ಕೊಳವೆ ಬಾವಿ ದುರ್ಘ‌ಟನೆ: ಬಾಲಕಿಯ ರಕ್ಷಣೆಗೆ ಮುಂದುವರಿದ ಯತ್ನ


Team Udayavani, Apr 24, 2017, 3:45 AM IST

170423kpn86.jpg

ಝಂಜರವಾಡ (ಅಥಣಿ): ವಿಫಲ ಕೊಳವೆ ಬಾವಿಗೆ ಬಿದ್ದಿರುವ ಆರು ವರ್ಷದ ಮುದ್ದು ಕಂದ ಕಾವೇರಿಯ ರಕ್ಷಣೆಗೆ ಶತಾಯಗತಾಯ ಪ್ರಯತ್ನ ನಡೆದಿದೆ.

ಝಂಜರವಾಡ ಪುನರ್ವಸತಿ ಕೇಂದ್ರದ ಅನತಿ ದೂರದಲ್ಲಿ ಶನಿವಾರ ಸಂಜೆ 5:30ರ ಸುಮಾರಿಗೆ ಬಾಲಕಿ ಕೊಳವೆ ಬಾವಿಗೆ ಬಿದ್ದಿದ್ದು, ಭಾನುವಾರ ರಾತ್ರಿಯೂ ಮೇಲೆತ್ತಲು ಸಾಧ್ಯವಾಗದೇ ರಕ್ಷಣಾ ಕಾರ್ಯ ಮುಂದುವರಿದಿದೆ. ಪಕ್ಕದಲ್ಲೇ ಇನ್ನೊಂದು ಕೊಳವೆ ಬಾವಿ ಕೊರೆದು ಆ ಮೂಲಕ ರಕ್ಷಿಸುವ ಪ್ರಯತ್ನ ನಡೆಸಲಾಗುತ್ತಿದೆ.

ಕಟ್ಟಿಗೆ ಕಟ್ಟಲು ತಂದಿದ್ದ ಹಗ್ಗದಿಂದ ಮೇಲೆತ್ತಲು ತಾಯಿ ಮೊದಲ ಪ್ರಯತ್ನ ಮಾಡಿ ವಿಫಲವಾಗಿದ್ದಾಳೆ. ಬಳಿಕ ಸುದ್ದಿ ತಿಳಿದು ಜಿಲ್ಲಾಡಳಿತದ ಕೋರಿಕೆ ಮೇರೆಗೆ ಶನಿವಾರ ರಾತ್ರಿ 9 ಗಂಟೆಗೆ ಬೆಳಗಾವಿಯಿಂದ ಮರಾಠಾ ಸೇನಾ ಲಘು ಪದಾತಿ ದಳ ಬಂದಿದ್ದರೆ, ಬೆಳಗಾವಿ-ಸಾಂಗ್ಲಿಯ ಬಸವರಾಜ ಹಿರೇಮಠ ನೇತೃತ್ವದ ಕರ್ನಾಟಕ ತುರ್ತು ನಿರ್ವಹಣಾ ಖಾಸಗಿ ಸಂಸ್ಥೆಯ ತಜ್ಞರು ಕಾರ್ಯಾಚರಣೆ ಆರಂಭಿಸಿದರು. ಕೆಲವೇ ಕ್ಷಣದಲ್ಲಿ ಪುಣೆಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಎರಡು ತಂಡ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಹಟ್ಟಿ ಚಿನ್ನದ ಗಣಿ ಸುರಂಗ ತಜ್ಞರು ಭಾಗಿಯಾಗಿದ್ದಾರೆ.

ಭಾನುವಾರ ಬೆಳಗಿನ ಹಂತದವರೆಗೆ ಒಂದೆಡೆ ಕೊಳವೆ ಬಾವಿಯಲ್ಲಿರುವ ಬಾಲಕಿಯ ಉಸಿರಾಟಕ್ಕೆ ಆಮ್ಲಜನಕ ಪೂರೈಕೆೆ ಮಾಡುತ್ತಲೇ ಕೊಳವೆ ಬಾವಿಯಲ್ಲಿ ಎಷ್ಟು ಆಳದಲ್ಲಿದ್ದಾಳೆ ಎಂದು ಪತ್ತೆ ಹಚ್ಚುವ ಕಾರ್ಯ ನಡೆಯಿತು. ಮತ್ತೂಂದೆಡೆ ಕೊಳವೆ ಬಾವಿಯ ನಾಲ್ಕಾರು ಅಡಿ ದೂರದಲ್ಲಿ ಉತ್ತರ ದಿಕ್ಕಿನಿಂದ ಸುರಂಗ ಕೊರೆಯುವ ಕಾರ್ಯವೂ ಮುಂದುವರಿಯಿತು.

ಗೋಚರಿಸಿದ ಕೈಗಳು:
ಮಗಳನ್ನು ರಕ್ಷಿಸುವ ಹಂತದಲ್ಲಿ ತಾಯಿ ಹೆಣಗಾಡಿದ ಕಾರಣ 22 ಅಡಿ ಆಳದಲ್ಲಿ ಸಿಲುಕಿಕೊಂಡಿರುವ ಬಾಲಕಿ ಕಾವೇರಿ ತಲೆಯ ಮೇಲೆ ಸುಮಾರು 3 ಅಡಿ ಮಣ್ಣು ಬಿದ್ದಿದೆ. ತಲೆ ಮೇಲಿದ್ದ ಮಣ್ಣನ್ನು ವ್ಯಾಕ್ಯೂಮ್‌ ಮೂಲಕ ಹೊರ ತೆಗೆಯುವ ವೇಳೆಗೆ ಸುಮಾರು 20 ಗಂಟೆ ಗತಿಸಿದ್ದು, ತದನಂತರ ಬಾಲಕಿಯ ಕೈಗಳು ಗೋಚರಿಸಿವೆ.

ಕೂಡಲೇ ಕಾವೇರಿ ತೊಟ್ಟಿರುವ ಬಟ್ಟೆಗೆ ಹುಕ್‌ ಹಾಕಿ ಆಕೆಯನ್ನು ಹೊರ ತೆಗೆಯುವ ಪ್ರಯತ್ನ ನಡೆಸಲಾಯಿತಾದರೂ ಫ‌ಲಿಸಲಿಲ್ಲ. ಇನ್ನು ಸುರಂಗ ಕೊರೆಯುವ ಹಂತದಲ್ಲಿ ಗಟ್ಟಿ ಕಲ್ಲುಗಳು ಕಾಣಿಸಿಕೊಂಡಿದ್ದು, ಕಾರ್ಯಾಚರಣೆಗೆ ಅಡೆತಡೆಯಾಗಿದೆ. ಸುರಂಗ ಕೊರೆಯುವ ಕಾರ್ಯಾಚರಣೆಯಿಂದ 300 ಅಡಿ ಆಳ ಇರುವ ಕೊಳವೆ ಬಾವಿಗೆ ಬಾಲಕಿ ಮತ್ತೆ ಕುಸಿಯುವ ಸಾಧ್ಯತೆ ಇತ್ತು. ಹೀಗಾಗಿ ಮಧ್ಯಾಹ್ನದ ವೇಳೆಗೆ ಕೇವಲ 5 ಅಡಿ ಸುರಂಗ ಕೊರೆದು, ಕಾರ್ಯಾಚರಣೆ ನಿಲ್ಲಿಸಲಾಯಿತು. ಜತೆಗೆ ಬಾಲಕಿ ಕೈಗೆ ಬೆಲ್ಟ್ ಬಿಗಿದು ಸ್ಥಿರವಾಗಿವಂತೆ ಮಾಡಲಾಯಿತು.

ಸ್ಥಳೀಯರ ಸಹಕಾರ:
ಈ ಹಂತದಲ್ಲೇ ಸ್ಥಳೀಯರು ಕೊಳವೆ ಬಾವಿ ಪಕ್ಕದಲ್ಲೇ ಬೋರ್‌ವೆಲ್‌ ಯಂತ್ರದ ಮೂಲಕ ಗುಂಡಿಗಳನ್ನು ತೋಡಿ ಸುರಂಗ ಕೊರೆಯುವ ಕಾರ್ಯಾಚರಣೆಗೆ ಸಹಕಾರಿ ಆಗುವ ಸಲಹೆ ನೀಡಿದ್ದಾರೆ. ಹೀಗಾಗಿ ಸಂಜೆ 4 ಗಂಟೆ ಸುಮಾರಿಗೆ ಬೋರ್‌ವೆಲ್‌ ಯಂತ್ರ ತರಿಸಲಾಯಿತು. ಬಾಲಕಿ ಬಿದ್ದಿರುವ ಕೊಳವೆ ಬಾವಿ ಪಕ್ಕದಲ್ಲಿ ಕೊರೆಯಲಾಗಿದ್ದ 12 ಅಡಿ ಸುರಂಗದ ಸ್ಥಳದಲ್ಲೇ 12 ಅಡಿ ಆಳದಲ್ಲಿ ಸಾಲಾಗಿ 20 ಗುಂಡಿಗಳನ್ನು ತೋಡುವುದು ಹಾಗೂ ತೋಡಿ ಗುಂಡಿಗಳಿಂದ ಹಿಟಾಚಿ ಯಂತ್ರಗಳನ್ನು ಬಳಸಿ ನೇರವಾಗಿ 24 ಅಡಿಗೆ ಸುರಂಗ ಕೊರೆದು ಬಾಲಕಿ ರಕ್ಷಿಸುವ ಕಾರ್ಯಾಚರಣೆ ನಡೆದಿದೆ.

ರಾತ್ರಿ 9.30ರ ನಂತರವೂ ಸುರಂಗ ಕೊರೆಯುವ ಹಾಗೂ ಬಾಲಕಿಯನ್ನು ರಕ್ಷಿಸುವ ಕಾರ್ಯಚರಣೆ ನಡೆದಿತ್ತು.

ಹಿರಿಯ ಗಣಿ ಸುರಂಗ ತಜ್ಞ ವಿಜ್ಞಾನಿ ಮಡಿ ಅಲಗನ್‌ ನೇತೃತ್ವದಲ್ಲಿ ಸ್ಥಳಕ್ಕೆ ಬಂದಿರುವ ಹಟ್ಟಿ ಚಿನ್ನದ ಗಣಿ ಕಂಪನಿಯ 7 ಜನರ ನಮ್ಮ ತಂಡ ಸುರಂಗ ಕೊರೆಯುವ ಕಾರ್ಯದಲ್ಲಿ ತೊಡಗಿದೆ. ಕಾರ್ಯಾಚರಣೆಗೆ ಗಟ್ಟಿಯಾದ ಕಲ್ಲು ಅಡ್ಡಿ ಉಂಟು ಮಾಡುತ್ತಿದೆ. ಬಾಲಕಿ ಆಳದಲ್ಲಿ ಸಿಲುಕಿರುವ ಕಾರಣ ಸುರಂಗ ಕೊರೆಯುವಲ್ಲಿ ಆತುರ ಪಡುವಂತಿಲ್ಲ. ಹೀಗಾಗಿ ನಮ್ಮ ಚಿಕ್ಕ ರಾಕ್‌ ಡ್ರಿಲ್‌ ಮಶಿನ್‌ಗಿಂತ ಬೋರ್‌ವೆಲ್‌ ಯಂತ್ರದ ಮೂಲಕವೇ ಸುರಂಗ ಕೊರೆಯಲು 12 ಅಡಿಗಳ 20 ಗುಂಡಿ ತೋಡುತ್ತಿದ್ದೇವೆ.
– ಮಧುಸೂಧನ, ಕ್ಯಾಪ್ಟನ್‌, ಹಟ್ಟಿ ಚಿನ್ನದ ಗಣಿ ತಜ್ಞರ ತಂಡ

ಕೊಳವೆ ಬಾವಿ 3-4 ನೂರು ಅಡಿ ಆಳದಲ್ಲಿದೆ. ಬಾಲಕಿ 22 ಅಡಿಯಲ್ಲಿ ಸಿಲುಕಿದ್ದು, ಪತ್ತೆಯಾಗಿದೆ. ಶಕೀಲ್‌ ಅವರ ನೇತೃತ್ವದಲ್ಲಿ ಬಂದಿರುವ 35 ಸದಸ್ಯರ ನಮ್ಮ ತಂಡ ಕುಡಿಯುವ ನೀರಿಗೂ ನಿರೀಕ್ಷೆ ಇಲ್ಲದೇ ಬಾಲಕಿಯ ರಕ್ಷಣೆಗೆ ಮುಂದಾಗಿದೆ. ಬಾಲಕಿ ತಲೆ ಮೇಲೆ ಮಣ್ಣು ಕುಸಿದಿದ್ದು, ವ್ಯಾಕ್ಯೂಮ್‌ನಿಂದ ಸ್ವತ್ಛಗೊಳಿಸುವ ಕಾರ್ಯ ಹಾಗೂ ಕೈಗಳಿಗೆ ಬೆಲ್ಟ್ ಹಾಕಿ ಆಕೆಯನ್ನು ಸ್ಥಿರವಾಗಿ ಇರಿಸಲಾಗಿದೆ. ಇದೀಗ ಸುರಂಗ ಕೊರೆಯಲು ಸ್ಥಳೀಯರ ಸಲಹೆ ಮೇರೆಗೆ ಬೋರ್‌ವೆಲ್‌ ಯಂತ್ರದ ಗುಂಡಿಗಳನ್ನು ತೊಡುವ ಕೆಲಸ ನಡೆದಿದೆ. ಕಾರ್ಯಾಚರಣೆ ಸ್ಥಳದಲ್ಲಿ ಕಲ್ಲುಗಳ ಕಾಣಿಸಿಕೊಂಡಿರುವ ಕಾರಣ ಕಾರ್ಯಾಚರಣೆ ಮುಕ್ತಾಯಗೊಳ್ಳುವ ಕುರಿತು ನಿಖರವಾಗಿ ಹೇಳಲು ಸಾಧ್ಯವಿಲ್ಲ.
-ವಿಶಾಲ, ಸದಸ್ಯ, ಎನ್‌ಡಿಆರ್‌ಎಫ್‌ಪುಣೆ    

ಬೋರ್‌ವೆಲ್‌ ಮೂಲಕ ಗುಂಡಿಗಳನ್ನು ತೋಡುವ ವಿಚಾರ ನೀಡಿದ ನಾನೇ ಖುದ್ದಾಗಿ ಬೋರ್‌ವೆಲ್‌ ತರಿಸಿದ್ದೇನೆ. ಈ ಭಾಗದಲ್ಲಿ ಹಲವು ರೀತಿಯಲ್ಲಿ ಗುತ್ತಿಗೆ ಕೆಲಸಗಳನ್ನು ಮಾಡಿರುವ ನಾನು ಈ ಸಂಕಷ್ಟದ ಸಂದರ್ಭದಲ್ಲಿ ಮಾನವೀಯತೆ ಮೆರೆಯಲು ಮುಂದಾಗಿ, ಬೋರ್‌ವೆಲ್‌ ತರಿಸಿದ್ದೇನೆ.
-ಎಸ್‌.ಬಿ.ರಾಠೊಡ, ಗುತ್ತಿಗೆದಾರ, ತುಂಗಳ ಗ್ರಾಮ.

ಬಾಲಕಿಯನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆ. ಬಳಿಕ ಘಟನೆಯ ಕುರಿತು ಪ್ರಕರಣ ದಾಖಲಿಸುವ ಹಾಗೂ ವಿಫಲ ಬೋರ್‌ವೆಲ್‌ ಮಾಲೀಕನನ್ನು ಬಂಧಿಧಿಸುವ ವಿಚಾರ ನಂತರದ್ದು.
-ರವಿಕಾಂತೇಗೌಡ, ಎಸ್ಪಿ ಬೆಳಗಾವಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.