ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಅಂದವರಿಗೆ ಭ್ರಮನಿರಸನ: ಸಿದ್ದರಾಮಯ್ಯ
Team Udayavani, Apr 13, 2017, 3:55 PM IST
ಬೆಂಗಳೂರು: ಬಿಜೆಪಿ ಮುಖಂಡರ ಎಲ್ಲಾ ಆರೋಪ, ಟೀಕೆಗಳಿಗೆ ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರದ ಮತದಾರರಿ ತಕ್ಕ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇಲ್ಲ ಎಂಬುದು ಸಾಬೀತಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಅಂದವರಿಗೆ ಭ್ರಮನಿರಸನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಗುಂಡ್ಲುಪೇಟೆ, ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಗಳಿಸಿದ ನಂತರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರದ ಜನತೆಗೆ ಕೋಟಿ, ಕೋಟಿ ಧನ್ಯವಾದಗಳು. ಮುಂದಿನ ಸರ್ಕಾರವೂ ನಮ್ಮದೇ. ಉತ್ತರಪ್ರದೇಶದ ರೀತಿ ಕರ್ನಾಟಕದಲ್ಲಿ ನಡೆಯಲ್ಲ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪನವರು ತಾನೇ ಮುಂದಿನ ಮುಖ್ಯಮಂತ್ರಿ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದರು. ಬಿಎಸ್ ವೈ ಮಾತಿಗೆ ಜನ ಸೊಪ್ಪು ಹಾಕಿಲ್ಲ. ಬಿಎಸ್ ವೈ ಏನೇ ಹೇಳಿದ್ರು ಜನ ನಂಬುತ್ತಾರೆ ಎಂಬ ಭ್ರಮೆಯಲ್ಲಿದ್ದರು. ನಾವು ರಾಜ್ಯ ಸರ್ಕಾರದ ಸಾಧನೆಯ ಆಧಾರದ ಮೇಲೆ ಮತ ಯಾಚಿಸಿದ್ದೇವೆ. ನಮಗೆ ಎಲ್ಲಾ ಜಾತಿಯವರು ಮತ ಹಾಕಿದ್ದಾರೆ ಎಂದರು.
ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಕಾರ್ಯಕರ್ತರಿಗೆ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಚುನಾವಣೆಯೂ ನನ್ನ ನೇತೃತ್ವದಲ್ಲೇ ನಡೆಯಲಿದೆ. ಬಿಜೆಪಿಯನ್ನು ಬಗ್ಗು ಬಡಿಯುವ ನಿಟ್ಟಿನಲ್ಲಿ ನಾನು ಕೂಡಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್