ಸಿಎಂ ಜತೆ ಭಿನ್ನಾಭಿಪ್ರಾಯವಿಲ್ಲ: ಸತೀಶ್ ಜಾರಕಿಹೊಳಿ
Team Udayavani, May 1, 2017, 1:26 PM IST
ಹೊನ್ನಾಳಿ (ದಾವಣಗೆರೆ ಜಿಲ್ಲೆ ): ಸಿಎಂ ಸಿದ್ದರಾಮಯ್ಯ ಹಾಗೂ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಅವರ ನೇತೃತ್ವದಲ್ಲೇ ಎದುರಿಸಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಪಕ್ಷ ಅಂದ ಮೇಲೆ ಸಣ್ಣಪುಟ್ಟ ಗೊಂದಲಗಳಿರುತ್ತವೆ. ಅದನ್ನು ನಿಭಾಯಿಸಲು ಹಾಗೂ ನಿವಾರಿಸಲು ನಮ್ಮ ಪಕ್ಷದ ಮುಖಂಡರು ಸಮರ್ಥರಿದ್ದಾರೆ. ನಾನು ಕಾಂಗ್ರೆಸ್ ತೊರೆದು ಯಾವುದೇ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಬದಲಾವಣೆ ಸಹಜ ಪ್ರಕ್ರಿಯೆ. ಅದಕ್ಕೆ ರಾಜಕೀಯ ಬಣ್ಣ ಬೇಡ. ಪ್ರತೀ ಎರಡು, ಮೂರು ವರ್ಷಗಳಿಗೊಮ್ಮೆ ಉಸ್ತುವಾರಿಗಳನ್ನು ಬದಲಾಯಿಸುವ ಹೊಣೆ ಕಾಂಗ್ರೆಸ್ ಹೈಕಮಾಂಡ್ ಮೇಲಿರುವುದರಿಂದ ಸಹಜವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಿಂದ ತೆರವುಗೊಳಿಸಿದ್ದಾರೆ. ಇದಕ್ಕೆ ಯಾವುದೇ ಕಾರಣ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು