ರಜೆನಗದೀಕರಣ ಸೌಲಭ್ಯ ಪಡೆದ ದಿನಗೂಲಿ ನೌಕರರಿಂದ ಹಣವಾಪಸಾತಿಗೆ ಸುತ್ತೋಲೆ


Team Udayavani, Jul 18, 2017, 3:05 AM IST

Udayavani News Logo.png

ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಇಲ್ಲದೇ ಇದ್ದರೂ ಈ ಸೌಲಭ್ಯ ಪಡೆದ ದಿನಗೂಲಿ ನೌಕರರು ಇದೀಗ ತಾವು ಮಾಡಿಕೊಂಡಿರುವ ಗಳಿಕೆ ರಜೆ ನಗದೀಕರಣ ಮೊತ್ತವನ್ನು ಸರಕಾರಕ್ಕೆ ಮರುಪಾವತಿಸಬೇಕಾದ ಪರಿಸ್ಥಿತಿ ಬಂದಿದೆ.ಹೌದು, ಗಳಿಕೆ ರಜೆ ನಗದೀಕರಣವನ್ನು ನಿಯಮ ಬಾಹಿರವಾಗಿ ಮಂಜೂರು ಮಾಡಿರುವ ಪ್ರಕರಣಗಳಲ್ಲಿ, ಮಂಜೂರು ಮಾಡಿ ಹೊರಡಿಸಿರುವ ಆದೇಶವನ್ನು ತತ್‌ಕ್ಷಣ ರದ್ದುಪಡಿಸಬೇಕು ಮತ್ತು ಈಗಾಗಲೇ ಪಾವತಿಸಿರುವ ಆರ್ಥಿಕ ಸೌಲಭ್ಯವನ್ನು ಅಂತಹ ದಿನಗೂಲಿ ನೌಕರರಿಂದ ವಸೂಲಿ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. 

ಮೂಲಗಳ ಪ್ರಕಾರ ಸರಕಾರದ ವಿವಿಧ ಇಲಾಖೆಗಳ ಪೈಕಿ ಒಂದು ಇಲಾಖೆಯಲ್ಲಿ ಮಾತ್ರ ನಿಯಮಾವಳಿ ಮೀರಿ ಸಾಕಷ್ಟು ದಿನಗೂಲಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಒದಗಿಸಿದೆ. ಇದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸರಕಾರ ಗಳಿಕೆ ರಜೆ ನಗದೀಕರಣ ಮಾಡುವಂತಿಲ್ಲ ಎಂಬ ಆದೇಶವನ್ನು ಪುನರುಚ್ಚರಿಸಿ ಈಗಾಗಲೇ ನಗದೀಕರಣ ಮಾಡಿಸಿಕೊಂಡವರಿಂದ ಆ ಹಣ ವಾಸಪ್‌ ಪಡೆಯುವಂತೆ ಸೂಚಿಸಿದೆ ಎನ್ನಲಾಗಿದೆ.

ಏನಿದು ಪ್ರಕರಣ?
ದಿನಗೂಲಿ ನೌಕರರನ್ನು ಖಾಯಂಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗೂಲಿ ನೌಕರರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದ್ದ ರಾಜ್ಯ ಸರಕಾರ, 2014ರಲ್ಲಿ ಅದಕ್ಕೆ ನಿಯಮಾವಳಿ ರೂಪಿಸಿತ್ತು.

ಈ ಅಧಿನಿಯಮದ ಪ್ರಕಾರ ದಿನಗೂಲಿ ನೌಕರರಿಗೆ ನಿವೃತ್ತಿ ವಯಸ್ಸಿನವರೆಗೆ ಸೇವಾ ಭದ್ರತೆ ಒದಗಿಸಲಾಗಿತ್ತು. ಜತೆಗೆ ವರ್ಷಕ್ಕೆ 30 ದಿನಗಳ ಗಳಿಕೆ ರಜೆ ಸೌಲಭ್ಯ ಕಲ್ಪಿಸಲಾಗಿತ್ತು. ಆದರೆ, ದಿನಗೂಲಿ ನೌಕರರು ಗಳಿಕೆ ರಜೆಯನ್ನು ಆಯಾ ವರ್ಷ ತೆಗೆದುಕೊಳ್ಳಲು ಅವಕಾಶವಿತ್ತೇ ಹೊರತು ಅದನ್ನು ನಗದೀಕರಿಸಿಕೊಳ್ಳಲು ಅವಕಾಶ ಇರಲಿಲ್ಲ. ಆದರೂ ಇಲಾಖೆಗಳು ದಿನಗೂಲಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಕಲ್ಪಿಸಿದ್ದವು. ಅಂದರೆ, ವರ್ಷದ 30 ದಿನ ನಿಗದಿಯಾಗಿರುವ ಗಳಿಕೆ ರಜೆಯನ್ನು ಪಡೆಯದಿದ್ದಲ್ಲಿ ಎಷ್ಟು ದಿನ ರಜೆ ಬಾಕಿ ಉಳಿಸಿಕೊಳ್ಳ ಲಾಗಿತ್ತೋ ಅಷ್ಟು ದಿನಗಳ ವೇತನವನ್ನು ದಿನಗೂಲಿ ನೌಕರರಿಗೆ ನೀಡಲಾಗಿತ್ತು. ಆದರೆ, ಇದು ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮಕ್ಕೆ ವ್ಯತಿರಿಕ್ತವಾಗಿದೆ. ಹೀಗಾಗಿ ಗಳಿಕೆ ರಜೆ ನಗದೀಕರಣವನ್ನು ನಿಯಮ ಬಾಹಿರವಾಗಿ ಮಂಜೂರು ಮಾಡಿರುವ ಪ್ರಕರಣಗಳಲ್ಲಿ, ಮಂಜೂರು ಮಾಡಿ ಹೊರಡಿಸಿರುವ ಆದೇಶವನ್ನು ತಕ್ಷಣ ರದ್ದುಪಡಿಸಬೇಕು ಮತ್ತು ಈಗಾಗಲೇ ಪಾವತಿಸಿರುವ ಆರ್ಥಿಕ ಸೌಲಭ್ಯವನ್ನು ಅಂತಹ ದಿನಗೂಲಿ ನೌಕರರಿಂದ ವಸೂಲಿ ಮಾಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಟಾಪ್ ನ್ಯೂಸ್

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.