ಬಾಲ್ಯದಲ್ಲಿ ನೋಡಿದ್ದ ನಾಟಕದ ಪಾತ್ರಧಾರಿಯನ್ನು ಸನ್ಮಾನಿಸಿದ ಸಿಎಂ


Team Udayavani, Jul 16, 2017, 2:50 AM IST

muniyamma.jpg

ಮೈಸೂರು: “ನಾನು ಸಣ್ಣ ಹುಡುಗನಿದ್ದಾಗ ಸುಗ್ಗಿಕಾಲದಲ್ಲಿ ನಮ್ಮೂರಿಗೆ ದೊಂಬಿದಾಸರ ಮುನಿಯಮ್ಮ ಸತ್ಯವಾನ
ಸಾವಿತ್ರಿ ನಾಟಕ ಮಾಡಲು ಬರೋಳು, ಈಗಲೂ ಇದ್ದಾಳ ಅವಳು’! ಏಕಲವ್ಯ ನಗರದಲ್ಲಿ ಜೆ-ನರ್ಮ್ ಮನೆಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿ ಮನೆಗಳನ್ನು ನೀಡಲಾಗುತ್ತಿರುವ ಅಲೆಮಾರಿಗಳ ಬದುಕಿನ ಬಗ್ಗೆ ಮಾತನಾಡುವಾಗ ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು.

ತಾನು ಸಣ್ಣ ಹುಡುಗನಿದ್ದಾಗ ದೊಂಬಿದಾಸರು ಹಳ್ಳಿಗೆ ಬಂದು ಸತ್ಯವಾನ ಸಾವಿತ್ರಿ ನಾಟಕ ಮಾಡೋರು, ಸುಗ್ಗಿಕಾಲದಲ್ಲಿ ಭತ್ತ, ರಾಗಿ ಕೊಟ್ಟು ಕಳುಹಿಸೋವ್ರು. ಮುನಿಯಮ್ಮ ಅಂತಾ ಸತ್ಯವಾನ ಸಾವಿತ್ರಿ ನಾಟಕದಲ್ಲಿ ಸಾವಿತ್ರಿ ಪಾತ್ರ ಮಾಡ್ತಿದ್ದಳು.

50 ವರ್ಷಗಳ ಹಿಂದೆ ತಾನು ನಾಟಕ ನೋಡಿದ್ದು. ಈಗ್ಲೂ ಇದ್ದಾಳ ಮುನಿಯಮ್ಮ ಎಂದು ಅಲ್ಲಿನ ನಿವಾಸಿಗಳನ್ನು
ಪ್ರಶ್ನಿಸಿದರು.

“ಇದ್ದಾಳೆ ಸಾರ್‌…’ ಎಂದು ಇಬ್ಬರು ಮಹಿಳೆಯರು ಮುನಿಯಮ್ಮಳನ್ನು ವೇದಿಕೆಗೆ ಕೈಹಿಡಿದು ಕರೆದೊಯ್ದರು. ಮುನಿಯಮ್ಮಳನ್ನು ಕಂಡ ಸಿದ್ದರಾಮಯ್ಯ “50 ವರ್ಷಗಳ ಹಿಂದೆ ನಿನ್ನ ನಾಟಕ ನೋಡಿದ್ದು, ಇನ್ನೂ ಹೆಂಗೆ ಜಾnಪಕ ಇಟ್ಕೊಂಡಿದ್ದೀನಿ ನೋಡು, ನಾವು ಸಿಟಿಯವ್ರಲ್ಲ ಹಳ್ಳಿಯವ್ರು, ಮರೆಯಲ್ಲ. ಈಗ್ಲೂ ನಾಟಕ ಮಾಡ್ತಿಯಾ? ನಾನು ಯಾರು
ಜಾnಪಕ ಇದ್ದದಾ? ಕೈ ನಡುಗ್ತವಲ್ಲ ಈಗ, ಅಕ್ಕಿ ಕೊಡ್ತಾವ್ರಲ್ಲ ಸಾಕಾಯ್ತದ ಏಳು ಕೆಜಿ’ ಎಂದು ಮುನಿಯಮ್ಮಳನ್ನು ವಿಚಾರಿಸಿಕೊಂಡರು.

ಅಲ್ಲದೇ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ತಮ್ಮ ಜೇಬಿನಿಂದ 500 ರೂ. ನೋಟು ತೆಗೆದುಕೊಟ್ಟು, “ಆಯ್ತು ಹೋಗಿಗ, ಮನೆ ಕೊಟ್ಟಿದ್ದೀನಿ ಇರೋಗು’ ಎಂದರು. ವೇದಿಕೆ ಇಳಿಯುತ್ತಿದ್ದ ಮುನಿಯಮ್ಮಳನ್ನು ಸಚಿವ ಮಹದೇವಪ್ಪ ಸಹ ಮಾತನಾಡಿಸಿ, 500 ರೂ.ಗಳ ಎರಡು ನೋಟು ಕೊಟ್ಟು ಕಳುಹಿಸಿದರು.

19ರಂದು ಪ್ರತಿಭಾವಂತ ಕನ್ನಡಿಗರಿಗೆ ಸಿಎಂ ಅಭಿನಂದನೆ
ಬೆಂಗಳೂರು:
ಕೇಂದ್ರ ಲೋಕಸೇವಾ ಆಯೋಗದ 2016ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದ ಪ್ರತಿಭಾವಂತ ಕನ್ನಡಿಗ ಅಭ್ಯರ್ಥಿಗಳಿಗೆ ಜು.19ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿನಂದನೆ
ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ
ಭಾಷೆಯನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದ 15 ಅಭ್ಯರ್ಥಿಗಳು ಸೇರಿ ಒಟ್ಟು 58 ಪ್ರತಿಭಾವಂತರನ್ನು
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಲಿದ್ದಾರೆ. 

21ರಂದು ಮಲ್ಲಿಕಾರ್ಜುನ ಖರ್ಗೆ ಕುರಿತ ಪುಸ್ತಕ ಬಿಡುಗಡೆ
ಬೆಂಗಳೂರು: ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಕುರಿತ ಲೇಖನಗಳ ಸಂಗ್ರಹ “ಬಯಲ ಹೊನ್ನು’ ಪುಸ್ತಕ ಜು.21ರಂದು ಬಿಡುಗೊಳ್ಳಲಿದೆ. ಸಪ್ನಾ ಬುಕ್‌ ಹೌಸ್‌ ಹೊರತಂದಿರುವ ಈ ಪುಸ್ತಕವನ್ನು ಕಲಬುರಗಿ ವಿವಿ ಕನ್ನಡ ಆಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್‌.ಟಿ. ಪೋತೆ ಸಂಪಾದಿಸಿದ್ದಾರೆ. ಅಂದು ಸಂಜೆ 5 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವ ರಮೇಶ್‌ಕುಮಾರ್‌ ಪುಸ್ತಕ ಬಿಡುಗಡೆ ಮಾಡುವರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.