ಗೆದ್ದು ಬೀಗದಿರಿ, 2018ರಲ್ಲಿ ಗೆಲುವು ನಮ್ಮದೇ: ಬಿಎಸ್ವೈ
Team Udayavani, Apr 18, 2017, 3:45 AM IST
ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬೀಗುತ್ತಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎಸ್.ಯಡಿಯೂರಪ್ಪ ಹೇಳಿದರು.
ಪಟ್ಟಣದ ಸಿಎಂಎಸ್ ಕಲಾಮಂದಿರದ ಆವರಣದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.
ಚುನಾವಣೆಯ ಎರಡು ದಿನ ಮುಂಚಿತವಾಗಿ ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಂಡ ಕಾಂಗ್ರೆಸ್ ಪಕ್ಷ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿದೆ. ಕಡೆಯ ಎರಡು ದಿನಗಳಲ್ಲಿ ರಾಜ್ಯ ಸರ್ಕಾರ ಅಧಿಕಾರಿಗಳು
ಮತ್ತು ಮಂತ್ರಿಗಳನ್ನು ಬಳಸಿಕೊಂಡು ಹಣ ಚೆಲ್ಲಿ ಎರಡೂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ದೂರಿದರು.
ಇಡೀ ರಾಜ್ಯದ ಜನತೆ ಭೀಕರ ಬರದಿಂದ ತತ್ತರಿಸುತ್ತಿದ್ದರೆ, ರಾಜ್ಯ ಸರ್ಕಾರವು ಉಪಚುನಾವಣೆಯನ್ನು ಹಣ, ಅಧಿಕಾರದ ಬಲದಿಂದ ಮಂತ್ರಿಗಳನ್ನು ಬಳಸಿಕೊಂಡು ಗೆದ್ದರು. ಪ್ರಜಾಪ್ರಭುತ್ವದ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಉಪಚುನಾವಣೆ ಗೆಲ್ಲಲು ನಾಚಿಕೆಯಿಲ್ಲದೆ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡರು. ಅನೇಕ ಕಡೆ ಹಣ ಹಂಚಲು ಹೋಗಿ ಹಲವರು ಸಿಕ್ಕಿ ಬಿದ್ದರು. ಸಾರಿಗೆ ಅಧಿಕಾರಿ ಹಣ ಹಂಚಲು ಹೋಗಿ 20 ಲಕ್ಷ ರೂ. ಸಮೇತ ಸಿಕ್ಕಿಬಿದ್ದರು. ಆ ಅಧಿಕಾರಿಯ ವಿರುದಟಛಿ ಏನು ಕ್ರಮಕೈಗೊಂಡಿರಿ? ಸಸ್ಪೆಂಡ್ ಮಾಡಿದ್ದೀರಾ? ಜನತೆ ಮುಂದೆ ಕ್ಷಮೆ ಕೇಳಿದ್ದೀರಾ ಎಂದು ಪ್ರಶ್ನಿಸಿದರು.
ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದ ಸಿದ್ದು: ಅಧಿಕಾರದ ಮದದಿಂದ ಹಣಬಲ, ತೋಳ್ಬಳ ಬಳಕೆ ಮಾಡಿ ಸಮಾಜದ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಎರಡು ಉಪಚುನಾವಣೆಯನ್ನು ಗೆದ್ದಿದ್ದೇವೆ ಎಂದು ಬೀಗುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ಶೇ.43 ಮತ ಪಡೆದು ಬಿಜೆಪಿ ಪಕ್ಷವು 325 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ, ಗುಂಡ್ಲುಪೇಟೆಯಲ್ಲಿ ಸಿ.ಎಸ್.ನಿರಂಜನಕುಮಾರ್ ಶೇ.45.22 ಮತ ಪಡೆದು 80 ಸಾವಿರ ಮತ ಪಡೆದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ