ಸಾಲಮನ್ನಾ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


Team Udayavani, Jun 21, 2017, 11:15 AM IST

KS-Eshwarappa–800.jpg

ವಿಧಾನಪರಿಷತ್ತು: ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡದೇ ಸರ್ಕಾರಕ್ಕೆ ಬೇರೆ ವಿಧಿಯೇ ಇಲ್ಲ. ಖಜಾನೆಯಲ್ಲಿ ಹಣ ಇಲ್ಲದಿದ್ದರೆ ಸಾಲ ಮಾಡಿಯಾದರೂ ರೈತರ ಸಾಲ ಮನ್ನಾ ಮಾಡಲೇಬೇಕು. ಇಲ್ಲದಿದ್ದರೆ ರೈತರೂ ಕ್ಷಮಿಸಲ್ಲ, ಬಿಜೆಪಿಯೂ ಸುಮ್ಮನಿರಲ್ಲ ಎಂದು ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕಡೆ ಬೆಟ್ಟು ಮಾಡದೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಬೇಕು.

ಇಲ್ಲದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವ ದಲ್ಲಿ ಜುಲೈ 8, 9 ಮತ್ತು 10ರಂದು ಧರಣಿ ನಡೆಸಿ, ಲಕ್ಷಾಂತರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ. ಸರ್ಕಾರ ಸಾಲ ಮನ್ನಾ ಘೋಷಣೆ ಮಾಡುವವರೆಗೆ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತರ ಸಾಲ ಮನ್ನಾ ಮಾಡಿ ಇಲ್ಲ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಘೋಷಿಸಿ. ಕೇಂದ್ರ ಸರ್ಕಾರ ಮಾಡಿದರೆ ನಾವು ಮಾಡಲು ಸಿದ್ಧ ಎಂದು ಹೇಳುವುದು ಭಂಡತನ ಆಗುತ್ತದೆ. ಕೇಂದ್ರ ಸರ್ಕಾರದ ಕಡೆ ಬೆಟ್ಟು ಮಾಡದೆ ಮಹಾರಾಷ್ಟ್ರ, ಉತ್ತರ ಪ್ರದೇಶ ಸರ್ಕಾರಗಳು ಸಾಲ ಮನ್ನಾ ಮಾಡಿವೆ ಎಂದು ಈಶ್ವರಪ್ಪ ಹೇಳುತ್ತಲೇ, ಪಂಚಾಬ್‌ ಸರ್ಕಾರವೂ ಸಾಲ ಮನ್ನಾ ಮಾಡಿದೆ ಎಂದು ಕಾಂಗ್ರೆಸ್‌ ಸದಸ್ಯರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, 10 ಲಕ್ಷ ರೈತರ ಸಾಲಮನ್ನಾ ಮಾಡಿದ್ದಕ್ಕೆ ಪಂಜಾಬ್‌ ಸರ್ಕಾರಕ್ಕೆ ಶಿರಸಾಷ್ಟಾಂಗ ನಮಸ್ಕಾರ ಹಾಕುತ್ತೇನೆ. ಪಂಜಾಬ್‌ನಲ್ಲಿ ನಿಮ್ಮದೇ ಪಕ್ಷದ ಸರ್ಕಾರ ಸಾಲ ಮನ್ನಾ ಮಾಡುವಾಗ ಕೇಂದ್ರ ಸರ್ಕಾರವನ್ನು ಕೇಳಿಲ್ಲ. ಅದನ್ನೇ ಇಲ್ಲಿ ನೀವು ಮಾಡಿ ಎಂದು ಆಗ್ರಹಿಸಿದರು.

ಬಿಎಸ್‌ವೈ ಹೇಳಿದ್ದು ಒಪ್ಪುತ್ತೇನೆ: ರೈತರ ಸಾಲ ಮನ್ನಾ ಮಾಡಿ ಎಂದು ಇಂದು ಹೋರಾಟ ಮಾಡುತ್ತಿರುವ ಯಡಿಯೂರಪ್ಪ ತಾವು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ನನಗೆ ನೋಟ್‌ ಪ್ರಿಂಟ್‌ ಮಾಡುವ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದ್ದರು.

ಈ ದ್ವಂದ್ವ ನೀತಿ ಯಾಕೆ ಎಂದು ಕಾಂಗ್ರೆಸ್‌ನ ಉಗ್ರಪ್ಪ ಪ್ರಶ್ನಿಸಿದ್ದಕ್ಕೆ, ಯಡಿಯೂರಪ್ಪ ಹಾಗೆ ಹೇಳಿರಬಹುದು. ಅದನ್ನು ನಾನು ಒಪ್ಪುತ್ತೇನೆ .

ಆದರೆ, ಮುಂದೆ ಜಗದೀಶ ಶೆಟ್ಟರ್‌ ಸಾಲ ಮನ್ನಾ ಮಾಡಿದರು ಎಂದು ಈಶ್ವರಪ್ಪ ಹೇಳಿದರು. ಜಗದೀಶ ಶೆಟ್ಟರ್‌ ಘೋಷಣೆ ಮಾಡಿದ್ದಷ್ಟೇ, ಮನ್ನಾ ಮಾಡಿದ್ದು ನಮ್ಮ ಸರ್ಕಾರ ಎಂದು ಕಾಂಗ್ರೆಸ್‌ ಸದಸ್ಯರು ಹೇಳಿದರು. ಈಗ ನೀವು ಘೋಷಣೆ ಮಾಡಿ, ನಾವು ಬಂದು ಮನ್ನಾ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು. ಈ ವೇಳೆ ಮುಂದೆ ಅಧಿಕಾರಕ್ಕೆ ಬರುವ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್‌ ಸದಸ್ಯರು ಪರಸ್ಪರ ಕಾಲೆಳೆದುಕೊಂಡರು.
 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.