ಕೇಂದ್ರದಿಂದ ರೈತರ ಸಾಲ ಮನ್ನಾ ಇಲ್ಲ
Team Udayavani, Jul 7, 2017, 3:45 AM IST
ಬಾಗಲಕೋಟೆ: ರಾಷ್ಟ್ರೀಕೃತ ಬ್ಯಾಂಕ್ಗಳ ರೈತರ ಸಾಲಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದು, ಅದಕ್ಕೆ ಜೇಟ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರ ನೇರವಾಗಿ ಸಾಲಮನ್ನಾ ಮಾಡಲ್ಲ. ರಾಜ್ಯಕ್ಕೆ ಲಕ್ಷಾಂತರ ಕೋಟಿ ಅನುದಾನ ಕೊಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರವೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 14ನೇ ಹಣಕಾಸು ಯೋಜನೆಯಡಿ ಮೂರು ವರ್ಷದಲ್ಲಿ 76,400 ಕೋಟಿ, ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳಡಿ 28,258 ಕೋಟಿ, ಬರ ಪರಿಹಾರದಡಿ 4290 ಕೋಟಿ ರೂ., ನೀತಿ ಆಯೋಗದ ಶಿಫಾರಸ್ಸು ಅನ್ವಯ 1,13,478 ಕೋಟಿ ರೂ. ಅನುದಾನ ರಾಜ್ಯಕ್ಕೆ ಕೊಡಲಾಗಿದೆ. ಪ್ರಧಾನಿ ಕೃಷಿ
ವಿಕಾಸ ಯೋಜನೆಯಡಿ 2015-16ರಲ್ಲಿ 229 ಕೋಟಿ ರೂ., 2016-17ನೇ ಸಾಲಿಗೆ 60 ಕೋಟಿ ರೂ.ನೀಡಲಾಗಿದೆ. ಇಷ್ಟೊಂದು ಅನುದಾನವನ್ನು ರಾಜ್ಯಕ್ಕೆ ಕೇಂದ್ರ ಕೊಟ್ಟಿರುವಾಗ, ರೈತರ ನೆರವಿಗೆ ಬರುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
3 ಲಕ್ಷ ಕೋಟಿ ರೂ. ಆದಾಯ: ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ಟಿ ಜಾರಿಗೊಳಿಸುವ ಮೂಲಕ ಕ್ರಾಂತಿಕಾರಿ ಬದಲಾವಣೆಗೆ ಮುಂದಾಗಿದ್ದಾರೆ. ಇದರಿಂದ 3 ಲಕ್ಷ ಕೋಟಿ ರೂ. ತೆರಿಗೆ ಸರ್ಕಾರಕ್ಕೆ ಬರಲಿದೆ. ಇದರಿಂದ ಭಾರತ ಆರ್ಥಿಕ ಸದೃಢತೆ ಹೊಂದಲಿದ್ದು, ಇಂತಹ ಹಲವಾರು ಕ್ರಾಂತಿಕಾರಕ ಯೋಜನೆಗಳಿಂದ ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು