ಬಿಜೆಪಿ ನಾಯಕಿ ವಿಮಲಾಗೌಡ ಅಂತ್ಯಸಂಸ್ಕಾರ
Team Udayavani, Apr 20, 2017, 3:45 AM IST
ಬೆಂಗಳೂರು: ಸೋಮವಾರ ರಾತ್ರಿ ನಿಧನರಾಗಿದ್ದ ಬಿಜೆಪಿ ಹಿರಿಯ ನಾಯಕಿ ಹಾಗೂ ವಿಧಾನ ಪರಿಷತ್ ಸದಸ್ಯೆ ಕೆ.ಎಸ್. ವಿಮಲಾಗೌಡರ ಅಂತ್ಯಕ್ರಿಯೆ ಬುಧವಾರ ಸಂಜೆ ನೆರವೇರಿತು.
ವಿಮಲಾಗೌಡ ಸೋಮವಾರ ನಿಧನರಾಗಿದ್ದರೂ ಬಂಧುಗಳು ವಿದೇಶದಿಂದ ಬರಬೇಕಾಗಿದ್ದ ಕಾರಣ ಪಾರ್ಥಿವ ಶರೀರವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಬುಧವಾರ ಬೆಳಗ್ಗೆ ಎಚ್ಎಸ್ಆರ್ ಲೇಔಟ್ನ ಅವರ
ನಿವಾಸಕ್ಕೆ ತರಲಾಯಿತು. ಸಂಜೆ 3.30ರ ವೇಳೆಗೆ ವಿಲ್ಸನ್ ಗಾರ್ಡನ್ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮತ್ತಿತರರು ಎಚ್ಎಸ್ಆರ್ ಲೇಔಟ್ ನಲ್ಲಿರುವ ವಿಮಲಾಗೌಡ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.