ಕಾಂಗ್ರೆಸ್ ಲಖನ್ ಸ್ವತ್ತಲ್ಲ: ಸತೀಶ ಜಾರಕಿಹೊಳಿ
Team Udayavani, Apr 12, 2017, 11:05 AM IST
ಹುಕ್ಕೇರಿ: ಕಾಂಗ್ರೆಸ್ ಪಕ್ಷ ಲಖನ್ ಜಾರಕಿಹೊಳಿ ಅವರ ಸ್ವತ್ತು ಅಲ್ಲ. ಅದು ಲಕ್ಷಾಂತರ ಕಾರ್ಯಕರ್ತರು ಕಟ್ಟಿ ಬೆಳೆಸಿದ ಹೆಮ್ಮರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಯಮಕನಮರಡಿ ಕ್ಷೇತ್ರಕ್ಕೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪಧಿರ್ಧಿಸಲಿದ್ದು ಹಾಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಬೇರೊಂದು
ಕ್ಷೇತ್ರಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪದೇ ಪದೇ ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಕೊಂಚ ಗರಂ ಆಗಿಯೇ ಉತ್ತರಿಸಿದ ಸತೀಶ, ಕಾಂಗ್ರೆಸ್ ಪಕ್ಷ ಲಖನ್ ಜಾರಕಿಹೊಳಿ ಅವರ ಸ್ವಂತ ಆಸ್ತಿಯೇನು? ಮರಳುಗಾರಿಕೆ, ರಿಯಲ್ ಎಸ್ಟೇಟ್ ಉದ್ಯಮಿಗಳು, ಹಣಬಲ ಇರುವವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ಕಾಂಗ್ರೆಸ್ನಲ್ಲಿ ಇಲ್ಲ ಎಂದು ಖಾರವಾಗಿ ಸಹೋದರರಿಗೆ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ