ಕಟ್ಟಪ್ಪನ ಮೇಲಿನ ಸಿಟ್ಟು “ಬಾಹುಬಲಿ 2′ ಮೇಲೆ ಬೇಡ್ರಪ್ಪ
Team Udayavani, Apr 21, 2017, 3:45 AM IST
ಬೆಂಗಳೂರು: ಸತ್ಯರಾಜ್ ಅವರ ಅಭಿಪ್ರಾಯ ಏನೇ ಇದ್ದರೂ ಅದು ವೈಯಕ್ತಿಕ. ಅದಕ್ಕೂ ಚಿತ್ರಕ್ಕೂ ಸಂಬಂಧವಿಲ್ಲವಾದ್ದರಿಂದ, ಚಿತ್ರ ಬಿಡುಗಡೆ ಮಾಡುವುದಕ್ಕೆ ಅನುವು ಮಾಡಿಕೊಡಬೇಕೆಂದು ನಿರ್ದೇಶಕ ರಾಜಮೌಳಿ ಮನವಿ ಮಾಡಿದ್ದಾರೆ.
ಕಾವೇರಿ ನದಿಯ ವಿಷಯವಾಗಿ ಕನ್ನಡ ಮತ್ತು ಕರ್ನಾಟಕದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ತಮಿಳು ನಟ ಸತ್ಯರಾಜ್ ಅವರು ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರು ಅಭಿನಯಿಸಿರುವ “ಬಾಹುಬಲಿ 2′ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬುಧವಾರವಷ್ಟೇ ತಿಳಿಸಿದ್ದರು.
ಜೊತೆಗೆ, ಚಿತ್ರ ಬಿಡುಗಡೆಯಾಗುತ್ತಿರುವ ಏಪ್ರಿಲ್ 28ರಂದು ಬೆಂಗಳೂರು ಬಂದ್ ಮಾಡುವುದಾಗಿ ಹೇಳಿದ್ದರು. ಈ ವಿಷಯವಾಗಿ “ಬಾಹುಬಲಿ 2′ ಚಿತ್ರದ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಗುರುವಾರ ಬೆಳಗ್ಗೆ ಒಂದು ವೀಡಿಯೋ ಬಿಡುಗಡೆ ಮಾಡಿದ್ದಾರೆ. ಈ ವೀಡಿಯೋದಲ್ಲಿ, ಚಿತ್ರವನ್ನು ಕರ್ನಾಟಕದಾದ್ಯಂತ ಬಿಡುಗಡೆ ಮಾಡುವುದಕ್ಕೆ ಅನುವು ಮಾಡಿಕೊಡಬೇಕೆಂದು ಕನ್ನಡಿಗರನ್ನು ಕೇಳಿಕೊಂಡಿದ್ದಾರೆ.
ನಮಗೂ ಬೇಸರವಿದೆ:
“ಸತ್ಯರಾಜ್ ಅವರ ಕೆಲವು ಮಾತುಗಳಿಂದ ಕನ್ನಡಿಗರಿಗೆ ನೋವಾಗಿದೆ ಎಂಬ ಬೇಸರ ನಮಗೂ ಇದೆ. “ಬಾಹುಬಲಿ’ ಚಿತ್ರಕ್ಕೂ ಸತ್ಯರಾಜ್ ಮಾತುಗಳಿಗೂ ಯಾವ ಸಂಬಂಧವೂ ಇಲ್ಲ. ಈ ಚಿತ್ರವನ್ನು ನಿರ್ಮಾಣ ಮಾಡಿದವರು ಅವರಲ್ಲ. ಈ ಚಿತ್ರಕ್ಕಾಗಿ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮುಂತಾದ ಯಾವ ವಿಭಾಗದಲ್ಲೂ ಅವರು ಕೆಲಸ ಮಾಡಿರಲಿಲ್ಲ. ಅವರು ಒಂದು ಪಾತ್ರದಲ್ಲಿ ನಟಿಸಿದ್ದಾರಷ್ಟೇ. ಅದಕ್ಕೆ ಸಂಭಾವನೆಯನ್ನು ಪಡೆದಿದ್ದಾರೆ. ಸತ್ಯರಾಜ್ ಅಭಿಪ್ರಾಯ ಏನೇ ಇದ್ದರೂ ಅದು ವೈಯಕ್ತಿಕವೇ ಹೊರತು ಚಿತ್ರತಂಡದಲ್ಲ. ಓರ್ವ ನಟನ ವೈಯಕ್ತಿಕ ಅಭಿಪ್ರಾಯದಿಂದಾಗಿ ಆತ ನಟಿಸಿರುವ ಒಂದು ಚಿತ್ರಕ್ಕೆ ಅಡ್ಡಿ ಉಂಟಾಗುವುದು ಸರಿಯಲ್ಲ’ ಎಂದು ರಾಜಮೌಳಿ ಹೇಳಿದ್ದಾರೆ.
ಸತ್ಯರಾಜುಗೇನು ನಷ್ಟವಿಲ್ಲ:
ಈ ವಿಚಾರದ ಕುರಿತು ಸತ್ಯರಾಜ್ ಅವರಿಗೆ ಫೋನ್ ಮಾಡಿ ಪರಿಸ್ಥಿತಿಯನ್ನು ತಿಳಿಸಿದ್ದಾಗಿ ಹೇಳುವ ರಾಜಮೌಳಿ , “ಅದಕ್ಕೂ ಮೀರಿದ ಶಕ್ತಿ ನಮಗಿಲ್ಲ. ಒಂಭತ್ತು ವರ್ಷಗಳ ಹಿಂದೆ ಸತ್ಯರಾಜ್ ಅವರು ಈ ರೀತಿ ಮಾತನಾಡಿದ್ದಾರೆ. ಆ ನಂತರ ಅವರು ನಟಿಸಿರುವ, ನಿರ್ಮಾಣ ಮಾಡಿರುವ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆ ಆಗಿವೆ. “ಬಾಹುಬಲಿ’ ಸಹ ಬಿಡುಗಡೆ ಆಗಿದೆ. ಅವುಗಳನ್ನು ಪ್ರೋತ್ಸಾಹಿಸಿದ್ದ ಹಾಗೆಯೇ “ಬಾಹುಬಲಿ – 2′ ಚಿತ್ರವನ್ನು ಸಹ ಪ್ರೀತಿಯಿಂದ ನೋಡಬೇಕಾಗಿ ನಮ್ಮ ವಿನಂತಿ. ಈ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದರಿಂದ ಸತ್ಯರಾಜ್ ಅವರಿಗೆ ಆಗುವ ಕಷ್ಟ ನಷ್ಟ ಏನೂ ಇಲ್ಲ. ಐದು ವರ್ಷಗಳ ಕಾಲ ಕಷ್ಟಪಟ್ಟು ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರು, ಹಂಚಿಕೆದಾರರು ಮತ್ತು ಪ್ರೇಕ್ಷಕರ ಕುತೂಹಲಕ್ಕೆ ತಣ್ಣೀರೆರಚಿದಂತಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಸತ್ಯರಾಜ್ ಅವರ ಮೇಲಿನ ಕೋಪವನ್ನು “ಬಾಹುಬಲಿ 2′ ಮೇಲೆ ತೋರಿಸಬಾರದೆಂದು ಎಂದು ವಿನಂತಿಸಿಕೊಳ್ಳುವ ಅವರು, ಕನ್ನಡಿಗರು “ಬಾಹುಬಲಿ – 2′ ಚಿತ್ರವನ್ನು ಪ್ರೋತ್ಸಾಹಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ