ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ
Team Udayavani, Jul 2, 2017, 11:51 AM IST
ಬೆಂಗಳೂರು/ಉಡುಪಿ : ಶ್ರೀಕೃಷ್ಣಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ವೇಳೆ ನಮಾಜ್ ಮಾಡಿದ್ದನ್ನು ವಿರೋಧಿಸಿ, ಪೇಜಾವರ ಪರ್ಯಾಯ ಮಠಾಧೀಶ ವಿಶ್ವೇಶ ತೀರ್ಥ ಶ್ರೀಗಳು ಸಮರ್ಥಿಸಿ ನೀಡಿದ ಕೆಲ ಹೇಳಿಕೆಗಳನ್ನು ವಿರೋಧಿಸಿ ರಾಜ್ಯಾಧ್ಯಂತ ಭಾನುವಾರ ಶ್ರೀರಾಮ ಸೇನೆ , ಹಿಂದೂ ಜನ ಜಾಗೃತಿ ಸಮಿತಿ ಮತ್ತು ಹಿಂದೂ ಮಹಾ ಸಭಾ ಪ್ರತಿಭಟನೆ ನಡೆಸಿದೆ.
ಉಡುಪಿಯ ಕ್ಲಾಕ್ಟವರ್ ಬಳಿ ಪ್ರತಿಭಟನೆ ನಡೆಸಿ ಶ್ರೀಗಳ ಹೇಳಿಕೆಯನ್ನು ಮತ್ತು ಮಠದಲ್ಲಿ ನಮಾಜ್ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಭಜನೆಯನ್ನೂ ಮಾಡಲಾಯಿತು.
ಮಂಗಳೂರಿನ ಲಾಲ್ಬಾಗ್ನಲ್ಲೂ ಪ್ರತಿಭಟನೆ ನಡೆಸಲಾಗಿದೆ. ನೂರಾರು ಶ್ರೀರಾಮಸೇನೆ ಕಾರ್ಯಕರ್ತರು ಉಪಸ್ಥಿತರಿದ್ದರು.
ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿ ಪೇಜಾವರ ಶ್ರೀಗಳು ಗೌರವಾನ್ವಿತರು, ಪೂಜ್ಯ ಶ್ರೀಗಳು. ಅವರ ವಿರುದ್ಧ ನಮ್ಮ ಪ್ರತಿಭಟನೆಯಲ್ಲ. ಅವರು ತೆಗೆದುಕೊಂಡ ನಿರ್ಧಾರದ ವಿರುದ್ಧ ಪ್ರತಿಭಟನೆ. ಸೌಹಾರ್ದ ಕೂಟದ ವಿರೋಧಿ ಪ್ರತಿಭಟನೆಯಲ್ಲ. ಸೌಹಾರ್ದಕ್ಕೆ ಬಳಸಿಕೊಂಡ ಸ್ಥಳದ ಬಗ್ಗೆ ಪ್ರತಿಭಟನೆ. ಸಮಸ್ತ ಹಿಂದೂ ಸಮಾಜಕ್ಕೆ ಅವಮಾನ ಆಗಿದೆ ಎಂದರು.
ಹುಬ್ಬಳ್ಳಿ ,ಬೆಳಗಾವಿ ,ಕಲಬುರಗಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು.
ಚಿತ್ರಗಳು:ಆಸ್ಟ್ರೋ ಮೋಹನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ