ಬಾರ್‌ ರಕ್ಷಣೆ: ಸರಕಾರದಿಂದ ಕಾನೂನು ತಜ್ಞರ ಮೊರೆ


Team Udayavani, Jul 5, 2017, 3:05 AM IST

Siddaramaiah-1-900.jpg

ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ 500 ಮೀಟರ್‌ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಕಾನೂನು ತಜ್ಞರ ಮೊರೆ ಹೋಗಲು ರಾಜ್ಯ ಸರಕಾರ ತೀರ್ಮಾನಿಸಿದೆ. ಗೃಹಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಸಹಿತ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹೆದ್ದಾರಿ ವ್ಯಾಪ್ತಿಯ 500 ಮೀಟರ್‌ ವ್ಯಾಪ್ತಿಯ ಮದ್ಯ ದಂಗಡಿಗಳನ್ನು ಮುಚ್ಚಬೇಕು ಎಂಬ ಸುಪ್ರೀಂ ಕೋರ್ಟ್‌ ಆದೇಶದಿಂದ ಬೆಂಗಳೂರು ನಗರದ ಬಾರ್‌ಗಳನ್ನು ಉಳಿಸಿಕೊಳ್ಳಲು ವಾರದೊಳಗೆ ಸೂಕ್ತ ದಾರಿ ಕಂಡುಕೊಂಡು ಮಾಹಿತಿ ನೀಡುವಂತೆ ಕಾನೂನು ಇಲಾಖೆ, ಲೋಕೋಪಯೋಗಿ, ಅಬಕಾರಿ, ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದರು.

ಇದರ ಜತೆಗೆ ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ನಗರ ಸ್ಥಳೀಯ ಸಂಸ್ಥೆಗಳ ರಸ್ತೆಗಳೆಂದು ಡಿನೋಟಿಫೈ ಮಾಡಿದ ಪಂಜಾಬ್‌ ಸರಕಾರದ ಕ್ರಮ ಸರಿಯಾಗಿದೆ ಎಂಬ ರೀತಿಯಲ್ಲಿ ಸುಪ್ರೀಂಕೋರ್ಟ್‌ ನೀಡಿದ ಅಭಿಪ್ರಾಯದ ಬಗ್ಗೆಯೂ ಚರ್ಚಿಸಿದ ಮುಖ್ಯಮಂತ್ರಿ, ಅದನ್ನು ಆಧರಿಸಿ ಸರಕಾರ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಮಸೂದೆ ಬೇಕೇ? ಅಧ್ಯಾದೇಶದಿಂದ ಸಾಧ್ಯವೇ?: ಪಂಜಾಬ್‌ ಸರಕಾರ ವಿಧಾನಸಭೆಯಲ್ಲಿ ಮಸೂದೆ ಮೂಲಕ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿದಂತೆ ರಾಜ್ಯ ಸರಕಾರವೂ ವಿಧಾನಮಂಡಲದಲ್ಲಿ ಮಸೂದೆ ರೂಪಿಸುವವರೆಗೆ ಕಾಯಬೇಕೇ ಅಥವಾ ಅಧ್ಯಾದೇಶ ಮೂಲಕ ಈ ಪ್ರಕ್ರಿಯೆ ಕೈಗೊಳ್ಳಲು ಸಾಧ್ಯವೇ ಎಂಬುದನ್ನು ಕಾನೂನು ತಜ್ಞರ ಜತೆ ಸಮಾಲೋಚಿಸಿ ಮಾಹಿತಿ ನೀಡಿ ಎಂದು ಮುಖ್ಯಮಂತ್ರಿ ಸಲಹೆ ಮಾಡಿದ್ದಾರೆ. ಅಲ್ಲದೆ, ಈ ಕುರಿತು ಪೂರ್ಣ ಮಾಹಿತಿ ಸಂಗ್ರಹಿಸಬೇಕು. ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನಾತ್ಮಕ ಹಾಗೂ ಶಾಸನಾತ್ಮಕ ಪರಿಹಾರ ಕೈಗೊಳ್ಳುತ್ತಿರುವ ಬಗೆಗೂ ಮಾಹಿತಿ ತರಿಸಿಕೊಂಡು ವರದಿ ನೀಡಿ. ಅದರಂತೆ ಮುಂದಿನ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಪಂಜಾಬ್‌ ಸರಕಾರದ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಅಭಿಪ್ರಾಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇದರೊಂದಿಗೆ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಯಾವ ಕ್ರಮ ಅನುಸರಿಸುತ್ತಾರೆ ಎಂಬುದನ್ನೂ ಪರಿ ಶೀಲಿಸಲಾಗುತ್ತಿದೆ. ಅದನ್ನು ಆಧರಿಸಿ ನಮ್ಮ ರಾಜ್ಯದಲ್ಲಿ ಏನು ಮಾಡಬಹುದು ಎಂಬುದನ್ನು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.