ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಚಾರಣೆ


Team Udayavani, May 19, 2017, 3:45 AM IST

170518kpn93.jpg

ಬೆಂಗಳೂರು: ಜಂತಕಲ್‌ ಮೈನಿಂಗ್‌ ಕಂಪನಿಗೆ ಅಕ್ರಮವಾಗಿ ಪರವಾನಗಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಂದೆ ಗುರುವಾರ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಚಾರಣೆಗೆ ಹಾಜರಾದರು.

ಬೆಂಗಳೂರಿನ ಹೆಬ್ಟಾಳದಲ್ಲಿರುವ ಲೋಕಾಯುಕ್ತ ವಿಶೇಷ ತನಿಖಾ ದಳದ ಕಚೇರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಅಧಿಕಾರಿಗಳು 60 ಪ್ರಶ್ನೆಗಳಿಗೆ ಉತ್ತರ ಪಡೆದರು.

ವಿಚಾರಣೆ ವೇಳೆ ಕುಮಾರಸ್ವಾಮಿ ಅವರು ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಸಮಾಧಾನದಿಂದಲೇ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೂಮ್ಮೆ ವಿಚಾರಣೆ ಅಗತ್ಯವಾದರೆ ತಮಗೆ ಮೂರು ದಿನ ಮುಂಚೆ ನೋಟಿಸ್‌ ಕೊಡಬೇಕು ಎಂದು ಇದೇ ಸಂದರ್ಭದಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ಹೇಳಿದರು. ಮಧ್ಯಾಹ್ನ 12 ಗಂಟೆ ವೇಳಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ ಕುಮಾರಸ್ವಾಮಿ ಮಧ್ಯಾಹ್ನ 1.50 ಕ್ಕೆ ನಿರ್ಗಮಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಕಾರ್ಯದರ್ಶಿ ಗಂಗಾರಾಮ್‌ ಬಡೇರಿಯಾ ಅವರನ್ನು ಈಗಾಗಲೇ ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಈ ವೇಳೆ ಅಂದಿನ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಅವರ ಮೌಖೀಕ ಸೂಚನೆ ಮೇರೆಗೆ ಪರವಾನಗಿ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೇ ಇದನ್ನು ಕಡತದಲ್ಲೂ ಉಲ್ಲೇಖೀಸಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ  ಅವರನ್ನು ಹೊರತು ಪಡಿಸಿ, ಇತರ ಎಲ್ಲರನ್ನು ವಿಚಾರಣೆ ನಡೆಸಿ ಮೂರು ತಿಂಗಳ ಒಳಗೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸದ್ಯ 3 ಮಂದಿಯನ್ನು ಮಾತ್ರ ವಿಚಾರಣೆಗೆ ಕರೆಸಲಾಗಿದೆ. ಅಗತ್ಯ ಬಿದ್ದರೆ ಇನ್ನುಳಿದ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಯಾವುದೇ ಭೀತಿಯಿಲ್ಲ:
ವಿಚಾರಣೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ಎಸ್‌ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿದ್ದೇನೆ. ಏನು ಪ್ರಶ್ನೆ ಕೇಳಿದ್ದಾರೆ? ನಾನು ಏನು ಹೇಳಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಮತ್ತೆ ವಿಚಾರಣೆ ಅಗತ್ಯವಿದ್ದಲ್ಲಿ ಮೂರು ದಿನಗಳ ಮೊದಲೇ ನೋಟಿಸ್‌ ನೀಡುವಂತೆ ಹೇಳಿದ್ದೇನೆ. ಕೇವಲ ಜಂತಕಲ್‌ ಮೈನಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಯಿತು. ಕೆಲವರು ನನಗೆ ಬಂಧನ ಭೀತಿ ಎಂದು ಹೇಳುತ್ತಿದ್ದಾರೆ. ಅಂತಹ ಯಾವುದೇ ಭೀತಿ ನಮಗಿಲ್ಲ ಎಂದು ಹೇಳಿದರು.

ಬಡೇರಿಯಾ ಮತ್ತೆ ಪೊಲೀಸ್‌ ವಶಕ್ಕೆ
ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ ಅವರನ್ನು ಮೇ20ರವರೆಗೆ ಮತ್ತೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ. ಮೇ 18ರವರೆಗೆ ಪೊಲೀಸ್‌ ವಶಕ್ಕೆ ಪಡೆಯಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಗಂಗಾರಾಮ್‌ ಬಡೇರಿಯಾ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಎರಡು ದಿನಗಳ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.