ಒತ್ತಿನೆಣೆ ಗುಡ್ಡ ಕುಸಿತ: ಕಾರವಾರ-ಉಡುಪಿ ಸಂಚಾರ ಸ್ಥಗಿತ
Team Udayavani, Jun 7, 2017, 8:55 AM IST
ಬೈಂದೂರು: ಇಲ್ಲಿನ ಒತ್ತಿನೆಣೆ ಬಳಿ ಬುಧವಾರ ನಸುಕಿನ 4.30 ರ ವೇಳೆಗೆ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಬಿದ್ದು ನಿರಂತರ 5 ಗಂಟೆಗಳ ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ನಡೆದಿದೆ.
ಹೆದ್ದಾರಿ ಕಾಮಾಗಾರಿಗಾಗಿ ಗುಡ್ಡ ಕೊರೆಯಲಾಗಿದ್ದು, ಭಾರೀ ಮಳೆಯಿಂದಾಗಿ ಕುಸಿದು ಬಿದ್ದ ಪರಿಣಾಮ ಬೆಳಗ್ಗಿನಿಂದ ನೂರಾರು ವಾಹನ ಸವಾರರು ಸಂಚಾರ ಸಾಧ್ಯವಾಗದೆ ಪರದಾಡಬೇಕಾಯಿತು.
ತೆರವು ಕಾರ್ಯಕ್ಕೆ ಮೀನ ಮೇಷ !
ಗುಡ್ಡ 4.30 ರ ವೇಳೆಗ ಕುಸಿದು ಬಿದ್ದರೆ ಸ್ಥಳಕ್ಕೆ ಕೇವಲ 3 ಜೆಸಿಬಿಗಳೊಂದಿಗೆ 7.30 ಕ್ಕೆ ಆಗಮಿಸಿ ತೆರವು ಕಾರ್ಯ ಆರಂಭಿಸಲಾಗಿದೆ. ಇದು ನೂರಾರು ವಾಹನ ಸವಾರರ ಆಕ್ರೋಶಕ್ಕೆ ಕಾರವಾಯಿತು. ಮಣ್ಣು ತೆರವು ಮಾಡಿ 9.30 ರ ವೇಳೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಭಟ್ಕಳ ಕಡೆ ಯಿಂದ ಬರುತ್ತಿರುವ ಮತ್ತು ತೆರಳುತ್ತಿರುವ ಬಸ್ಗಳು ಸೇರಿದಂತೆ ನೂರಾರು ವಾಹನಗಳ ಸವಾರರು ಪರದಾಡಬೇಕಾಯಿತು.
ಉದಯವಾಣಿ ಅಪಾಯದ ಎಚ್ಚರಿಕೆ ನೀಡಿತ್ತು
ಜೂನ್ 5 ರಂದು ಉದಯವಾಣಿ ಈ ಬಗ್ಗೆ ವರದಿ ಪ್ರಕಟಿಸಿ ಅಪಾಯದ ಎಚ್ಚರಿಕೆ ನೀಡಿತ್ತು. ಅದೃಷ್ಟವಷಾತ್ ಬೆಳಗಿನ ಜಾವ ಗುಡ್ಡ ಕುಸಿದಿರುವ ಹಿನ್ನಲೆಯಲ್ಲಿ ಸಂಚಾರ ವಿರಳವಾಗಿದ್ದ ಕಾರಣ ಯಾವುದೇ ವಾಹನ ಸಿಲುಕಿಲ್ಲ.
ಸ್ಥಳೀಯರ ಆಕ್ರೋಶ
ಈ ಬಗ್ಗೆ ಸ್ಥಳೀಯರು ಹೋರಾಟ ನಡೆಸಿದ್ದು, ಕಾಮಾಗಾರಿ ಕಳಪೆ ಮಾಡಲಾಗಿದ್ದು,ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿ ಅಧಿಕಾರಿಗಳು ಬೇಜಾವಾಬ್ಧಾರಿತನ ತೋರಿದ್ದು ಹೀಗಾಗಿದೆ ಎಂದು ಆರೋಪಿಸಿದ್ದಾರೆ. ಹೆದ್ದಾರಿ ಕಾಮಗಾರಿಯ ಕುರಿತು ಹಲವರು ತೀವ್ರ ಅಸಮಧಾನ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ