ಇಳಕಲ್ಲ ಬಸ್ ನಿಲ್ದಾಣದ ಶೌಚಗೃಹದಲ್ಲೇ ಜನನ!
Team Udayavani, Jul 17, 2017, 4:00 AM IST
ಇಳಕಲ್ಲ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೂಲತಃ ವಿಜಯಪುರ ಜಿಲ್ಲೆಯ ಗಣಿ ಗ್ರಾಮದ ಸಿದ್ದೇಶ ನಗರದ ನಿರ್ಮಲಾ ರಾಮಲಿಂಗಪ್ಪ ಹಡಪದ ದಂಪತಿ ಕೂಲಿ ಕೆಲಸ ಮಾಡಿಕೊಂಡು ಗೋವಾದಲ್ಲಿ ನೆಲೆಸಿದ್ದಾರೆ. ನಿರ್ಮಲಾ 7 ತಿಂಗಳ ಗರ್ಭಿಣಿಯಾಗಿದ್ದು, ಹೆರಿಗೆಗಾಗಿ ತವರುಮನೆಗೆ ಬಸ್ನಲ್ಲಿ ಶನಿವಾರ ರಾತ್ರಿ ಪ್ರಯಾಣ ಬೆಳೆಸಿದ್ದಾರೆ. ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ನಗರಕ್ಕೆ ಬಂದಿಳಿದಿದ್ದರು. ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋದ ನಿರ್ಮಲಾಗೆ ಹೆರಿಗೆ ನೋವು ಕಾಣಿಸಿಕೊಂಡು, ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದಳು. ಇದನ್ನು ಗಮನಿಸಿದ ಮಹಿಳೆಯರು ಸಹಾಯಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ಆ್ಯಂಬುಲೆನ್ಸ್ಗೆ ಕರೆ ಮಾಡಿ, ನಂತರ ಮಗು ಮತ್ತು ತಾಯಿಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಬಳಿಕ ಬಾಣಂತಿ ಹಾಗು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..