ಮತ ಖರೀದಿಗೆ ಹಣ ಹಂಚಿದ ಲಕ್ಷ್ಮೀ ಹೆಬ್ಟಾಳ್ಕರ್ ಬಂಧಿಸಿ: ಶೋಭಾ
Team Udayavani, Apr 7, 2017, 3:45 AM IST
ನಂಜನಗೂಡು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ ಖರೀದಿಗೆ ಇಳಿದಿದೆ ಎನ್ನುವುದಕ್ಕೆ ಆ ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಹಣ ಹಂಚುತ್ತಿರುವುದೇ ಸಾಕ್ಷಿಯಾಗಿದೆ ಎಂದ ಸಂಸದೆ ಶೋಭಾ ಕರಂದ್ಲಾಜೆ ದೂರಿದರು.
ಪಟ್ಟಣದಲ್ಲಿ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಧಿಕಾರಿಗಳು ತಕ್ಷಣ ಆಕೆಯನ್ನು ಬಂಧಿಸಬೇಕು. ಆ ಮೂಲಕ ಚುನಾವಣೆಯನ್ನು ಪಾರದರ್ಶಕವಾಗಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷ ವ್ಯಾಪಕವಾಗಿ ಮತ ಖರೀದಿಗಿಳಿದಿದೆ. ಅಧಿಕಾರಿಗಳು ಆಡಳಿತ ಪಕ್ಷದವರೊಂದಿಗೆ ಶಾಮಿಲಾಗಿದ್ದಾರೆ. ಎಲ್ಲೆಡೆ ಹಣ ಹಂಚಿಕೆ ನಡೆದಿದ್ದು, ದೇವರಸನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಸೇವಾದಳದ ಕಾರ್ಯಕರ್ತರು ಸೀರೆ ಹಂಚುವಾಗ ಸೀರೆ ಸಹಿತವಾಗಿ ಸಿಕ್ಕಿಬಿದ್ದಿದ್ದಾರೆ. ಕುರಹಟ್ಟಿಯಲ್ಲಿ ಹಣ ಹಂಚುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ ಪೊಲೀಸರು ಆತನನ್ನು ಹಾಗೆಯೇ ಬಿಡಲು ಕಾರಣವೇನು ಎಂದು ಅವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?