ಬಾರ್ ರಕ್ಷಣೆ: ಸರಕಾರದಿಂದ ಕಾನೂನು ತಜ್ಞರ ಮೊರೆ
Team Udayavani, Jul 5, 2017, 3:05 AM IST
ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಕಾನೂನು ತಜ್ಞರ ಮೊರೆ ಹೋಗಲು ರಾಜ್ಯ ಸರಕಾರ ತೀರ್ಮಾನಿಸಿದೆ. ಗೃಹಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಸಹಿತ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹೆದ್ದಾರಿ ವ್ಯಾಪ್ತಿಯ 500 ಮೀಟರ್ ವ್ಯಾಪ್ತಿಯ ಮದ್ಯ ದಂಗಡಿಗಳನ್ನು ಮುಚ್ಚಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದಿಂದ ಬೆಂಗಳೂರು ನಗರದ ಬಾರ್ಗಳನ್ನು ಉಳಿಸಿಕೊಳ್ಳಲು ವಾರದೊಳಗೆ ಸೂಕ್ತ ದಾರಿ ಕಂಡುಕೊಂಡು ಮಾಹಿತಿ ನೀಡುವಂತೆ ಕಾನೂನು ಇಲಾಖೆ, ಲೋಕೋಪಯೋಗಿ, ಅಬಕಾರಿ, ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದರು.
ಇದರ ಜತೆಗೆ ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ನಗರ ಸ್ಥಳೀಯ ಸಂಸ್ಥೆಗಳ ರಸ್ತೆಗಳೆಂದು ಡಿನೋಟಿಫೈ ಮಾಡಿದ ಪಂಜಾಬ್ ಸರಕಾರದ ಕ್ರಮ ಸರಿಯಾಗಿದೆ ಎಂಬ ರೀತಿಯಲ್ಲಿ ಸುಪ್ರೀಂಕೋರ್ಟ್ ನೀಡಿದ ಅಭಿಪ್ರಾಯದ ಬಗ್ಗೆಯೂ ಚರ್ಚಿಸಿದ ಮುಖ್ಯಮಂತ್ರಿ, ಅದನ್ನು ಆಧರಿಸಿ ಸರಕಾರ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಮಸೂದೆ ಬೇಕೇ? ಅಧ್ಯಾದೇಶದಿಂದ ಸಾಧ್ಯವೇ?: ಪಂಜಾಬ್ ಸರಕಾರ ವಿಧಾನಸಭೆಯಲ್ಲಿ ಮಸೂದೆ ಮೂಲಕ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿದಂತೆ ರಾಜ್ಯ ಸರಕಾರವೂ ವಿಧಾನಮಂಡಲದಲ್ಲಿ ಮಸೂದೆ ರೂಪಿಸುವವರೆಗೆ ಕಾಯಬೇಕೇ ಅಥವಾ ಅಧ್ಯಾದೇಶ ಮೂಲಕ ಈ ಪ್ರಕ್ರಿಯೆ ಕೈಗೊಳ್ಳಲು ಸಾಧ್ಯವೇ ಎಂಬುದನ್ನು ಕಾನೂನು ತಜ್ಞರ ಜತೆ ಸಮಾಲೋಚಿಸಿ ಮಾಹಿತಿ ನೀಡಿ ಎಂದು ಮುಖ್ಯಮಂತ್ರಿ ಸಲಹೆ ಮಾಡಿದ್ದಾರೆ. ಅಲ್ಲದೆ, ಈ ಕುರಿತು ಪೂರ್ಣ ಮಾಹಿತಿ ಸಂಗ್ರಹಿಸಬೇಕು. ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನಾತ್ಮಕ ಹಾಗೂ ಶಾಸನಾತ್ಮಕ ಪರಿಹಾರ ಕೈಗೊಳ್ಳುತ್ತಿರುವ ಬಗೆಗೂ ಮಾಹಿತಿ ತರಿಸಿಕೊಂಡು ವರದಿ ನೀಡಿ. ಅದರಂತೆ ಮುಂದಿನ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಪಂಜಾಬ್ ಸರಕಾರದ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇದರೊಂದಿಗೆ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಯಾವ ಕ್ರಮ ಅನುಸರಿಸುತ್ತಾರೆ ಎಂಬುದನ್ನೂ ಪರಿ ಶೀಲಿಸಲಾಗುತ್ತಿದೆ. ಅದನ್ನು ಆಧರಿಸಿ ನಮ್ಮ ರಾಜ್ಯದಲ್ಲಿ ಏನು ಮಾಡಬಹುದು ಎಂಬುದನ್ನು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್