53 ಗಂಟೆಗಳ ಕಾರ್ಯಾಚರಣೆ ಅಂತ್ಯ; ಕೊನೆಗೂ ಕಾವೇರಿ ಬದುಕಿ ಬರಲಿಲ್ಲ!


Team Udayavani, Apr 24, 2017, 1:15 PM IST

Kaveri-Death-24-04.jpg

ಝಂಜವಾಡ(ಅಥಣಿ): ಸತತ 53 ಗಂಟೆಗಳ ಬಳಿಕ ಬೆಳಗಾವಿ ಜಿಲ್ಲೆ ಅಥಣಿಯ ಝಂಜವಾಡ ಗ್ರಾಮದ 30 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಆರು ವರ್ಷದ ಕಂದ ಕಾವೇರಿಯ ಮೃತದೇಹವನ್ನು ರಕ್ಷಣಾ ತಂಡ ಸೋಮವಾರ ತಡರಾತ್ರಿ ಹೊರ ತೆಗೆದಿದೆ. ಇದರೊಂದಿಗೆ ಕಳೆದ 3 ದಿನಗಳಿಂದ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಂತಾಗಿದೆ. ಸತತ 54 ಗಂಟೆಗಳ ಮ್ಯಾರಥಾನ್‌ ಕಾರ್ಯಾಚರಣೆಯ ಬಳಿಕ ಸೋಮವಾರ ರಾತ್ರಿ 11.34ಕ್ಕೆ ಸರಿಯಾಗಿ ಆಕೆಯ ದೇಹವನ್ನು ಹೊರತೆಗೆಯಲಾಯಿತು.

ಪುಣೆಯ ಎನ್ ಡಿಆರ್ ಎಫ್ ಹಾಗೂ ಹಟ್ಟಿ ಚಿನ್ನದ ಗಣಿಯ ತಜ್ಞರು ಸಾಕಷ್ಟು ಹರಸಾಹಸ ಪಟ್ಟರೂ ಕೂಡಾ ಕಾವೇರಿಯನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ವಿಫಲರಾಗಿದ್ದು, ಕೋಟಿ, ಕೋಟಿ ಜನರ ಪ್ರಾರ್ಥನೆ ಕೊನೆಗೂ ಫಲಿಸಲಿಲ್ಲ. 

ಕೊಕಟನೂರು ಆಸ್ಪತ್ರೆಗೆ ಕಾವೇರಿ ಮೃತದೇಹವನ್ನು ರವಾನಿಸಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಾವೇರಿ ಪೋಷಕರಾದ ಅಜಿತ್, ಸುಜತಾ ದಂಪತಿಯ ಆಕ್ರಂದನ ಮುಗಿಲು ಮುಟ್ಟಿತ್ತು.

ಝಂಜವಾಡ ಪುನರ್ವಸತಿ ಕೇಂದ್ರದ ಅನತಿ ದೂರದಲ್ಲಿ ಶನಿವಾರ ಸಂಜೆ ಕೊಳವೆ ಬಾವಿಗೆ ಬಾಲಕಿ ಕಾವೇರಿ ಬಿದ್ದಿದ್ದಳು. ಆಕೆಯ ರಕ್ಷಣಾ ಕಾರ್ಯ ಶನಿವಾರದಿಂದ ಮುಂದುವರಿದಿತ್ತು. ಕಾವೇರಿ ಇರುವ ಜಾಗದ ಬಳಿ ರಕ್ಷಣಾ ತಂಡದ ಸಿಬ್ಬಂದಿಗಳು ಪತ್ತೆ ಹಚ್ಚಿದ್ದರು.

ಕಾವೇರಿ ತಂದೆ, ತಾಯಿ ಸೇರಿದಂತೆ ರಾಜ್ಯದ ಜನತೆ ಕಾವೇರಿ ಬದುಕಿ ಬಾ ಎಂದು ಪ್ರಾರ್ಥಿಸುತ್ತಿದ್ದರು. ಆ ನಿಟ್ಟಿನಲ್ಲಿ ರಕ್ಷಣಾ ತಂಡ ತೀವ್ರಗತಿಯಲ್ಲಿ ಕಾರ್ಯಾಚರಿಸುತ್ತಿದ್ದು, ಸೋಮವಾರ ಕೊಳವೆ ಬಾವಿ ಸಮೀಪ 25 ಅಡಿ ಆಳದ ಬಾವಿ ತೋಡುವ ಕಾರ್ಯ ಅಂತ್ಯವಾಗಿದ್ದು, ಮಗುವಿನ ಕೈ ತೋರುವ ಜಾಗದವರೆಗೆ ಅಡ್ಡ ಸುರಂಗ ಮಾರ್ಗ ಕೊರೆಯಲಾಗಿದೆ. ಏತನ್ಮಧ್ಯೆ ಅಲ್ಲಿಂದ ಮುಂದಿನ ಕಾರ್ಯಾಚರಣೆಗೆ ಬಂಡೆಗಲ್ಲಿನಿಂದಾಗಿ ಅಡ್ಡಿ ಉಂಟಾಗಿದೆ ಎಂದು ವರದಿ ವಿವರಿಸಿತ್ತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.