ಜೈಲಿನ ಅಕ್ರಮ ಬಯಲಿಗೆಳೆದಿದ್ದ ಕಾರಾಗೃಹ ಡಿಐಜಿ ರೂಪಾ ಎತ್ತಂಗಡಿ
Team Udayavani, Jul 17, 2017, 1:35 PM IST
ಬೆಂಗಳೂರು: ಪರಪ್ಪನ ಅಗ್ರಹಾರದ ಅವ್ಯವಹಾರ ಬಯಲಿಗೆಳೆದಿದ್ದ ಕಾರಾಗೃಹ ಇಲಾಖೆ ಡಿಐಜಿ ರೂಪಾ ಹಾಗೂ ಕಾರಾಗೃಹ ಡಿಜಿಪಿ ಎಚ್.ಎನ್ ಸತ್ಯನಾರಾಯಣ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸುವ ಮೂಲಕ ಇಬ್ಬರು ಐಪಿಎಸ್ ಅಧಿಕಾರಿಗಳ ಜಟಾಪಟಿಗೆ ಬ್ರೇಕ್ ಹಾಕಿದೆ.
ಕಾರಾಗೃಹ ಇಲಾಖೆಯ ಡಿಜಿಪಿ ಎಚ್ ಎನ್ ಸತ್ಯನಾರಾಯಣ ಸೇರಿದಂತೆ ಐವರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ರೂಪಾ ಅವರು ವರದಿ ನೀಡಿದ್ದರು. ಈ ವಿಚಾರದಲ್ಲಿ ಡಿಐಜಿ ರೂಪಾ ಮತ್ತು ಡಿಜಿಪಿ ಸತ್ಯನಾರಾಯಣ ನಡುವೆ ಸಮರ ನಡೆದಿತ್ತು.
ಜುಲೈ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಸತ್ಯನಾರಾಯಣ ರಾವ್ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ. ಮಂಗಳೂರು ಕೋಮುಗಲಭೆ ಹತ್ತಿಕ್ಕುವಲ್ಲಿ ವಿಫಲರಾಗಿದ್ದ ಗುಪ್ತಚರ ಇಲಾಖೆಯ ಡಿಜಿಪಿ ಎಂಎನ್ ರೆಡ್ಡಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
ಎಂಎನ್ ರೆಡ್ಡಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ
ಡಿ ರೂಪಾ ಸಾರಿಗೆ ಸುರಕ್ಷತಾ ವಿಭಾಗ(ಟ್ರಾಫಿಕ್ ಕಮಿಷನರ್)
ಅಮೃತ್ ಪಾಲ್ ಗುಪ್ತಚರ ವಿಭಾಗ ಡಿಜಿಪಿ
ಎನ್ ಎಸ್ ಮೇಘರಿಕ್ – ಕಾರಾಗೃಹದ ಎಡಿಜಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್