ಗೌಡರ ಕೈಗೆ ಸೇರಿದೆ 100 ಅಭ್ಯರ್ಥಿಗಳ ಪಟ್ಟಿ


Team Udayavani, Apr 21, 2017, 3:45 AM IST

09-1462766478-hd-deve-gowda.jpg

ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್‌ ಕೋರ್‌ ಕಮಿಟಿ ತೀರ್ಮಾನಿಸಿದ್ದು, 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಪಕ್ಷದ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡರ ಕೈಗೆ ತಲುಪಿಸಲಾಗಿದೆ.

ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ 224 ವಿಧಾನಸಭೆ ಕ್ಷೇತ್ರಗಳಲ್ಲೂ ಮತಗಟ್ಟೆವಾರು ಸಮಿತಿ ರಚಿಸಿ  ಈಗಿನಿಂದಲೇ ಚುನಾವಣೆ ಸಿದ್ಧತೆ ಪ್ರಾರಂಭಿಸಲು ನಿರ್ಧರಿಸಲಾಯಿತು.

ವಿಧಾನಸಭೆಗೆ ಯಾವುದೇ ಸಂದರ್ಭದಲ್ಲಿ ಚುನಾವಣೆ ನಿಗದಿಯಾದರೂ ಎದುರಿಸಲು ಪಕ್ಷ ಸಜ್ಜುಗೊಳಿಸಬೇಕು. ಸಾಮಾಜಿಕ ಜಾಲತಾಣ ಸಂವಾದ ಜಿಲ್ಲಾ ಮಟ್ಟದಲ್ಲೂ ನಡೆಸಬೇಕು. ಎಚ್‌.ಡಿ.ದೇವೇಗೌಡರು ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿ ನೀಡಿರುವ ಕೊಡುಗೆ, ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮಾಡಿರುವ ಸಾಧನೆಗಳ ಆಧಾರದಲ್ಲಿ ಮತದಾರರ ಮುಂದೆ ಹೋಗಬೇಕು ಎಂದು ಕೋರ್‌ಕಮಿಟಿಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ರಮೇಶ್‌ಬಾಬು, ಮುಂದಿನ ವಿಧಾನಸಭೆ ಚುನಾವಣೆಗೆ‌ 224 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಹಾಗೂ ಈಗಿನಿಂದಲೇ ಸಜ್ಜಾಗಲು ಇಂದಿನ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕಾಗಿ ಬೂತ್‌ ಮಟ್ಟದಲ್ಲಿ ಸಮಿತಿ ಸಹ ರಚನೆ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ಚುನಾವಣೆಗೆ ಸ್ಪರ್ಧೆಗೆ ಇಳಿಸುವ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೂ ಇಂದಿನ ಕೋರ್‌ ಕಮಿಟಿ ಸಭೆಯಲ್ಲಿ ದೇವೇಗೌಡರಿಗೆ ನೀಡಲಾಗಿದ್ದು, ಅವರು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚುನಾವಣೆಗೆ ಪಕ್ಷ ಸಜ್ಜುಗೊಳಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಹಾಗೂ ಮಹಿಳಾ ಸಮಾವೇಶ ನಡೆಸುವುದು. ಬೂತ್‌ ಮಟ್ಟದ ಸಮಿತಿ ರಚನೆಗೆ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್‌ಬಾಬು ಅವರ ನೇತೃತ್ವದಲ್ಲಿ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.
ವಿಧಾನಸಭೆಗೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾದರೂ ಎದುರಿಸಲು ಸಿದ್ಧವಾಗಿರುವಂತೆ ತತಕ್ಷಣದಿಂದ ಪಕ್ಷ ಸಂಘಟಿಸಲು ತೀರ್ಮಾನಿಸಲಾಗಿದೆ. ಸಾಮಾಜಿಕ ತಾಲತಾಣಗಳ ಸಮರ್ಪಕ ಬಳಕೆ, ಜಿಲ್ಲಾ ಮಟ್ಟದಲ್ಲಿ “ಕುಮಾರಪಥ’ ಸಾಮಾಜಿಕ ಜಾಲತಾಣ ಅಭಿಮಾನಿಗಳ ಸಂವಾದ ನಡೆಸಲು ಕೋರ್‌ ಕಮಿಟಿ ಸಭೆ ತೀರ್ಮಾನಿಸಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಕುಪೇಂದ್ರರೆಡ್ಡಿ, ಸಿ.ಎಸ್‌.ಪುಟ್ಟರಾಜು, ಬಂಡೆಪ್ಪ ಕಾಶಂಪುರ್‌, ಶಾರದಾ ಪೂರ್ಯನಾಯಕ್‌, ಜಿ.ಟಿ.ದೇವೇಗೌಡ, ಬಿ.ಎಂ.ಫ‌ರೂಕ್‌, ಎಚ್‌.ಸಿ.ನೀರಾವರಿ, ಮಧು ಬಂಗಾರಪ್ಪ, ಬಿ.ಬಿ.ನಿಂಗಯ್ಯ, ಟಿ.ಎ.ಶರವಣ, ಸಿ.ಆರ್‌.ಮನೋಹರ್‌ ಪಾಲ್ಗೊಂಡಿದ್ದರು.

ಕೋರ್‌ ಕಮಿಟಿ ಸದಸ್ಯರ ಸಂಖ್ಯೆ 17ಕ್ಕೆ
*ಕೋರ್‌ ಕಮಿಟಿಗೆ ಹೊಸದಾಗಿ ಇಬ್ಬರು ಸದಸ್ಯರನ್ನು ನೇಮಿಸಲಾಗಿದ್ದು, ಇದರಿಂದಾಗಿ 15 ಮಂದಿಯಿದ್ದ ಕೋರ್‌ ಕಮಿಟಿ  ಸದಸ್ಯರ ಸಂಖ್ಯೆ 17 ಕ್ಕೆ ವಿಸ್ತರಣೆಯಾಗಿದೆ. ವಿಧಾನಪರಿಷತ್‌ ಸದಸ್ಯನ ಮಾಜಿ ಸದಸ್ಯ ಎಚ್‌.ಸಿ.ನೀರಾವರಿ ಹಾಗೂ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ವಿ.ನಾರಾಯಣಸ್ವಾಮಿ ಅವರನ್ನು ಹೊಸದಾಗಿ ಸಮಿತಿಗೆ ಸೇರಿಸಲಾಗಿದೆ.

ಉಪ್ಪಾರ ಮುಖಂಡರ ಸಭೆ
*ಕೋರ್‌ ಕಮಿಟಿ ಸಭೆಗೂ ಮುನ್ನ ಉಪ್ಪಾರ ಸಮುದಾಯದ ಮುಖಂಡರ ಸಭೆ ನಡೆಸಲಾಯಿತು. ವಿಧಾನಪರಿಷತ್‌ನ ಮಾಜಿ ಸದಸ್ಯ ಎಚ್‌.ಸಿ.ನೀರಾವರಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.  ಈ ಸಂದರ್ಭದಲ್ಲಿ ಮಾತನಾಡಿದ ಎಚ್‌.ಡಿ.ದೇವೇಗೌಡ, ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಜನತಾಪಕ್ಷ, ಜನತಾದಳ ಸರ್ಕಾರದಲ್ಲಿ ಹೆಚ್ಚು ಒತ್ತು ನೀಡಲಾಗಿತ್ತು.  ಈ ಬಾರಿಯ ಚುನಾವಣೆಯಲ್ಲಿ ಸಮುದಾಯ ನಮ್ಮೊಂದಿಗೆ ಇರಿ. 33 ಕ್ಷೇತ್ರಗಳಲ್ಲಿ ನೀವೇ ನಿರ್ಣಾಯಕರು, ನಿಮ್ಮ ಸಮುದಾಯದ ಹಿತಾಸಕ್ತಿ ಕಾಪಾಡಲಿದೆ ಎಂದು ಭರವಸೆ ನೀಡಿದರು. 

ಎಚ್‌.ಸಿ.ನೀರಾವರಿ ಮಾತನಾಡಿ,  ರಾಜಕೀಯದಿಂದ ದೂರವೇ ಉಳಿದಿದ್ದ ನಾನು ದೇವೇಗೌಡರ ಮಾತಿಗೆ ಒಪ್ಪಿ ಮತ್ತೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ರಾಜಕೀಯಕ್ಕೆ ಬುದ್ಧಿವಂತರು, ಯುವಕರು, ಪ್ರಜ್ಞಾವಂತರು ಬರಬೇಕು. ರಾಜಕೀಯ ಕ್ಷೇತ್ರ ಶುದ್ಧೀಕರಣ ಆಗಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.