ಹಾಲಿನ ಉತ್ಪಾದನೆ ಕಡಿಮೆಯಾಗಿದೆ.
ಹಾಲು ಮಾರಟಗಾರರ ಕಮಿಷನ್‌ ಹೆಚ್ಚಿಸದಿರಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಎಲ್ಲ ಹಾಲಿನ ಒಕ್ಕೂಟಗಳು ಲಾಭದಲ್ಲಿದ್ದು, ರೈತರಿಗೆ ಹಾಲು ಉತ್ಪಾದನೆಯಲ್ಲಿ ಸಂಕಷ್ಟ ಇರುವುದರಿಂದ ಅವರ ನೆರವಿಗೆ 
ಬರಲು ದರ ಹೆಚ್ಚಳದ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಮಂಡಳಿಗೆ ಹೆಚ್ಚಿನ ಲಾಭಾಂಶ ದೊರೆಯುವುದಿಲ್ಲ ಎಂದು ಕೆಎಂಎಫ್
ನಿರ್ಗಮಿತ ಅಧ್ಯಕ್ಷ ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.